AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕಾಂಗ್ರೆಸ್ ಯುವ ಮುಖಂಡನಿಗೆ ಚಾಕು ಇರಿತ, ಆಗಿದ್ದೇನು?

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಯುವ ಮುಖಂಡನಿಗೆ ವ್ಯಕ್ತಿಯೋರ್ವ ಚಾಕುವಿನಿಂದ ಇರಿದಿರುವಂತಹ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಚಾಕು ಇರಿಯಲಾಗಿದೆ. ಸದ್ಯ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.

ಚಾಮರಾಜನಗರ: ಕಾಂಗ್ರೆಸ್ ಯುವ ಮುಖಂಡನಿಗೆ ಚಾಕು ಇರಿತ, ಆಗಿದ್ದೇನು?
ಹಲ್ಲೆಗೊಳಗಾದ ಕಾಂಗ್ರೆಸ್​ ಮುಖಂಡ
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 03, 2025 | 3:17 PM

Share

ಚಾಮರಾಜನಗರ, ಡಿಸೆಂಬರ್​ 03: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ಕಾಂಗ್ರೆಸ್ (Congress) ಯುವ ಮುಖಂಡನಿಗೆ ಚಾಕುವಿನಿಂದ ಇರಿದಿರುವಂತಹ (stabbed) ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿಯಲ್ಲಿ ನಡೆದಿದೆ. ತೇರಂಬಳ್ಳಿ ಗ್ರಾಮದ ರಾಜಣ್ಣ ಎಂಬ ವ್ಯಕ್ತಿಯಿಂದ ಕೈ ಮುಖಂಡ ಸುನೀಲ್​ಗೆ ಚಾಕು ಇರಿಯಲಾಗಿದೆ. ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಉಂಟಾಗಿದೆ. ಈ ವೇಳೆ ರಾಜಣ್ಣ ಎಂಬುವವರು ಸುನೀಲ್​​ಗೆ ಚಾಕುವಿನಿಂದ ಇರಿದಿದ್ದಾರೆ. ಚಾಕುವಿನಿಂದ ಇರಿದ ಹಿನ್ನಲೆ ರಕ್ತಸ್ರಾವ ಉಂಟಾಗಿ ಸುನೀಲ್​​ ಅಸ್ವಸ್ಥರಾಗಿದ್ದಾರೆ. ಕೂಡಲೇ ಗಾಯಾಳು ಸುನೀಲ್​ನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಯುವಕನ ಮೇಲೆ ತಲ್ವಾರ್​ನಿಂದ ಇರಿದು ಹಲ್ಲೆ

ಇತ್ತೀಚೆಗೆ ಗದಗ ನಗರದ ಮುಳಗುಂದ ನಾಕಾದಲ್ಲಿರುವ ದುರ್ಗಾ ಬಾರ್ ಎದುರು, ಯುವಕನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿತ್ತು. ಬಾರ್​ನಲ್ಲಿ ಕುಡಿಯೋದಕ್ಕೆ ಕೂತಿದ್ದ ಅರುಣ್ ಕುಮಾರ್ ಕೋಟೆಕಲ್ ಎಂಬ ಯುವಕನ ಮೇಲೆ, ದಾಸರ ಓಣಿಯ ಮುಸ್ತಾಕ್, ಸಾಹಿಲ್, ಅಭಿಷೇಕ್ ಅನ್ನೋ ಯುವಕರು ಹಲ್ಲೆ ಮಾಡಿದ್ದರು. ಹತ್ತಾರು ಜನರ ಎದುರೇ ತಲ್ವಾರ್, ಬಿಯರ್ ಬಾಟಲ್​ನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.

ಇದನ್ನೂ ಓದಿ: ಮೂವರು ಮಕ್ಕಳ ತಾಯಿಯ ಡೆಡ್ಲಿ ಮರ್ಡರ್​​: ಪ್ರಾಣಕ್ಕೆ ಸಂಚು ತಂತಾ ಲವ್ವಿಡವ್ವಿ?

ಇನ್ನು ಘಟನೆಯಲ್ಲಿ ಅರುಣ್ ಕುಮಾರ್​​ನ ಕತ್ತು, ಮುಖ, ತಲೆ, ಹೊಟ್ಟೆ, ಎದೆ, ಕೈ ಸೇರಿ ದೇಹದ ಭಾಗಗಳಿಗೆ 25ಕ್ಕೂ ಹೆಚ್ಚು ಇರಿತದ ಗಾಯಗಳಾಗಿದ್ದವು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಡಿವೈಎಸ್​ಪಿ ಮುರ್ತುಜಾ ಖಾದ್ರಿ, ಶಹರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಎಲ್ ಕೆ ಜೂಲಕಟ್ಟಿ ಆ್ಯಂಡ್ ಟೀಮ್ ಪರಿಶೀಲನೆ ಮಾಡಿದ್ದರು. ಜೊತೆಗೆ ಗಾಯಾಳುವನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಹಲ್ಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ 

ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಭೀಕರ ಕೊಲೆ ಮಾಡಿರುವಂತಹ ಘಟನೆ ಹೊಸೂರು ಸಮೀಪದ ಮಾರಸಂದಿರಂ ಗ್ರಾಮದಲ್ಲಿ ನಡೆದಿದೆ. ಹಳೆ ದ್ವೇಷ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೈಕ್ ಅಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ಅನುಮಾನ ವ್ಯಕ್ತಪಡಿಸಲಾಗಿದೆ. ಕೊಲೆಯಾದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಾಲ್ಗೆರೆ ಗ್ರಾಮದ ಯೊಗೀಶ್(31) ಮೃತ ವ್ಯಕ್ತಿ. ಅಡಿಕೆ ಕಟಾವು ವೇಳೆ ಆಕಸ್ಮಿಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು ಸಂಭವಿಸಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ