AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuru Firing Case: ಶೂಟೌಟ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಅರಣ್ಯ ಇಲಾಖೆ ನಡೆಗೆ ವ್ಯಕ್ತವಾಯ್ತು ಭಾರಿ ಅನುಮಾನ!

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ನಡೆದ ಮೂವರ ಎನ್‌ಕೌಂಟರ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಹೊಳೆ ಮುರುದಟ್ಟಿ ಕಳ್ಳಬೇಟೆ ತಡೆ ಶಿಬಿರ ಜಿಲೆಟಿನ್ ಸ್ಪೋಟ ಹಾಗೂ 4ನೇ ಆರೋಪಿ ನಾಪತ್ತೆಯಾದ ಘಟನೆ ಅರಣ್ಯ ಇಲಾಖೆಯ ಮೇಲೆ ಹಲವು ಸಂಶಯಗಳನ್ನು ಹುಟ್ಟುಹಾಕಿದೆ.

Hanuru Firing Case: ಶೂಟೌಟ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಅರಣ್ಯ ಇಲಾಖೆ ನಡೆಗೆ ವ್ಯಕ್ತವಾಯ್ತು ಭಾರಿ ಅನುಮಾನ!
ಅರಣ್ಯ ಇಲಾಖೆ ನಡೆಗೆ ವ್ಯಕ್ತವಾಯ್ತು ಭಾರಿ ಅನುಮಾನ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 19, 2026 | 8:34 AM

Share

ಮುಖ್ಯಾಂಶಗಳು

  • ಹನೂರಿನ ಎನ್‌ಕೌಂಟರ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು ಗೊಂದಲ ಮೂಡಿಸಿದೆ.
  • ಹೊಳೆ ಮುರುದಟ್ಟಿ ಕಳ್ಳಬೇಟೆ ಶಿಬಿರವನ್ನು ಸ್ಪೋಟಿಸಿದ ದುಷ್ಕರ್ಮಿಗಳು ಮಾಹಿತಿ ಮುಚ್ಚಿಟ್ಟ ಸಿಬ್ಬಂದಿ.
  • ನಾಲ್ಕನೇ ಆರೋಪಿ ಮಹಿಮ್ ದಾಸ್ ನಾಪತ್ತೆಯಾಗಿದ್ದು ಅರಣ್ಯ ಇಲಾಖೆ ನಡೆಗೆ ಅನುಮಾನ.

ಚಾಮರಾಜನಗರ, ಆಗಸ್ಟ್ 19: ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ನಡೆದ ಮೂವರ ಎನ್‌ಕೌಂಟರ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಸಂಪೂರ್ಣ ಘಟನೆ ಗೊಂದಲದ ಗೂಡಾಗಿ ಪರಿಣಮಿಸಿದೆ. ಪ್ರಸ್ತುತ ಅರಣ್ಯ ಸಿಬ್ಬಂದಿಯ ನಡೆ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಕಳ್ಳ ಬೇಟೆ ಶಿಬಿರ ಸ್ಪೋಟ: ಮುಚ್ಚಿಡಲಾಯಿತೇ ಮಾಹಿತಿ?

ದಟ್ಟ ಕಾನನದ ಒಳಗಿರುವ ಹೊಳೆ ಮುರುದಟ್ಟಿ ಕಳ್ಳ ಬೇಟೆ ತಡೆ (APC) ಕ್ಯಾಂಪ್‌ಗೆ ಆಗಸ್ಟ್ 17 ರಂದು ದುಷ್ಕರ್ಮಿಗಳು ನುಗ್ಗಿ, ಜಿಲೆಟಿನ್ ಕಡ್ಡಿಗಳನ್ನು ಇಟ್ಟು ಕಟ್ಟಡವನ್ನು ಸ್ಪೋಟಿಸಿದ್ದಾರೆ. ಕಾಡಿನೊಳಗೆ ರಾಜಾರೋಷವಾಗಿ ತೆರಳಿ ಅರಣ್ಯ ಇಲಾಖೆಯ ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದು ಯಾರು? ಎನ್‌ಕೌಂಟರ್‌ಗೆ ಪ್ರತಿಯಾಗಿ ಉದ್ರಿಕ್ತರು ಕೌಂಟರ್ ಅಟ್ಯಾಕ್ ಮಾಡಿದರೇ ಅಥವಾ ಇಷ್ಟೊಂದು ಜಿಲೆಟಿನ್ ಸ್ಪೋಟಕಗಳು ಅವರ ಕೈಗೆ ಸಿಕ್ಕಿದ್ದು ಹೇಗೆ ಎಂಬ ಪ್ರಶ್ನೆಗಳು ಕಾಡುತ್ತಿವೆ. ಇಷ್ಟೆಲ್ಲಾ ದೊಡ್ಡ ಘಟನೆ ನಡೆದರೂ ಅರಣ್ಯ ಸಿಬ್ಬಂದಿ ಈ ಮಾಹಿತಿಯನ್ನು ಹೊರಗೆ ಲೀಕ್ ಆಗದಂತೆ ಮುಚ್ಚಿಟ್ಟಿರುವುದು ಅನುಮಾನವನ್ನು ಇನ್ನಷ್ಟು ಹೆಚ್ಚಿಸಿದೆ.

4 ಆಂಟಿ ಪೋಚಿಂಗ್ ಕ್ಯಾಂಪ್‌ಗಳ ಬ್ಲಾಸ್ಟ್

ಶೂಟೌಟ್ ಘಟನೆಯ ಬೆನ್ನಲ್ಲೇ ಕಾವೇರಿ ವನ್ಯಜೀವಿ ಧಾಮದಲ್ಲಿ ಮತ್ತೊಂದು ಭೀಕರ ಹಾಗೂ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಘಟನೆಯನ್ನು ದುರುಪಯೋಗಪಡಿಸಿಕೊಂಡ ಕಿಡಿಗೇಡಿಗಳು ಅರಣ್ಯ ಇಲಾಖೆಯ ನಾಲ್ಕು ಆಂಟಿ ಪೋಚಿಂಗ್ ಕ್ಯಾಂಪ್‌ಗಳನ್ನು (APC) ಜಿಲೆಟಿನ್ ಬಳಸಿ ಬ್ಲಾಸ್ಟ್ ಮಾಡಿದ್ದಾರೆ! ವನ್ಯಧಾಮದ ಒಳ್ಳಮರದ ಹಟ್ಟಿ, ಮತ್ತಿಪುರ, ಬೂದಿಕೆರೆ ಹಾಗೂ ಕಳ್ಳಿದೊಡ್ಡಿ ಕ್ಯಾಂಪ್‌ಗಳು ಸಂಪೂರ್ಣ ದ್ವಂಸಗೊಂಡಿದ್ದು, ಅರಣ್ಯ ರಕ್ಷಣಾ ವ್ಯವಸ್ಥೆಯನ್ನೇ ಧ್ವಂಸಗೊಳಿಸುವ ಹಂತಕ್ಕೆ ದುಷ್ಕರ್ಮಿಗಳು ತಲುಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ ಹನೂರು ಪ್ರಕರಣ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

4ನೇ ಆರೋಪಿ ನಾಪತ್ತೆ ಮತ್ತು ಆಸ್ಪತ್ರೆಯ ಡ್ರಾಮಾ

ಇನ್ನೊಂದೆಡೆ, ಪ್ರಕರಣದ ನಾಲ್ಕನೇ ಆರೋಪಿ ಮಹಿಮ್ ದಾಸ್ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ದಿಢೀರ್ ನಾಪತ್ತೆಯಾಗಿದ್ದಾನೆ. ಆಸ್ಪತ್ರೆಯಲ್ಲಿದ್ದಾಗ ಆತನನ್ನು ವಶಕ್ಕೆ ಪಡೆಯಲು ಅರಣ್ಯ ಸಿಬ್ಬಂದಿ ಯಾಕೆ ಮುಂದಾಗಲಿಲ್ಲ? ಪ್ರಸ್ತುತ ಅಜ್ಞಾತ ಸ್ಥಳದಲ್ಲಿ ಕುಳಿತು ವಿಡಿಯೋಗಳನ್ನು ಹರಿಬಿಡುತ್ತಿರುವ ಮಹಿಮ್ ದಾಸ್ ನಡೆ ಅರಣ್ಯ ಇಲಾಖೆಯನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 am, Wed, 19 August 26

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ