AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಮಹಿಳಾ ಅಧಿಕಾರಿ ವಿರುದ್ಧ ಕಾಂಗ್ರೆಸ್ ಶಾಸಕನಿಂದ ದ್ವೇಷದ ರಾಜಕಾರಣ ಆರೋಪ! ವರ್ಗಾವಣೆ ದಂಧೆ ನಡೀತಿದ್ಯಾ?

ಒಂದೆಡೆ ಮಹಿಳಾ ಅಧಿಕಾರಿ ವಿರುದ್ಧ ಶಾಸಕ ದ್ವೇಷದ ರಾಜಕಾರಣ ಮಾಡ್ತಿದ್ರೆ, ಮತ್ತೊಂದೆಡೆ ಸದ್ದಿಲ್ಲದೇ ಸರ್ಕಾರದ ಮಟ್ಟದಲ್ಲಿ ವರ್ಗಾವಣೆ ದಂಧೆ ನಡೀತಿದ್ಯಾ ಅನ್ನೋ ಅನುಮಾನ ಹುಟ್ಟಿಸಿದೆ. ತಮ್ಮ ವ್ಯಾಪ್ತಿಗೆ ಬಾರದ ಕ್ಷೇತ್ರಕ್ಕೂ ಕಾಂಗ್ರೆಸ್ ಶಾಸಕರು ಯಾಕೆ ಕೈ ಹಾಕಿದ್ದಾರೆ ಎಂಬುದೇ ಸದ್ಯದ ಪ್ರಶ್ನೆ

ಚಾಮರಾಜನಗರ ಮಹಿಳಾ ಅಧಿಕಾರಿ ವಿರುದ್ಧ ಕಾಂಗ್ರೆಸ್ ಶಾಸಕನಿಂದ ದ್ವೇಷದ ರಾಜಕಾರಣ ಆರೋಪ! ವರ್ಗಾವಣೆ ದಂಧೆ ನಡೀತಿದ್ಯಾ?
ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ವರ್ಗಾವಣೆ ವಿದ್ಯಮಾನದ ಬಗ್ಗೆ ಮಾಹಿತಿ ನೀಡಿದ ನವೀನ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 28, 2023 | 10:56 AM

Share

ಮಹಿಳಾ ಅಧಿಕಾರಿ ಜಾಗಕ್ಕೆ ಮತ್ತೊಬ್ಬರನ್ನು ನಿಯೋಜಿಸುವಂತೆ ಕೈ ಶಾಸಕನೊಬ್ಬ ಸಿಎಂಗೆ ಪತ್ರ ಬರೆದಿದ್ದಾನೆ. ಈ ಪತ್ರ ಇದೀಗಾ ವೈರಲ್ ಆಗಿದ್ದು, ಸದ್ದಿಲ್ಲದೇ ಕಾಂಗ್ರೆಸ್ ಸರ್ಕಾರದಲ್ಲಿ (karnataka government) ವರ್ಗಾವಣೆ ದಂಧೆ (transfer scam) ನಡೀತಿದ್ಯಾ ಅನ್ನೋ ಚರ್ಚೆ ನಡೀತಿದೆ.ಇದೀಗಾ ಮಹಿಳಾ ಅಧಿಕಾರಿ ವಿರುದ್ಧ ಎಲ್ಲೋ ಒಂದು ಕಡೆ ಕಾಂಗ್ರೆಸ್ ಶಾಸಕ ದ್ವೇಷದ ರಾಜಕಾರಣ ಮಾಡ್ತಿರುವ ಆರೋಪ ಕೇಳಿಬಂದಿದೆ.ಈ ಕುರಿತು ಒಂದು ರಿಪೋರ್ಟ್ ನಿಮ್ಮ ಮುಂದೆ. ಹೌದು ಚಾಮರಾಜನಗರ (Chamarajanagar) ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಮಹಿಳಾ ಅಧಿಕಾರಿ ಮೇಲೆ ಗಧಾ ಪ್ರಹಾರ ನಡೆಸ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ತಮ್ಮದಲ್ಲದ ಕ್ಷೇತ್ರಕ್ಕೂ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಕೈ ಹಾಕಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ದ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಶಾಸಕ ಪುಟ್ಟರಂಗಶೆಟ್ಟಿ ಪತ್ರ ಬರೆದಿದ್ದಾರೆ.ಕೆಎಎಸ್ ಅಧಿಕಾರಿ ಮಹೇಶ್ ಜೆ ನಿಯೋಜಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.ಹಿಂದೆ ಚಾಮರಾಜನಗರ ಜಿ.ಪಂ.ಉಪ ಕಾರ್ಯದರ್ಶಿ ಆಗಿದ್ದ ಸರಸ್ವತಿ ಅವರನ್ನು ವರ್ಗಾಯಿಸುವಲ್ಲಿಯೂ ಶಾಸಕರು ಪತ್ರ ಬರೆದಿದ್ದರೆಂಬ ಮಾತು ಕೇಳಿಬಂದಿತ್ತು.

ಇದನ್ನೂ ಓದಿ: ಒಂದೆ ಕುರ್ಚಿಗಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳ ಗುದ್ದಾಟ, ನಾನೇ ಇಲ್ಲಿಯ ಅಧಿಕಾರಿ ಎಂದು ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕುಳಿತ ಅಧಿಕಾರಿಗಳು!

ಇದೀಗಾ ಮತ್ತೇ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯ ಹುದ್ದೆಯಿಂದಲೂ ವರ್ಗಾಯಿಸಲು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.ಜಿ.ಪಂ.ಉಪ ಕಾರ್ಯದರ್ಶಿ ಹುದ್ದೆಯ ವರ್ಗಾವಣೆಯ ಬಳಿಕ ಸದ್ಯ ಸ್ಥಳ ನೀರಿಕ್ಷಣೆಯಲ್ಲಿರುವ ಅಧಿಕಾರಿ ಸರಸ್ವತಿ,ಸದ್ಯ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸ್ತಿದ್ದಾರೆ.ಇದೀಗಾ ಅವರ ವರ್ಗಾವಣೆಗೆ ಶಾಸಕ ಪಟ್ಟು ಹಿಡಿದಿದ್ದಾರೆಂಬ ಮಾತು ಬಂದಿದೆ ಎಂದು ಕನ್ನಡ ಪರ ಹೋರಾಟಗಾರ ನವೀನ್  ತಿಳಿಸಿದ್ದಾರೆ.

ಇನ್ನು ಉತ್ತಮ ಕಾರ್ಯನಿರ್ವಹಣೆ ಮೂಲಕ ಮಹಿಳಾ ಅಧಿಕಾರಿ ಸರಸ್ವತಿ ಜನರ ಮನ ಗೆದ್ದಿದ್ದಾರೆ.ಜಿ.ಪಂ. ಉಪ ಕಾರ್ಯದರ್ಶಿ ಹುದ್ದೆಯಿಂದಷ್ಟೇ ಅಲ್ಲ,ಪ್ರಾಧಿಕಾರದ ಕಾರ್ಯದರ್ಶಿ ಹುದ್ದೆಯಿಂದಲೂ ವರ್ಗಗೊಳಿಸುವಂತೆ ಬರೆದಿರುವ ಪತ್ರದ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.ಶಾಸಕರ ನಡೆಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ತಮ್ಮದಲ್ಲದ ಹನೂರು ಕ್ಷೇತ್ರದ ವ್ಯಾಪ್ತಿಗೂ ಶಾಸಕ ಪುಟ್ಟರಂಗಶೆಟ್ಟಿ ಮೂಗು ತೂರಿಸ್ತಿರೋದ್ರಿಂದ ತಮ್ಮ ಕ್ಷೇತ್ರದ ಕೆಲಸದ ಬಗ್ಗೆ ಗಮನಹರಿಸಿ ಅನ್ನೋ ಮಾತು ಕೇಳಿಬರ್ತಿದೆ.ಹಿಂದೆಯೂ ಕೂಡ ಅಧಿಕಾರಿ ವಿರುದ್ಧ ವೈಯಕ್ತಿಕ ದ್ವೇಷವಿತ್ತು,ಆಗಲೂ ಕೂಡ ಸಮಾಜ ಕಲ್ಯಾಣ ಇಲಾಖೆ ಡಿಡಿಯಾಗಿದ್ದ ಸರಸ್ವತಿಯನ್ನು ಶಾಸಕರು ವರ್ಗಾಯಿಸಿದರೆಂಬ ಆರೋಪವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ