AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: 900ಕ್ಕೂ ಹೆಚ್ಚು ರಾಸುಗಳು ಸಾವು

ಚಾಮರಾಜನಗರ ಜಿಲ್ಲೆಯಲ್ಲಿ ಪಶು ವೈದ್ಯರ ತೀವ್ರ ಕೊರತೆ ಉಂಟಾಗಿದ್ದು, ಕಳೆದ ಒಂದುವರೆ ವರ್ಷದಲ್ಲಿ 900ಕ್ಕೂ ಹೆಚ್ಚು ರಾಸುಗಳು ಸಾವನ್ನಪ್ಪಿವೆ. ಇನ್ನು ಇಡೀ ಜಿಲ್ಲೆಯಲ್ಲಿ ಕೇವಲ 10 ಪಶು ವೈದ್ಯರಿದ್ದಾರೆ. ಸರ್ಕಾರದ ನಿರ್ಲಕ್ಷ್ಯಕ್ಕೆ ರೈತರು ಖಾಸಗಿ ವೈದ್ಯರ ಮೊರೆ ಹೋಗುವಂತಾಗಿದ್ದು, ಆರ್ಥಿಕ ಹೊರೆ ಹೆಚ್ಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: 900ಕ್ಕೂ ಹೆಚ್ಚು ರಾಸುಗಳು ಸಾವು
ಪಶು ವೈದ್ಯಕೀಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: May 16, 2025 | 1:12 PM

Share

ಚಾಮರಾಜನಗರ, ಮೇ 16: ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ (Veterinary Doctors) ಸಮಸ್ಯೆ ಕಾಡುತ್ತಿದೆ. ಪರಿಣಾಮ ಕಳೆದ ಒಂದುವರೆ ವರ್ಷದಲ್ಲಿ ಬರೋಬ್ಬರಿ 900ಕ್ಕೂ ಹೆಚ್ಚು ರಾಸುಗಳು ಸಾವನ್ನಪ್ಪಿವೆ (death). ಅಸಲಿಗೆ ಪಶು ವೈದ್ಯರ ಸಮಸ್ಯೆಯಾಗಲು ಕಾರಣವೇನು? ಪಶು ವೈದ್ಯರ ಸಮಸ್ಯೆಯಿಂದ ರೈತರಿಗೆ ಉಂಟಾಗುತ್ತಿರುವ ಸಮಸ್ಯೆ ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಿಲ್ಲೆಯಲ್ಲಿ ಕೇವಲ 10 ಮಂದಿ ಪಶು ವೈದ್ಯರು

ಗಡಿ ನಾಡು ಚಾಮರಾಜನಗರ ಜಿಲ್ಲಾದ್ಯಂತ ಪಶು ವೈದ್ಯರ ಸಮಸ್ಯೆ ಕಾಡುತ್ತಿದೆ. ಕೇವಲ ಜಿಲ್ಲೆಯಲ್ಲಿ ಇರುವುದು 10 ಮಂದಿ ಪಶು ವೈದ್ಯರು ಅಂದ್ರೆ ನಂಬಲೇಬೇಕು. ದುರಂತ ಅಂದರೆ ಪಶುಸಂಗೋಪನಾ ಸಚಿವರ ಕೆ.ವೆಂಕಟೇಶ್, ಇದೆ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರು ಕೂಡ ಹೌದು. ಇಂತ ಉಸ್ತುವಾರಿಗಳ ಜಿಲ್ಲೆಯಲ್ಲೇ ಈ ರೀತಿಯಾದರೆ ಇನ್ನು ಬೇರೆ ಜಿಲ್ಲೆಗಳ ಕಥೆ ಏನೆಂದು ಜನ ಸಾಮಾನ್ಯರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

ಇದನ್ನೂ ಓದಿ
Image
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Image
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
Image
ಬಂಡೀಪುರ ಸಫಾರಿಗೆ ಹೋಗುವ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದ ಅರಣ್ಯ ಇಲಾಖೆ
Image
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ

ಇನ್ನು ಕಳೆದ ಒಂದುವರೆ ವರ್ಷದಲ್ಲಿ ಬರೋಬ್ಬರಿ 900ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಇದಕ್ಕೆ ಕಾರಣವೇನು ಎಂದು ನೋಡುವುದಾದರೆ, ಸೂಕ್ತ ಸಮಯದಲ್ಲಿ ಲಸಿಕೆ, ಚುಚ್ಚುಮದ್ದುಗಳು ನೀಡಲು ಸಾಧ್ಯವಾಗದಿರುವುದು ಎಂದು ರೈತರು ಹೇಳುತ್ತಿದ್ದಾರೆ. ಪಶುವೈದ್ಯರ ಸಮಸ್ಯೆಯಿಂದ ರೈತ ವರ್ಗ, ಖಾಸಗಿ ವೈದ್ಯರು ಹಾಗೂ ಖಾಸಗಿ ಕ್ಲಿನಿಕ್​​ಗಳ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಉಂಟಾಗಿದೆ.

ಒಂದು ರಾಸುಗೆ ತಿಂಗಳಿಗೆ ಖಾಸಗಿಯಲ್ಲಿ ಚಿಕಿತ್ಸೆ, ಲಸಿಕೆ ಕೊಡಿಸಿದರೆ, ಕನಿಷ್ಠ 5 ಸಾವಿರ ರೂ. ಹಣ ಖರ್ಚಾಗುತ್ತೆ. ಹಾಗಾಗಿ ಆದಷ್ಟು ಬೇಗ ಪಶು ವೈದ್ಯರನ್ನ ನೇಮಕ ಮಾಡಿ ಎಂದು ರೈತರು ಆಗ್ರಹಿಸುತ್ತಿದ್ದಾರೆ. ಇನ್ನು ನೇಮಕಾತಿ ವಿಚಾರದಲ್ಲಿ ಸರ್ಕಾರ ಉದಾಸೀನ ತೊರುತ್ತಿದೆ. ಇದರ ಜೊತೆಗೆ ಖಾಸಗಿ ವಲಯಕ್ಕೆ ಹೊಲಿಕೆ ಮಾಡ್ಕೊಂಡ್ರೆ ಸರ್ಕಾರಿ ವೈದ್ಯರ ವೇತನ ಕಡಿಮೆ, ಜೊತೆಗೆ ಸುಸಜ್ಜಿತ ಕಟ್ಟಡವಿಲ್ಲ, ಮೂಲಭೂತ ಸೌಕರ್ಯದ ಕೊರತೆ, ಹೀಗೆ ಎಲ್ಲಾ ಕಾರಣದಿಂದಾಗಿ ಸರ್ಕಾರಿ ಪಶು ವೈದ್ಯರಾಗಲು ಈಗಿನ ವೈದ್ಯರು ಮುಂದಾಗುತ್ತಿಲ್ಲ ಎಂಬ ಮಾತು ಸಹ ಕೇಳಿ ಬರುತ್ತಿದೆ.

ಇದನ್ನೂ ಓದಿ: ಬಂಡೀಪುರ ಸಫಾರಿಗೆ ಹೋಗುವ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದ ಅರಣ್ಯ ಇಲಾಖೆ

ಅದೇನೆ ಹೇಳಿ ಒಂದೆಡೆ ಪಶು ವೈದ್ಯರ ಸಮಸ್ಯೆ, ಮತ್ತೊಂದೆಡೆ ಔಷಧದ ಅಭಾದತೆ, ಮತ್ತೊಂದೆಡೆ 900 ಕ್ಕೂ ಹೆಚ್ಚು ರಾಸುಗಳ ಮರಣ ಮೃದಂಗ, ಈ ಎಲ್ಲದರಿಂದ ಅನ್ನದಾತರು ರೋಸಿ ಹೋಗಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಮತ್ತು ಪಶುಸಂಗೋಪನಾ ಇಲಾಖೆ ಈ ಸಮಸ್ಯೆಯನ್ನ ಆದಷ್ಟು ಬೇಗ ಬಗೆಹರಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು