AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಸಿದ್ಧವಾಗಿ ವರ್ಷ ಕಳೆದ್ರು ವೀಕ್ಷಣೆಗೆ ಲಭ್ಯವಾಗದ ಆನೆ ಕ್ಯಾಂಪ್, ಪ್ರವಾಸಿಗರು ಅಸಮಾಧಾನ

ಚಾಮರಾಜಗರದಲ್ಲಿ ತೆಪ್ಪಕಾಡು ಮಾದರಿಯಲ್ಲಿ ಆನೆ ಕ್ಯಾಂಪ್​ನ್ನು ಈಗಾಗಲೇ ಅರಣ್ಯ ಇಲಾಖೆ ಆರಂಭಿಸಿದೆ. ಆದರೆ ಪ್ರವಾಸಿಗರ ವೀಕ್ಷಣೆಗೆ ಇನ್ನು ಕಾಲ ಕೂಡಿ ಬಂದಿಲ್ಲ. ಇದೀಗ ಆನೆ ಶಿಬಿರದ ವಿಳಂಬ ಹಿನ್ನಲೆ ಸಿಬ್ಬಂದಿಗಳ ವಿರುದ್ಧ ಪ್ರವಾಸಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಚಿವರ ಅನುಮತಿ ಸಿಕ್ಕಿಲ್ಲವೆಂಬ ಆರೋಪ ಕೇಳಿಬಂದಿದೆ.

ಚಾಮರಾಜನಗರ: ಸಿದ್ಧವಾಗಿ ವರ್ಷ ಕಳೆದ್ರು ವೀಕ್ಷಣೆಗೆ ಲಭ್ಯವಾಗದ ಆನೆ ಕ್ಯಾಂಪ್, ಪ್ರವಾಸಿಗರು ಅಸಮಾಧಾನ
ಆನೆ ಕ್ಯಾಂಪ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jul 14, 2025 | 9:20 AM

Share

ಚಾಮರಾಜನಗರ, ಜುಲೈ 14: ಕರ್ನಾಟಕದಲ್ಲಿ ಅತೀ ಹೆಚ್ಚು ಆನೆಗಳನ್ನ (Elephants) ಹೊಂದಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಚಾಮರಾಜನಗರ (Chamarajanagar) ಜಿಲ್ಲೆಗಿದೆ. ಇದೀಗ ಹೊಸ ಆನೆ ಕ್ಯಾಂಪ್ ತೆರೆಯುವ ಮೂಲಕ ಪ್ರವಾಸಿಗರಿಗೆ ಹೊಸ ಟಚ್ ನೀಡಲು ಅರಣ್ಯಾಧಿಕಾರಿಗಳು ಮುಂದಾಗಿರುವುದು ಗೊತ್ತಿರುವ ವಿಷಯ. ಆದರೆ ವರ್ಷ ಕಳೆದರೂ ವೀಕ್ಷಣೆಗೆ ಇನ್ನು ಆನೆ ಬಿಡಾರ ಸಿದ್ಧವಾಗಿಲ್ಲ. ಹೀಗಾಗಿ ಪ್ರವಾಸಿಗರು ಅರಣ್ಯ ಸಿಬ್ಬಂದಿ ವಿರುದ್ಧ ಭಾರೀ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದಾರೆ.

ಬೂದಿ ಪಡಗ ಆನೆ ಕ್ಯಾಂಪ್​ ಕಳೆದ ವರ್ಷ ಜುಲೈ 30 ರಂದು ಪ್ರವಾಸಿಗರಿಗೆ ತೆರೆಯಲಿದೆ ಎಂದು ಸುದ್ದಿಯಾಗಿತ್ತು. ಆದರೆ ಆ ಸುದ್ದಿ ಇದೀಗ ಸುಳ್ಳಾಗಿದ್ದು, ಆನೆ ಬಿಡಾರ ಸಂಪೂರ್ಣವಾಗಿದ್ದರು ಸಚಿವರ ಅನುಮತಿ ಸಿಕ್ಕಿಲ್ಲ ಅನ್ನೋ ಒಂದೇ ಕಾರಣಕ್ಕೆ ಒಂದೊಳ್ಳೆ ಕೆಲಸ ನೆಲೆಗುದಿಗೆ ಬಿದ್ದಿದ್ದು ನಿಜಕ್ಕೂ ದುರಂತವೇ ಸರಿ.

ಇದನ್ನೂ ಓದಿ: ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

ಇದನ್ನೂ ಓದಿ
Image
ಚಾಮರಾಜನಗರದಲ್ಲಿ 5 ಹುಲಿಗಳ ಸಾವು ಕೇಸ್​: ಕ್ರಿಮಿನಾಶಕ ಬಳಸಿರುವುದು ದೃಢ
Image
ಹುಲಿ, ಮಂಗ ಆಯ್ತು ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿಲಿ ಚಿರತೆ ಶವ ಪತ್ತೆ
Image
ಚಾಮರಾಜನಗರ: ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಶವ ಪತ್ತೆ
Image
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷದಿಂದ ಅಪಖ್ಯಾತಿ ಕೂಡ ಚಾಮರಾಜನಗರಕ್ಕೆ ಇದೆ. ಈ ಆನೆ ಕ್ಯಾಂಪ್ ಮಾಡುವುದರಿಂದ ಕಾಡಾನೆ ಪದೇ ಪದೇ ನಾಡಿಗೆ ನುಗ್ಗಿದಾಗ ಕ್ಯಾಂಪ್​ನಲ್ಲಿರುವ ಆನೆಗಳ ಮೂಲಕ ನಾಡಿಗೆ ಬಂದ ಆನೆಗಳನ್ನ ವಾಪಸ್​​ ಕಾಡಿಗೆ ಓಡಿಸುವಲ್ಲಿ ಅನುಕೂಲವಾಗಲಿದೆ. ಇದರ ಜೊತೆಗೆ ಬರುವಂತ ಪ್ರವಾಸಿಗರಿಗೆ ಕಾಡು ಪ್ರಾಣಿ ಹಾಗೂ ಆನೆಗಳ ಕುರಿತ ಮಾಹಿತಿ ಸಹ ಲಭ್ಯವಾಗಲಿದೆ.

ಕಳೆದ ಬಾರಿಯ ಅಧಿವೇಶನಕ್ಕೂ ಮುಂಚೆ ಬಿಳಿಗಿರಿ ಆನೆ ಕ್ಯಾಂಪ್​ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ವರ್ಷ ಕಳೆದರೂ ಅರಣ್ಯ ಸಚಿವರು ಇತ್ತ ಮುಖ ಮಾಡದ ಹಿನ್ನಲೆ ಪ್ರವಾಸಿಗರಿಗೆ ಇನ್ನು ಕ್ಯಾಂಪ್​​ ಪ್ರವೇಶಿಸುವ ಸೌಭಾಗ್ಯ ದೊರೆತಿಲ್ಲ.

ಇದನ್ನೂ ಓದಿ: ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ

ಅದೇನೆ ಹೇಳಿ ಈಗಾಗಲೇ ಚಾಮರಾಜಗರದಲ್ಲಿ ಮೂರು ಸಫಾರಿ ಕೇಂದ್ರವಿದ್ದು, ಬಿಳಿಗಿರಿ ವನ್ಯಧಾಮದಲ್ಲಿಯೂ ಸಫಾರಿ ಕೇಂದ್ರ ಆರಂಭವಾದರೆ ಪ್ರವಾಸಿಗರ ಸಂಖ್ಯೆಯೂ ದ್ವಿಗುಣವಾಗುತ್ತೆ. ಇನ್ನು ತೆಪ್ಪಕಾಡು ಮಾದರಿಯಲ್ಲೇ ಆನೆ ಕ್ಯಾಂಪ್ ಆರಂಭವಾದರೆ ಅರಣ್ಯ ಇಲಾಖೆಗೆ ಮತ್ತಷ್ಟು ಆದಾಯ ಹೆಚ್ಚಾಗುವುದು ಪಕ್ಕಾ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:16 am, Mon, 14 July 25

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ