AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ತಪ್ಪಾದ ಚಿಕಿತ್ಸೆಯಿಂದ ಜೀವಂತ ಶವವಾದ ವೃದ್ಧೆ: ದಂತ ವೈದ್ಯನಿಗೆ 9 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್​

ದಂತ ವೈದ್ಯನ ತಪ್ಪಾದ ಚಿಕಿತ್ಸೆಯಿಂದ ಚಾಮರಾಜನಗರದ ವೃದ್ಧೆಯೊಬ್ಬರು ಜೀವಂತ ಶವದರೀತಿಯಾಗಿದ್ದಾರೆ. ಹೌದು ಚಾಮರಾಜನಗರದ ರಥದ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್​​ಗೆ ಹೋದ ವದ್ಧೆಗೆ ವೈದ್ಯ ಹೆಚ್ಚಿನ ಡೋಸೆಜ್ ಅನಸ್ಥೇಶಿಯಾ ಇಂಜೆಕ್ಷನ್​​ ನೀಡಿದ ಪರಿಣಾಮ ದೇಹದ ಎಡಭಾಗಕ್ಕೆ ಸ್ವಾಧೀನ ಇಲ್ಲದಂತಾಗಿದೆ.

ಚಾಮರಾಜನಗರ: ತಪ್ಪಾದ ಚಿಕಿತ್ಸೆಯಿಂದ ಜೀವಂತ ಶವವಾದ ವೃದ್ಧೆ: ದಂತ ವೈದ್ಯನಿಗೆ 9 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್​
ಡಾ. ಮಂಜುನಾಥ (ಎಡಚಿತ್ರ) ವುದ್ಧೆ ಸುಕನ್ಯ (ಬಲಚಿತ್ರ)
Shivaraj
| Edited By: ವಿವೇಕ ಬಿರಾದಾರ|

Updated on:Oct 06, 2023 | 3:11 PM

Share

ಚಾಮರಾಜನಗರ ಅ.06: ದಂತ ವೈದ್ಯನ (Dental Doctor) ತಪ್ಪಾದ ಚಿಕಿತ್ಸೆಯಿಂದ ಚಾಮರಾಜನಗರದ (Chamarajnagar) ವೃದ್ಧೆಯೊಬ್ಬರು ಜೀವಂತ ಶವದರೀತಿಯಾಗಿದ್ದಾರೆ. ಹೌದು ಚಾಮರಾಜನಗರ ನಗರ ನಿವಾಸಿಯಾಗಿರುವ ವೃದ್ಧೆ ಸುಕನ್ಯ ಅವರು 2021ರ ಫೆಬ್ರವರಿ 3 ನೇ ತಾರೀಖಿನಂದಯ ಹಲ್ಲು ನೋವಿನ ಚಿಕಿತ್ಸೆ ಪಡೆಯಲು ಚಾಮರಾಜನಗರದ ರಥದ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್​​ಗೆ ಹೋಗಿದ್ದರು. ದಂತ ವೈದ್ಯ ಹೆಚ್.ಎಸ್ ಮಂಜುನಾಥ್ ಸುಕನ್ಯರಿಗೆ ರೂಟ್ ಕೆನಲ್ ಚಿಕಿತ್ಸೆ ನೀಡುವ ಸಲುವಾಗಿ ಎಡ ದವಡೆಗೆ ಮರಗಟ್ಟುವ ಅನಸ್ಥೇಶಿಯಾ ಇಂಜೆಕ್ಷನ್ ನೀಡಿದ್ದನು.

ಅನಸ್ಥೇಶಿಯಾ ಇಂಜೆಕ್ಷನ್​​ನ ಡೋಸೆಜ್ ಹೆಚ್ಚಾದ ಪರಿಣಾಮ ವೃದ್ಧೆ ಸುಕನ್ಯ ಸ್ಥಳದಲ್ಲೇ ಕುಸಿದು ಬಿದ್ದು 20 ದಿನ ಕೋಮಗೆ ಜಾರಿದ್ದರು. ಕೋಮದಿಂದ ಹೊರಬಂದ ಬಳಿಕ ಸುಕನ್ಯ ಅವರು ದೇಹದ ಎಡಭಾಗ ಸಂಪೂರ್ಣ ಸ್ವಾಧೀನ ಕಳೆದುಕೊಂಡಿದ್ದಾರೆ. ಎಡಭಾಗ ಸ್ವಾಧೀನ ಕಳೆದುಕೊಂಡ ಸುಕನ್ಯ ಕಳೆದ ಎರಡುವರೆ ವರ್ಷದಿಂದ ಮಾಡದ ತಪ್ಪಿಗೆ ನೋವು ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: ಗುರುತಿನ ಚೀಟಿ ವಿಚಾರಕ್ಕೆ ಕಂಡಕ್ಟರ್ ಜೊತೆ ಮಾತಿನ ಚಕಮಕಿ: ದಂತ ವೈದ್ಯ ವಿದ್ಯಾರ್ಥಿ ವಿರುದ್ಧ ಎಫ್​ಐಆರ್

ಇನ್ನು ತಾಯಿಗೆ ಹೀಗಾಗುತ್ತಿದ್ದಂತೆ ಸುಕನ್ಯರ ಪುತ್ರ ಸುಮನ್ ಗಿರಿಜಾ ಡೆಂಟಲ್ ಕೇರ್​ನ ವೈದ್ಯ ಮಂಜುನಾಥ್ ವಿರುದ್ಧ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಈಗ ಒಂದುವರೆ ವರ್ಷದ ಬಳಿಕ ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದ್ದು, ವೈದ್ಯನಿಗೆ 9 ಲಕ್ಷದ 24 ಸಾವಿರ 605 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಆದರೆ ಸುಕನ್ಯ ಖರ್ಚು ಮಾಡಿದ್ದು ಮಾತ್ರ 15 ರಿಂದ 20 ಲಕ್ಷ ರೂ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Fri, 6 October 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ