AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: 900ಕ್ಕೂ ಹೆಚ್ಚು ರಾಸುಗಳು ಸಾವು

ಚಾಮರಾಜನಗರ ಜಿಲ್ಲೆಯಲ್ಲಿ ಪಶು ವೈದ್ಯರ ತೀವ್ರ ಕೊರತೆ ಉಂಟಾಗಿದ್ದು, ಕಳೆದ ಒಂದುವರೆ ವರ್ಷದಲ್ಲಿ 900ಕ್ಕೂ ಹೆಚ್ಚು ರಾಸುಗಳು ಸಾವನ್ನಪ್ಪಿವೆ. ಇನ್ನು ಇಡೀ ಜಿಲ್ಲೆಯಲ್ಲಿ ಕೇವಲ 10 ಪಶು ವೈದ್ಯರಿದ್ದಾರೆ. ಸರ್ಕಾರದ ನಿರ್ಲಕ್ಷ್ಯಕ್ಕೆ ರೈತರು ಖಾಸಗಿ ವೈದ್ಯರ ಮೊರೆ ಹೋಗುವಂತಾಗಿದ್ದು, ಆರ್ಥಿಕ ಹೊರೆ ಹೆಚ್ಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: 900ಕ್ಕೂ ಹೆಚ್ಚು ರಾಸುಗಳು ಸಾವು
ಪಶು ವೈದ್ಯಕೀಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: May 16, 2025 | 1:12 PM

Share

ಚಾಮರಾಜನಗರ, ಮೇ 16: ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ (Veterinary Doctors) ಸಮಸ್ಯೆ ಕಾಡುತ್ತಿದೆ. ಪರಿಣಾಮ ಕಳೆದ ಒಂದುವರೆ ವರ್ಷದಲ್ಲಿ ಬರೋಬ್ಬರಿ 900ಕ್ಕೂ ಹೆಚ್ಚು ರಾಸುಗಳು ಸಾವನ್ನಪ್ಪಿವೆ (death). ಅಸಲಿಗೆ ಪಶು ವೈದ್ಯರ ಸಮಸ್ಯೆಯಾಗಲು ಕಾರಣವೇನು? ಪಶು ವೈದ್ಯರ ಸಮಸ್ಯೆಯಿಂದ ರೈತರಿಗೆ ಉಂಟಾಗುತ್ತಿರುವ ಸಮಸ್ಯೆ ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಿಲ್ಲೆಯಲ್ಲಿ ಕೇವಲ 10 ಮಂದಿ ಪಶು ವೈದ್ಯರು

ಗಡಿ ನಾಡು ಚಾಮರಾಜನಗರ ಜಿಲ್ಲಾದ್ಯಂತ ಪಶು ವೈದ್ಯರ ಸಮಸ್ಯೆ ಕಾಡುತ್ತಿದೆ. ಕೇವಲ ಜಿಲ್ಲೆಯಲ್ಲಿ ಇರುವುದು 10 ಮಂದಿ ಪಶು ವೈದ್ಯರು ಅಂದ್ರೆ ನಂಬಲೇಬೇಕು. ದುರಂತ ಅಂದರೆ ಪಶುಸಂಗೋಪನಾ ಸಚಿವರ ಕೆ.ವೆಂಕಟೇಶ್, ಇದೆ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರು ಕೂಡ ಹೌದು. ಇಂತ ಉಸ್ತುವಾರಿಗಳ ಜಿಲ್ಲೆಯಲ್ಲೇ ಈ ರೀತಿಯಾದರೆ ಇನ್ನು ಬೇರೆ ಜಿಲ್ಲೆಗಳ ಕಥೆ ಏನೆಂದು ಜನ ಸಾಮಾನ್ಯರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

ಇದನ್ನೂ ಓದಿ
Image
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Image
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
Image
ಬಂಡೀಪುರ ಸಫಾರಿಗೆ ಹೋಗುವ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದ ಅರಣ್ಯ ಇಲಾಖೆ
Image
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ

ಇನ್ನು ಕಳೆದ ಒಂದುವರೆ ವರ್ಷದಲ್ಲಿ ಬರೋಬ್ಬರಿ 900ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಇದಕ್ಕೆ ಕಾರಣವೇನು ಎಂದು ನೋಡುವುದಾದರೆ, ಸೂಕ್ತ ಸಮಯದಲ್ಲಿ ಲಸಿಕೆ, ಚುಚ್ಚುಮದ್ದುಗಳು ನೀಡಲು ಸಾಧ್ಯವಾಗದಿರುವುದು ಎಂದು ರೈತರು ಹೇಳುತ್ತಿದ್ದಾರೆ. ಪಶುವೈದ್ಯರ ಸಮಸ್ಯೆಯಿಂದ ರೈತ ವರ್ಗ, ಖಾಸಗಿ ವೈದ್ಯರು ಹಾಗೂ ಖಾಸಗಿ ಕ್ಲಿನಿಕ್​​ಗಳ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಉಂಟಾಗಿದೆ.

ಒಂದು ರಾಸುಗೆ ತಿಂಗಳಿಗೆ ಖಾಸಗಿಯಲ್ಲಿ ಚಿಕಿತ್ಸೆ, ಲಸಿಕೆ ಕೊಡಿಸಿದರೆ, ಕನಿಷ್ಠ 5 ಸಾವಿರ ರೂ. ಹಣ ಖರ್ಚಾಗುತ್ತೆ. ಹಾಗಾಗಿ ಆದಷ್ಟು ಬೇಗ ಪಶು ವೈದ್ಯರನ್ನ ನೇಮಕ ಮಾಡಿ ಎಂದು ರೈತರು ಆಗ್ರಹಿಸುತ್ತಿದ್ದಾರೆ. ಇನ್ನು ನೇಮಕಾತಿ ವಿಚಾರದಲ್ಲಿ ಸರ್ಕಾರ ಉದಾಸೀನ ತೊರುತ್ತಿದೆ. ಇದರ ಜೊತೆಗೆ ಖಾಸಗಿ ವಲಯಕ್ಕೆ ಹೊಲಿಕೆ ಮಾಡ್ಕೊಂಡ್ರೆ ಸರ್ಕಾರಿ ವೈದ್ಯರ ವೇತನ ಕಡಿಮೆ, ಜೊತೆಗೆ ಸುಸಜ್ಜಿತ ಕಟ್ಟಡವಿಲ್ಲ, ಮೂಲಭೂತ ಸೌಕರ್ಯದ ಕೊರತೆ, ಹೀಗೆ ಎಲ್ಲಾ ಕಾರಣದಿಂದಾಗಿ ಸರ್ಕಾರಿ ಪಶು ವೈದ್ಯರಾಗಲು ಈಗಿನ ವೈದ್ಯರು ಮುಂದಾಗುತ್ತಿಲ್ಲ ಎಂಬ ಮಾತು ಸಹ ಕೇಳಿ ಬರುತ್ತಿದೆ.

ಇದನ್ನೂ ಓದಿ: ಬಂಡೀಪುರ ಸಫಾರಿಗೆ ಹೋಗುವ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದ ಅರಣ್ಯ ಇಲಾಖೆ

ಅದೇನೆ ಹೇಳಿ ಒಂದೆಡೆ ಪಶು ವೈದ್ಯರ ಸಮಸ್ಯೆ, ಮತ್ತೊಂದೆಡೆ ಔಷಧದ ಅಭಾದತೆ, ಮತ್ತೊಂದೆಡೆ 900 ಕ್ಕೂ ಹೆಚ್ಚು ರಾಸುಗಳ ಮರಣ ಮೃದಂಗ, ಈ ಎಲ್ಲದರಿಂದ ಅನ್ನದಾತರು ರೋಸಿ ಹೋಗಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಮತ್ತು ಪಶುಸಂಗೋಪನಾ ಇಲಾಖೆ ಈ ಸಮಸ್ಯೆಯನ್ನ ಆದಷ್ಟು ಬೇಗ ಬಗೆಹರಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ