Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ತಪ್ಪಾದ ಚಿಕಿತ್ಸೆಯಿಂದ ಜೀವಂತ ಶವವಾದ ವೃದ್ಧೆ: ದಂತ ವೈದ್ಯನಿಗೆ 9 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್​

ದಂತ ವೈದ್ಯನ ತಪ್ಪಾದ ಚಿಕಿತ್ಸೆಯಿಂದ ಚಾಮರಾಜನಗರದ ವೃದ್ಧೆಯೊಬ್ಬರು ಜೀವಂತ ಶವದರೀತಿಯಾಗಿದ್ದಾರೆ. ಹೌದು ಚಾಮರಾಜನಗರದ ರಥದ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್​​ಗೆ ಹೋದ ವದ್ಧೆಗೆ ವೈದ್ಯ ಹೆಚ್ಚಿನ ಡೋಸೆಜ್ ಅನಸ್ಥೇಶಿಯಾ ಇಂಜೆಕ್ಷನ್​​ ನೀಡಿದ ಪರಿಣಾಮ ದೇಹದ ಎಡಭಾಗಕ್ಕೆ ಸ್ವಾಧೀನ ಇಲ್ಲದಂತಾಗಿದೆ.

ಚಾಮರಾಜನಗರ: ತಪ್ಪಾದ ಚಿಕಿತ್ಸೆಯಿಂದ ಜೀವಂತ ಶವವಾದ ವೃದ್ಧೆ: ದಂತ ವೈದ್ಯನಿಗೆ 9 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್​
ಡಾ. ಮಂಜುನಾಥ (ಎಡಚಿತ್ರ) ವುದ್ಧೆ ಸುಕನ್ಯ (ಬಲಚಿತ್ರ)
Follow us
Shivaraj
| Updated By: ವಿವೇಕ ಬಿರಾದಾರ

Updated on:Oct 06, 2023 | 3:11 PM

ಚಾಮರಾಜನಗರ ಅ.06: ದಂತ ವೈದ್ಯನ (Dental Doctor) ತಪ್ಪಾದ ಚಿಕಿತ್ಸೆಯಿಂದ ಚಾಮರಾಜನಗರದ (Chamarajnagar) ವೃದ್ಧೆಯೊಬ್ಬರು ಜೀವಂತ ಶವದರೀತಿಯಾಗಿದ್ದಾರೆ. ಹೌದು ಚಾಮರಾಜನಗರ ನಗರ ನಿವಾಸಿಯಾಗಿರುವ ವೃದ್ಧೆ ಸುಕನ್ಯ ಅವರು 2021ರ ಫೆಬ್ರವರಿ 3 ನೇ ತಾರೀಖಿನಂದಯ ಹಲ್ಲು ನೋವಿನ ಚಿಕಿತ್ಸೆ ಪಡೆಯಲು ಚಾಮರಾಜನಗರದ ರಥದ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್​​ಗೆ ಹೋಗಿದ್ದರು. ದಂತ ವೈದ್ಯ ಹೆಚ್.ಎಸ್ ಮಂಜುನಾಥ್ ಸುಕನ್ಯರಿಗೆ ರೂಟ್ ಕೆನಲ್ ಚಿಕಿತ್ಸೆ ನೀಡುವ ಸಲುವಾಗಿ ಎಡ ದವಡೆಗೆ ಮರಗಟ್ಟುವ ಅನಸ್ಥೇಶಿಯಾ ಇಂಜೆಕ್ಷನ್ ನೀಡಿದ್ದನು.

ಅನಸ್ಥೇಶಿಯಾ ಇಂಜೆಕ್ಷನ್​​ನ ಡೋಸೆಜ್ ಹೆಚ್ಚಾದ ಪರಿಣಾಮ ವೃದ್ಧೆ ಸುಕನ್ಯ ಸ್ಥಳದಲ್ಲೇ ಕುಸಿದು ಬಿದ್ದು 20 ದಿನ ಕೋಮಗೆ ಜಾರಿದ್ದರು. ಕೋಮದಿಂದ ಹೊರಬಂದ ಬಳಿಕ ಸುಕನ್ಯ ಅವರು ದೇಹದ ಎಡಭಾಗ ಸಂಪೂರ್ಣ ಸ್ವಾಧೀನ ಕಳೆದುಕೊಂಡಿದ್ದಾರೆ. ಎಡಭಾಗ ಸ್ವಾಧೀನ ಕಳೆದುಕೊಂಡ ಸುಕನ್ಯ ಕಳೆದ ಎರಡುವರೆ ವರ್ಷದಿಂದ ಮಾಡದ ತಪ್ಪಿಗೆ ನೋವು ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: ಗುರುತಿನ ಚೀಟಿ ವಿಚಾರಕ್ಕೆ ಕಂಡಕ್ಟರ್ ಜೊತೆ ಮಾತಿನ ಚಕಮಕಿ: ದಂತ ವೈದ್ಯ ವಿದ್ಯಾರ್ಥಿ ವಿರುದ್ಧ ಎಫ್​ಐಆರ್

ಇನ್ನು ತಾಯಿಗೆ ಹೀಗಾಗುತ್ತಿದ್ದಂತೆ ಸುಕನ್ಯರ ಪುತ್ರ ಸುಮನ್ ಗಿರಿಜಾ ಡೆಂಟಲ್ ಕೇರ್​ನ ವೈದ್ಯ ಮಂಜುನಾಥ್ ವಿರುದ್ಧ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಈಗ ಒಂದುವರೆ ವರ್ಷದ ಬಳಿಕ ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದ್ದು, ವೈದ್ಯನಿಗೆ 9 ಲಕ್ಷದ 24 ಸಾವಿರ 605 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಆದರೆ ಸುಕನ್ಯ ಖರ್ಚು ಮಾಡಿದ್ದು ಮಾತ್ರ 15 ರಿಂದ 20 ಲಕ್ಷ ರೂ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Fri, 6 October 23

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ