AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತನನ್ನು ಮದ್ವೆಯಾಗಲ್ಲ ಎಂದ ಯುವತಿ: ಟೊಮೆಟೊ ಮಾರಿದ ಹಣದಲ್ಲಿ ಕಾರು ಖರೀದಿಸಿ ಕನ್ಯೆ ನೋಡಲು ಹೋಗ್ತೇನೆ ಎಂದ ಯುವ ಕೃಷಿಕ

ರೈತನಿಗೆ ನಮ್ಮ ಮಗಳನ್ನು ಮದುವೆ ಮಾಡಿಕೊಡಲ್ಲ ಎಂಬ ಪೋಷಕರ ಮಾತುಗಳನ್ನೇ ಸವಾಲಾಗಿ ತೆಗೆದುಕೊಂಡ ಯುವ ಕೃಷಿಕ ತನ್ನ 12 ಎಕರೆ ಜಮೀನಿನಲ್ಲಿ ಕೆಂಪು ಬಂಗಾರ ಬೆಳೆದು ಕೋಟ್ಯಾಧಿಪತಿಯಾಗಿದ್ದಾನೆ.

ರೈತನನ್ನು ಮದ್ವೆಯಾಗಲ್ಲ ಎಂದ ಯುವತಿ: ಟೊಮೆಟೊ ಮಾರಿದ ಹಣದಲ್ಲಿ ಕಾರು ಖರೀದಿಸಿ ಕನ್ಯೆ ನೋಡಲು ಹೋಗ್ತೇನೆ ಎಂದ ಯುವ ಕೃಷಿಕ
ಟೊಮೆಟೋದಿಂದ ಬಂದ ಆದಾಯದಲ್ಲಿ ಕಾರು ಖರೀದಿಸಿದ ರೈತ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 07, 2023 | 10:10 AM

Share

ಚಾಮರಾಜನಗರ: ಇತ್ತೀಚಿನ ವರ್ಷಗಳಲ್ಲಿ ರೈತನಿಗೆ (Farmer) ನಮ್ಮ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ಪೋಷಕರು ಹೇಳುತ್ತಿದ್ದರೇ, ನಾವು ಕೃಷಿಕನನ್ನು ಮದುವೆಯಾಗುವುದಿಲ್ಲ (Marriage) ಸರ್ಕಾರಿ ಕೆಲಸ ಅಥವಾ ಐಟಿ-ಬಿಟಿ ಉದ್ಯೋಗಸ್ಥನೇ ಬೇಕು ಎಂದು ಹುಡುಗಿಯರು ಹೇಳುತ್ತಿದ್ದಾರೆ. ಇದೇರೀತಿಯಾದ ಅನುಭವಗಳು ಚಾಮರಾಜನಗರ ತಾಲೂಕಿನ ಲಕ್ಷ್ಮೀಪುರದ ಯುವ ರೈತ ರಾಜೇಂದ್ರ ಅವರಿಗೆ ಆಗಿದೆ. ಹೌದು ಯುವ ರೈತ ರಾಜೇಂದ್ರ ಈ ಹಿಂದೆ ಕನ್ಯೆ ನೋಡಲು ಹೋದಾಗ ರೈತನೆಂದು ಯುವತಿಯರು ಮದುವೆಯಾಗಲು ನಿರಾಕರಿಸಿದ್ದರು. ಸರ್ಕಾರಿ ಕೆಲಸ ಇದ್ದವರಿಗೆ ಮಾತ್ರ ನಮ್ಮ ಮಗಳನ್ನು ಕೊಡುವುದಾಗಿ ಪೋಷಕರು ಅವಮಾನಿಸಿದ್ದರು.

ಈ ಮಾತುಗಳನ್ನು ಕೇಳಿದ ಯುವ ರೈತ ರಾಜೇಂದ್ರ ನಾನು ಸರ್ಕಾರಿ ಉದ್ಯೋಗಿ ಮತ್ತು ಐಟಿ-ಬಿಟಿ ಉದ್ಯೋಗಸ್ಥರಿಗಿಂತ ಕೃಷಿಯಲ್ಲೇ ಹೆಚ್ಚು ಆದಾಯ ಗಳಿಸುತ್ತೇನೆಂದು ಪಣ ತೊಟ್ಟಿದ್ದರು. ಅದರಂತೆ ಲಕ್ಷ್ಮೀಪುರದಲ್ಲಿ ತನ್ನ 12 ಎಕರೆ ಜಮೀನಿನಲ್ಲಿ ಯುವ ರೈತ ರಾಜೇಂದ್ರ ಟೊಮೆಟೋ ಬೆಳೆ ಬೆಳೆದಿದ್ದಾರೆ. ಆರು ತಿಂಗಳಲ್ಲಿ ಫಸಲು ಬಂದಿದೆ. ಈಗ ಟೊಮೆಟೋ ದರ ಏರಿಕೆಯಾಗಿದ್ದು, ಒಳ್ಳೆ ಬೆಲೆಗೆ ಮಾರಾಟ ಮಾಡಿ ಕೋಟ್ಯಾಧಿಪತಿಯಾಗಿದ್ದಾರೆ.

ಇದನ್ನೂ ಓದಿ: ಚಿಕ್ಕೋಡಿ: ಲೀಸ್ ಪಡೆದ ಹೊಲದಲ್ಲಿ ಟೊಮೆಟೊ ಬೆಳೆದು ಕೋಟ್ಯಾಧೀಶನಾದ ರೈತ

ಈಗ ಟೊಮೆಟೋ ಬೆಳೆ ಕೈ ಹಿಡಿದ ಪರಿಣಾಮ ಹೊಸ ಮಹೇಂದ್ರ XUV 700 ಕಾರು ಖರೀದಿಸಿ ಅದರಲ್ಲೇ ಕನ್ಯಾ ನೋಡಲು ಹೋಗುತ್ತೇನೆಂದು ಯುವ ರೈತ ರಾಜೇಂದ್ರ ಹೇಳುತ್ತಿದ್ದಾರೆ.

ಟೊಮೆಟೋ ಜಮೀನುಗಳ ಸುತ್ತ ಪೊಲೀಸರ ಗಸ್ತು

ಇನ್ನು ಇದೇ ಜಿಲ್ಲೆಯ ಮೊತ್ತೊಂದು ಕಡೆ ಟೊಮೆಟೋ ಬೆಳೆ ಜಮೀನುಗಳ ಸತ್ತ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಹೌದು ಚಾಮರಾಜನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕೆಬ್ಬೇಪುರ ಗ್ರಾಮದ ರೈತ ಮಂಜುನಾಥ್ ಎಂಬುವ 1.5 ಎಕರೆ ಜಮೀನಲ್ಲಿ ಬೆಳೆದಿದ್ದ ಟೊಮೆಟೋ ಬೆಳೆಯನ್ನು ಕಿಡಿಗೇಡಿಗಳು ನಾಶ ಮಾಡಿದ್ದರು.

ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿಂದಂತೆ ಚಾಮರಾಜನಗರ ಪೊಲೀಸರು ಬೀಟ್ ಹೆಚ್ಚಿಸಿದ್ದಾರೆ. ಅಲ್ಲದೇ ಆಯಾ ಠಾಣಾ ವ್ಯಾಪ್ತಿಯ ಪೊಲೀಸರು ಟೊಮೆಟೋ ಜಮೀನಿನ ಸುತ್ತ ಗಸ್ತು ತಿರುಗಲು ಸೂಚನೆ ನೀಡಿದ್ದಾರೆ. ಈ ಹಿನ್ನಲೆ ಜಮೀನುಗಳ ಸುತ್ತ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Mon, 7 August 23

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್