ಚಾಮರಾಜನಗರ: ಸಿದ್ಧವಾಗಿ ವರ್ಷ ಕಳೆದ್ರು ವೀಕ್ಷಣೆಗೆ ಲಭ್ಯವಾಗದ ಆನೆ ಕ್ಯಾಂಪ್, ಪ್ರವಾಸಿಗರು ಅಸಮಾಧಾನ

ಚಾಮರಾಜಗರದಲ್ಲಿ ತೆಪ್ಪಕಾಡು ಮಾದರಿಯಲ್ಲಿ ಆನೆ ಕ್ಯಾಂಪ್​ನ್ನು ಈಗಾಗಲೇ ಅರಣ್ಯ ಇಲಾಖೆ ಆರಂಭಿಸಿದೆ. ಆದರೆ ಪ್ರವಾಸಿಗರ ವೀಕ್ಷಣೆಗೆ ಇನ್ನು ಕಾಲ ಕೂಡಿ ಬಂದಿಲ್ಲ. ಇದೀಗ ಆನೆ ಶಿಬಿರದ ವಿಳಂಬ ಹಿನ್ನಲೆ ಸಿಬ್ಬಂದಿಗಳ ವಿರುದ್ಧ ಪ್ರವಾಸಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಚಿವರ ಅನುಮತಿ ಸಿಕ್ಕಿಲ್ಲವೆಂಬ ಆರೋಪ ಕೇಳಿಬಂದಿದೆ.

ಚಾಮರಾಜನಗರ: ಸಿದ್ಧವಾಗಿ ವರ್ಷ ಕಳೆದ್ರು ವೀಕ್ಷಣೆಗೆ ಲಭ್ಯವಾಗದ ಆನೆ ಕ್ಯಾಂಪ್, ಪ್ರವಾಸಿಗರು ಅಸಮಾಧಾನ
ಆನೆ ಕ್ಯಾಂಪ್
Edited By:

Updated on: Jul 14, 2025 | 9:20 AM

ಚಾಮರಾಜನಗರ, ಜುಲೈ 14: ಕರ್ನಾಟಕದಲ್ಲಿ ಅತೀ ಹೆಚ್ಚು ಆನೆಗಳನ್ನ (Elephants) ಹೊಂದಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಚಾಮರಾಜನಗರ (Chamarajanagar) ಜಿಲ್ಲೆಗಿದೆ. ಇದೀಗ ಹೊಸ ಆನೆ ಕ್ಯಾಂಪ್ ತೆರೆಯುವ ಮೂಲಕ ಪ್ರವಾಸಿಗರಿಗೆ ಹೊಸ ಟಚ್ ನೀಡಲು ಅರಣ್ಯಾಧಿಕಾರಿಗಳು ಮುಂದಾಗಿರುವುದು ಗೊತ್ತಿರುವ ವಿಷಯ. ಆದರೆ ವರ್ಷ ಕಳೆದರೂ ವೀಕ್ಷಣೆಗೆ ಇನ್ನು ಆನೆ ಬಿಡಾರ ಸಿದ್ಧವಾಗಿಲ್ಲ. ಹೀಗಾಗಿ ಪ್ರವಾಸಿಗರು ಅರಣ್ಯ ಸಿಬ್ಬಂದಿ ವಿರುದ್ಧ ಭಾರೀ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದಾರೆ.

ಬೂದಿ ಪಡಗ ಆನೆ ಕ್ಯಾಂಪ್​ ಕಳೆದ ವರ್ಷ ಜುಲೈ 30 ರಂದು ಪ್ರವಾಸಿಗರಿಗೆ ತೆರೆಯಲಿದೆ ಎಂದು ಸುದ್ದಿಯಾಗಿತ್ತು. ಆದರೆ ಆ ಸುದ್ದಿ ಇದೀಗ ಸುಳ್ಳಾಗಿದ್ದು, ಆನೆ ಬಿಡಾರ ಸಂಪೂರ್ಣವಾಗಿದ್ದರು ಸಚಿವರ ಅನುಮತಿ ಸಿಕ್ಕಿಲ್ಲ ಅನ್ನೋ ಒಂದೇ ಕಾರಣಕ್ಕೆ ಒಂದೊಳ್ಳೆ ಕೆಲಸ ನೆಲೆಗುದಿಗೆ ಬಿದ್ದಿದ್ದು ನಿಜಕ್ಕೂ ದುರಂತವೇ ಸರಿ.

ಇದನ್ನೂ ಓದಿ: ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

ಇದನ್ನೂ ಓದಿ
ಚಾಮರಾಜನಗರದಲ್ಲಿ 5 ಹುಲಿಗಳ ಸಾವು ಕೇಸ್​: ಕ್ರಿಮಿನಾಶಕ ಬಳಸಿರುವುದು ದೃಢ
ಹುಲಿ, ಮಂಗ ಆಯ್ತು ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿಲಿ ಚಿರತೆ ಶವ ಪತ್ತೆ
ಚಾಮರಾಜನಗರ: ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಶವ ಪತ್ತೆ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷದಿಂದ ಅಪಖ್ಯಾತಿ ಕೂಡ ಚಾಮರಾಜನಗರಕ್ಕೆ ಇದೆ. ಈ ಆನೆ ಕ್ಯಾಂಪ್ ಮಾಡುವುದರಿಂದ ಕಾಡಾನೆ ಪದೇ ಪದೇ ನಾಡಿಗೆ ನುಗ್ಗಿದಾಗ ಕ್ಯಾಂಪ್​ನಲ್ಲಿರುವ ಆನೆಗಳ ಮೂಲಕ ನಾಡಿಗೆ ಬಂದ ಆನೆಗಳನ್ನ ವಾಪಸ್​​ ಕಾಡಿಗೆ ಓಡಿಸುವಲ್ಲಿ ಅನುಕೂಲವಾಗಲಿದೆ. ಇದರ ಜೊತೆಗೆ ಬರುವಂತ ಪ್ರವಾಸಿಗರಿಗೆ ಕಾಡು ಪ್ರಾಣಿ ಹಾಗೂ ಆನೆಗಳ ಕುರಿತ ಮಾಹಿತಿ ಸಹ ಲಭ್ಯವಾಗಲಿದೆ.

ಕಳೆದ ಬಾರಿಯ ಅಧಿವೇಶನಕ್ಕೂ ಮುಂಚೆ ಬಿಳಿಗಿರಿ ಆನೆ ಕ್ಯಾಂಪ್​ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ವರ್ಷ ಕಳೆದರೂ ಅರಣ್ಯ ಸಚಿವರು ಇತ್ತ ಮುಖ ಮಾಡದ ಹಿನ್ನಲೆ ಪ್ರವಾಸಿಗರಿಗೆ ಇನ್ನು ಕ್ಯಾಂಪ್​​ ಪ್ರವೇಶಿಸುವ ಸೌಭಾಗ್ಯ ದೊರೆತಿಲ್ಲ.

ಇದನ್ನೂ ಓದಿ: ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ

ಅದೇನೆ ಹೇಳಿ ಈಗಾಗಲೇ ಚಾಮರಾಜಗರದಲ್ಲಿ ಮೂರು ಸಫಾರಿ ಕೇಂದ್ರವಿದ್ದು, ಬಿಳಿಗಿರಿ ವನ್ಯಧಾಮದಲ್ಲಿಯೂ ಸಫಾರಿ ಕೇಂದ್ರ ಆರಂಭವಾದರೆ ಪ್ರವಾಸಿಗರ ಸಂಖ್ಯೆಯೂ ದ್ವಿಗುಣವಾಗುತ್ತೆ. ಇನ್ನು ತೆಪ್ಪಕಾಡು ಮಾದರಿಯಲ್ಲೇ ಆನೆ ಕ್ಯಾಂಪ್ ಆರಂಭವಾದರೆ ಅರಣ್ಯ ಇಲಾಖೆಗೆ ಮತ್ತಷ್ಟು ಆದಾಯ ಹೆಚ್ಚಾಗುವುದು ಪಕ್ಕಾ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:16 am, Mon, 14 July 25

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us