50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ, ಮತದಾನ ಬಹಿಷ್ಕಾರ ಎಚ್ಚರಿಕೆ

ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿರುವ ಪಾಲಾರ್(Palar) ಗ್ರಾಮಕ್ಕೆ ಇನ್ನೂ ವಿದ್ಯುತ್ ಸಂಪರ್ಕ (Electrical connection) ದೊರೆತಿಲ್ಲ. ಅದು ಅಲ್ಲದೆ 80ಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳಿರುವ ಈ ಗ್ರಾಮದ 50 ಮೀಟರ್ ಅಂತರದಲ್ಲೇ ಲೈನ್ ಇದ್ದರೂ ಸಂಪರ್ಕ ನೀಡಿಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ,  ಮತದಾನ ಬಹಿಷ್ಕಾರ ಎಚ್ಚರಿಕೆ
ಪಾಲಾರ್​ ಗ್ರಾಮಕ್ಕಿಲ್ಲ ವಿದ್ಯುತ್​ ಸಂಪರ್ಕ
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 30, 2024 | 3:44 PM

ಚಾಮರಾಜನಗರ, ಮಾ.30: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿರುವ ಪಾಲಾರ್(Palar) ಗ್ರಾಮಕ್ಕೆ ಇನ್ನೂ ವಿದ್ಯುತ್ ಸಂಪರ್ಕ(Electrical connection) ದೊರೆತಿಲ್ಲ. ಈ ಹಿನ್ನೆಲೆ ರೊಚ್ಚಿಗೆದ್ದ ಗ್ರಾಮದ ಬುಡಕಟ್ಟು ಸೋಲಿಗರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. 80ಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳಿರುವ ಈ ಗ್ರಾಮದ 50 ಮೀಟರ್ ಅಂತರದಲ್ಲೇ ಲೈನ್ ಇದ್ದರೂ ಸಂಪರ್ಕ ನೀಡಿಲ್ಲ. ಈ ಮಧ್ಯೆ ವಿದ್ಯುತ್ ಸಂಪರ್ಕ ನೀಡಲು ಅರಣ್ಯ ಇಲಾಖೆ ಅಡ್ಡಿ ಆರೋಪ ಕೂಡ ಕೇಳಿಬಂದಿದೆ. ಏಪ್ರಿಲ್ 1 ರಿಂದ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಅದಕ್ಕೂ ಸ್ಪಂದಿಸದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಕುವುದಾಗಿ ಪಾಲಾರ್ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪಂಪ್ ಸೆಟ್ ಮೋಟಾರ್ ಕಳ್ಳತನ; ಆರೋಪಿ ಹಿಡಿದು ಥಳಿಸಿದ ಗ್ರಾಮಸ್ಥರು

ವಿಜಯಪುರ: ನೀರೆತ್ತುವ ಪಂಪ್ ಸೆಟ್ ಮೋಟಾರ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಗ್ರಾಮಸ್ಥರೇ ಹಿಡಿದು ಥಳಿಸಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಎಸ್​ಎಚ್ ಗೋನಾಳ ಗ್ರಾಮದಲ್ಲಿ ನಡೆದಿದೆ. ಜಮೀನುಗಳಲ್ಲಿನ ಬಾವಿ, ಕೊಳವೆ ಬಾವಿ, ಕಾಲುವೆಗಳ ಬಳಿಯ ಪಂಪ್ ಸೆಟ್ ಕದಿಯುತ್ತಿದ್ದ ಗ್ಯಾಂಗ್ ಇದಾಗಿದ್ದು, ನಿನ್ನೆ(ಮಾ.29) ಮೂವರು ಖದೀಮರು ಪಂಪ್ ಸೆಟ್ ಕಳ್ಳತನ ಮಾಡಲು ಬಂದಿದ್ದ ವೇಳೆ ಓರ್ವ ಕಳ್ಳನನ್ನು ಹಿಡಿದಿದ್ದರು.

ಇದನ್ನೂ ಓದಿ:ರೈತರ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಅಧಿಕಾರಿಗಳು! ಉಚಿತ ವಿದ್ಯುತ್ ನೀಡುವ ಸಿದ್ದರಾಮಯ್ಯ ಸರ್ಕಾರದ ವಾಗ್ದಾನ ಏನಾಯಿತು?

ಇಬ್ಬರು ಖದೀಮರು ಪರಾರಿ, ಜನರ ಕೈಗೆ ಸಿಕ್ಕ ಓರ್ವನನ್ನ ಥಳಿಸಿದ ಜನರು

ಇಬ್ಬರು ಖದೀಮರು ಪರಾರಿಯಾದರೆ, ಮುದ್ದೇಬಿಹಾಳ ಪಟ್ಟಣದ ಕಿಲ್ಲಾಗಲ್ಲಿ ನಿವಾಸಿ ಶಿವು ಪಾಟೀಲ್ ಎಂಬಾತ ಜನರ ಕೈಗೆ ಸಿಕ್ಕಿದ್ದಾನೆ. ಬಳಿಕ ತಾಳಿಕೋಟೆ ಪೋಲಿಸರಿಗೆ ಖದೀಮನನ್ನು ಎಸ್​ಎಚ್​ ಗೋನಾಳ ಗ್ರಾಮಸ್ಥರು ಒಪ್ಪಿಸಿದ್ದು, ಪೊಲೀಸರು  ಶಿವು ಪಾಟೀಲ್ ವಿಚಾರಣೆ ನಡೆಸಿದ್ದಾರೆ. ಈ ಘಟನೆ ತಾಳಿಕೋಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Sat, 30 March 24

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us