AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಬಂಡೀಪುರಕ್ಕೆ ತೆರಳಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ

ಬೆಂಗಳೂರಿನ ಜೆ. ನಿಶಾಂತ್, ಅವರ ಪತ್ನಿ ಚಂದನಾ ಮತ್ತು 10 ವರ್ಷದ ಮಗು ಬಂಡೀಪುರದ ಬಳಿ ನಾಪತ್ತೆಯಾಗಿದ್ದಾರೆ. ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ನಿಶಾಂತ್ ಬಿಬಿಎಂಪಿ ನೌಕರ ಎಂದು ನಕಲಿ ಐಡಿಯಿಂದ ರೂಮ್ ಬುಕ್ ಮಾಡಿದ್ದರು. ಪೊಲೀಸರು ತಮಿಳುನಾಡು, ಕೇರಳ ಮತ್ತು ಮೈಸೂರಿನಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಚಾಮರಾಜನಗರ: ಬಂಡೀಪುರಕ್ಕೆ ತೆರಳಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ
ಜೆ.ನಿಶಾಂತ್, ಚಂದನಾ
ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ|

Updated on:Mar 04, 2025 | 10:39 AM

Share

ಚಾಮರಾಜನಗರ, ಮಾರ್ಚ್​ 04: ಗುಂಡ್ಲುಪೇಟೆ (Gundlupete) ತಾಲೂಕಿನ ಬಂಡೀಪುರಕ್ಕೆ (Bandipur) ತೆರಳಿದಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ಕುಟುಂಬ ಭಾನುವಾರ (ಮಾ.02) ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ (ಮಾ.03) ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್​ ಕಂಟ್ರಿ ಕ್ಲಬ್ ರೆಸಾರ್ಟ್​​ನಲ್ಲೇ ಇವೆ.

ರೆಸಾರ್ಟ್​ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಕಾರಿನಲ್ಲಿ ಬಂಡೀಪುರ ಮಂಗಲ ರಸ್ತೆಯವರೆಗೆ ಹೋದವರು, ಅಲ್ಲಿಂದ ನಾಪತ್ತೆಯಾಗಿದ್ದಾರೆ. ಇನ್ನು, ಕುಟುಂಬ ನಾಪತ್ತೆಯಾದ ವಿಚಾರ ತಿಳಿದು ಚಾಮರಾಜನಗರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಕುಟುಂಬ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್

ನಿಶಾಂತ್ ಬಿಬಿಎಂಪಿ ನೌಕರ ಎಂದು ಹೇಳಿಕೊಂಡು ನಕಲಿ ಐಡಿ​ ನೀಡಿ ರೂಮ್ ಬುಕ್ ಮಾಡಿದ್ದನು. ನಾಪತ್ತೆಯಾಗಿರುವ ನಿಶಾಂತ್ ಮೈತುಂಬಾ ಸಾಲ ಮಾಡಿಕೊಂಡಿದ್ದನು. ನಿಶಾಂತ್ ಸದ್ಯ ಯಾವುದೇ ಕೆಲಸ ಕಾರ್ಯ ಮಾಡುತ್ತಿರಲಿಲ್ಲ. ನಿಶಾಂತ್ ಸಾಲಕ್ಕೆ ಹೆದರಿ ಕುಟುಂಬದ ಜತೆ ಬಂಡೀಪುರಕ್ಕೆ ತೆರಳಿದ್ದನು. ಸಾಲಗಾರರು ಅಪಹರಿಸಿರುವ ಶಂಕೆಯಿಂದ ಪೊಲೀಸರಿಂದ ತಲಾಶ್ ನಡೆಸಿದ್ದಾರೆ. ತಮಿಳುನಾಡು, ಕೇರಳ ಹಾಗೂ ಮೈಸೂರು ಸೇರಿದಂತೆ ಹಲವೆಡೆ ಹುಡುಕಾಡುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Tue, 4 March 25

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು