AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ, ಮತದಾನ ಬಹಿಷ್ಕಾರ ಎಚ್ಚರಿಕೆ

ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿರುವ ಪಾಲಾರ್(Palar) ಗ್ರಾಮಕ್ಕೆ ಇನ್ನೂ ವಿದ್ಯುತ್ ಸಂಪರ್ಕ (Electrical connection) ದೊರೆತಿಲ್ಲ. ಅದು ಅಲ್ಲದೆ 80ಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳಿರುವ ಈ ಗ್ರಾಮದ 50 ಮೀಟರ್ ಅಂತರದಲ್ಲೇ ಲೈನ್ ಇದ್ದರೂ ಸಂಪರ್ಕ ನೀಡಿಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ,  ಮತದಾನ ಬಹಿಷ್ಕಾರ ಎಚ್ಚರಿಕೆ
ಪಾಲಾರ್​ ಗ್ರಾಮಕ್ಕಿಲ್ಲ ವಿದ್ಯುತ್​ ಸಂಪರ್ಕ
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 30, 2024 | 3:44 PM

Share

ಚಾಮರಾಜನಗರ, ಮಾ.30: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿರುವ ಪಾಲಾರ್(Palar) ಗ್ರಾಮಕ್ಕೆ ಇನ್ನೂ ವಿದ್ಯುತ್ ಸಂಪರ್ಕ(Electrical connection) ದೊರೆತಿಲ್ಲ. ಈ ಹಿನ್ನೆಲೆ ರೊಚ್ಚಿಗೆದ್ದ ಗ್ರಾಮದ ಬುಡಕಟ್ಟು ಸೋಲಿಗರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. 80ಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳಿರುವ ಈ ಗ್ರಾಮದ 50 ಮೀಟರ್ ಅಂತರದಲ್ಲೇ ಲೈನ್ ಇದ್ದರೂ ಸಂಪರ್ಕ ನೀಡಿಲ್ಲ. ಈ ಮಧ್ಯೆ ವಿದ್ಯುತ್ ಸಂಪರ್ಕ ನೀಡಲು ಅರಣ್ಯ ಇಲಾಖೆ ಅಡ್ಡಿ ಆರೋಪ ಕೂಡ ಕೇಳಿಬಂದಿದೆ. ಏಪ್ರಿಲ್ 1 ರಿಂದ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಅದಕ್ಕೂ ಸ್ಪಂದಿಸದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಕುವುದಾಗಿ ಪಾಲಾರ್ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪಂಪ್ ಸೆಟ್ ಮೋಟಾರ್ ಕಳ್ಳತನ; ಆರೋಪಿ ಹಿಡಿದು ಥಳಿಸಿದ ಗ್ರಾಮಸ್ಥರು

ವಿಜಯಪುರ: ನೀರೆತ್ತುವ ಪಂಪ್ ಸೆಟ್ ಮೋಟಾರ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಗ್ರಾಮಸ್ಥರೇ ಹಿಡಿದು ಥಳಿಸಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಎಸ್​ಎಚ್ ಗೋನಾಳ ಗ್ರಾಮದಲ್ಲಿ ನಡೆದಿದೆ. ಜಮೀನುಗಳಲ್ಲಿನ ಬಾವಿ, ಕೊಳವೆ ಬಾವಿ, ಕಾಲುವೆಗಳ ಬಳಿಯ ಪಂಪ್ ಸೆಟ್ ಕದಿಯುತ್ತಿದ್ದ ಗ್ಯಾಂಗ್ ಇದಾಗಿದ್ದು, ನಿನ್ನೆ(ಮಾ.29) ಮೂವರು ಖದೀಮರು ಪಂಪ್ ಸೆಟ್ ಕಳ್ಳತನ ಮಾಡಲು ಬಂದಿದ್ದ ವೇಳೆ ಓರ್ವ ಕಳ್ಳನನ್ನು ಹಿಡಿದಿದ್ದರು.

ಇದನ್ನೂ ಓದಿ:ರೈತರ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಅಧಿಕಾರಿಗಳು! ಉಚಿತ ವಿದ್ಯುತ್ ನೀಡುವ ಸಿದ್ದರಾಮಯ್ಯ ಸರ್ಕಾರದ ವಾಗ್ದಾನ ಏನಾಯಿತು?

ಇಬ್ಬರು ಖದೀಮರು ಪರಾರಿ, ಜನರ ಕೈಗೆ ಸಿಕ್ಕ ಓರ್ವನನ್ನ ಥಳಿಸಿದ ಜನರು

ಇಬ್ಬರು ಖದೀಮರು ಪರಾರಿಯಾದರೆ, ಮುದ್ದೇಬಿಹಾಳ ಪಟ್ಟಣದ ಕಿಲ್ಲಾಗಲ್ಲಿ ನಿವಾಸಿ ಶಿವು ಪಾಟೀಲ್ ಎಂಬಾತ ಜನರ ಕೈಗೆ ಸಿಕ್ಕಿದ್ದಾನೆ. ಬಳಿಕ ತಾಳಿಕೋಟೆ ಪೋಲಿಸರಿಗೆ ಖದೀಮನನ್ನು ಎಸ್​ಎಚ್​ ಗೋನಾಳ ಗ್ರಾಮಸ್ಥರು ಒಪ್ಪಿಸಿದ್ದು, ಪೊಲೀಸರು  ಶಿವು ಪಾಟೀಲ್ ವಿಚಾರಣೆ ನಡೆಸಿದ್ದಾರೆ. ಈ ಘಟನೆ ತಾಳಿಕೋಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Sat, 30 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ