AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇನು ಕೆರೆ ಅಂಗಳವೋ, ಕ್ರೀಡಾಂಗಣವೋ… ಚಾಮರಾಜನಗರ ಅಂಬೇಡ್ಕರ್ ಕ್ರೀಡಾಂಗಣ ಅವ್ಯವಸ್ಥೆಗಳ ಆಗರವಾಗಿದೆ

Dr Br Ambedkar Stadium, Chamarajanagar: ಟ್ರ್ಯಾಕ್ ನಲ್ಲಿ ಬಿದ್ದಿರುವ ಕಲ್ಲು, ಪ್ಲಾಸ್ಟಿಕ್ ಬಾಟಲ್ ಗಳು. ಅಲ್ಲಲ್ಲಿ ಬಿದ್ದಿರುವ ಗುಂಡಿಗಳು. ಇದನ್ನ ಕೆರೆ ಅಂಗಳ ಅಂತ ಕರಿ ಬೇಕಾ ಇಲ್ಲಾ ಕ್ರೀಡಾಂಗಣ ಅಂತ ಹೇಳ್ಬೇಕ ಎಂದು ಪ್ರಶ್ನೆ ಮಾಡುತ್ತಿರುವ ಕ್ರೀಡಾಪಟುಗಳು. ಹೌದು ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಗಡಿನಾಡು ಚಾಮರಾಜನಗರದಲ್ಲಿ, ನಗರದ ಅಂಬೇಡ್ಕರ್ ಕ್ರೀಡಾಂಗಣದ ದುಃಸ್ಥಿತಿ ಇದು.

ಇದೇನು ಕೆರೆ ಅಂಗಳವೋ, ಕ್ರೀಡಾಂಗಣವೋ... ಚಾಮರಾಜನಗರ ಅಂಬೇಡ್ಕರ್ ಕ್ರೀಡಾಂಗಣ ಅವ್ಯವಸ್ಥೆಗಳ ಆಗರವಾಗಿದೆ
ಇದೇನು ಕೆರೆ ಅಂಗಳವೋ, ಕ್ರೀಡಾಂಗಣವೋ... ಚಾಮರಾಜನಗರ ಅಂಬೇಡ್ಕರ್ ಕ್ರೀಡಾಂಗಣ ಅವ್ಯವಸ್ಥೆಗಳ ಆಗರವಾಗಿದೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 30, 2023 | 12:23 PM

Share

22ಕೋಟಿ ವೆಚ್ಚದ ಜಿಲ್ಲಾ ಕ್ರೀಡಾಂಗಣ ಈಗ ಅವ್ಯವಸ್ಥೆಗಳ ಆಗರವಾಗಿದೆ. ದಿನ ನಿತ್ಯ ಕ್ರೀಡಾಪಟುಗಳು (Sports Persons) ಒಂದಲ್ಲಾ ಒಂದು ಸಮಸ್ಯೆ ಎದುರಿಸುವಂತಾಗಿದೆ. ಈ ಕುರಿತು ಕ್ರೀಡಾಪಟುಗಳು ಹೇಳಿದ್ದಾದ್ರು ಏನು ಅಂತೀರಾ ಈ ಸ್ಟೋರಿ ನೋಡಿ. ಟ್ರ್ಯಾಕ್ ನಲ್ಲಿ ಬಿದ್ದಿರುವ ಕಲ್ಲು, ಪ್ಲಾಸ್ಟಿಕ್ ಬಾಟಲ್ ಗಳು. ಅಲ್ಲಲ್ಲಿ ಬಿದ್ದಿರುವ ಗುಂಡಿಗಳು. ಇದನ್ನ ಕೆರೆ ಅಂಗಳ ಅಂತ ಕರಿ ಬೇಕಾ ಇಲ್ಲಾ ಕ್ರೀಡಾಂಗಣ ಅಂತ ಹೇಳ್ಬೇಕ ಎಂದು ಪ್ರಶ್ನೆ ಮಾಡುತ್ತಿರುವ ಕ್ರೀಡಾಪಟುಗಳು. ಹೌದು ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಗಡಿನಾಡು ಚಾಮರಾಜನಗರದಲ್ಲಿ, ನಗರದ ಅಂಬೇಡ್ಕರ್ ಕ್ರೀಡಾಂಗಣದ ದುಃಸ್ಥಿತಿ ಇದು (Dr Br Ambedkar Stadium in Chamarajanagar).

22 ಕೋಟಿ ಬಡ್ಜೆಟ್ ಈ ಕ್ರೀಡಾಂಗಣದ್ದು. ಕೋಟಿ ಕೋಟಿ ಹಣ ಬಿಡುಗಡೆ ಮಾಡಿದ್ರು ಸೂಕ್ತ ಕ್ರೀಡಾಂಗಣ ನಿರ್ಮಾಣ ಆಗಿಲ್ಲ. ಸಿಂಥಟಿಕ್ ಟ್ರ್ಯಾಕ್ ಇಲ್ಲದೆ ಸ್ವಿಮ್ಮಿಂಗ್ ಪೂಲ್ ಸರಿಯಾಗಿ ನಿರ್ಮಿಸದೆ, ಬೇಕಾಬಿಟ್ಟಿಯಾಗಿ ಕಳಪೆ ಕಾಮಗಾರಿ ಮಾಡಲಾಗಿದೆ. ಈ ಕುರಿತು ಕ್ರೀಡಾಪಟುಗಳು ಎಷ್ಟೇ ಕಂಪ್ಲೆಂಟ್ ಮಾಡಿದ್ರು ಜಿಲ್ಲಾಡಳಿತ ಕ್ಯಾರೆ ಅನ್ನದೆ ಇರುವುದು ನಿಜಕ್ಕೂ ದುರಂತ.

ವಿಚಿತ್ರ ಅಂದ್ರೆ ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕ್ರೀಡೆಗಳು ನಡೆಯದೆ ಬರಿ ರಾಜಕೀಯ ಸಮಾವೇಶಗಳು, ಸರ್ಕಾರಿ ಕಾರ್ಯಕ್ರಮಗಳು, ಎಕ್ಸಿಬಿಷನ್ ಗಳು ನಡೆದಿದ್ದೆ ಹೆಚ್ಚು. ಜಿಲ್ಲಾಡಳಿತ ಇದನ್ನ ಕ್ರೀಡಾಂಗಣ ಎಂದು ಪರಿಗಣನೆಗೆ ತೆಗೆದು ಕೊಳ್ಳದೆ ಸಮಾವೇಶ ನಡೆಸೊ ಸಭಾಂಗಣದಂತೆ ಬಳಸಿಕೊಳ್ಳುತ್ತಿರುವುದಕ್ಕೆ ಸಾರ್ವಜನಿಕರು ಭಾರಿ ಆಕ್ರೋಶವನ್ನ ವ್ಯಕ್ತಪಡಿಸುತ್ತಿದ್ದಾರೆ. 2002 ರಲ್ಲಿ ಸಿಂಥಟಿಕ್ ಟ್ರ್ಯಾಕ್ ನಿರ್ಮಾಣ ಕಾರ್ಯ ಆರಂಭವಾಗಿ 2005ರಲ್ಲಿ ಪೂರ್ಣ ಗೊಳ್ಳಬೇಕಿತ್ತು. ಆದ್ರೆ ಇನ್ನೂ ಟ್ರ್ಯಾಕ್ ನಿರ್ಮಾಣ ಮಾಡದೆ ಇರುವುದು ಅವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.

ಒಟ್ಟಾರೆ ಕ್ರೀಡಾಪಟುಗಳು ಸರಿಯಾದ ಪ್ರಾಕ್ಟೀಸ್ ಮಾಡಲಾಗದೆ ಪರಿತಪ್ಪಿಸುತ್ತಿದ್ದು ಬೇರೆಡೆ ಹೋಗಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಆದಷ್ಟು ಬೇಗ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕಲ್ಪಿಸಿ ಕ್ರೀಡಾಪಟುಗಳಿಗೆ ಅನುಕೂಲ ಮಾಡಿ ಕೊಡಲೆಂಬುದು ಸ್ಥಳೀಯರ ಆಶಯ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?