AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಚಾಮರಾಜನಗರದ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಬಲಿಯಾದ ಪ್ರಕರಣ ಸಂಬಂಧ ತನಿಖೆ ವೇಳೆ ಹಲವು ಪ್ರಮುಖ ವಿಚಾರಗಳು ಬಯಲಾಗಿವೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕಳ್ಳಬೇಟೆ ತಡೆ ಶಿಬಿರದಲ್ಲಿ ಸಿಬ್ಬಂದಿ ಇರಲ್ಲ ಎಂದು ಭಾವಿಸಿ ಬೇಟೆಗಾಗಿ ನಾಲ್ವರು ಬಂದಿದ್ದರು. ಈ ವೇಳೆ ಕ್ಯಾಂಪ್​​ನಲ್ಲಿದ್ದ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ಫೈರಿಂಗ್​​ ನಡೆದು 3 ಜೀವ ಹೋಗಿದೆ ಎನ್ನಲಾಗಿದೆ. ಅಲ್ಲದೆ, ಮೃತರ ಪೈಕಿ ಓರ್ವನ ಮೇಲೆ ಕೆಲ ಪ್ರಕರಣಗಳು ಇರುವುದು ಕೂಡ ಬಹಿರಂಗಗೊಂಡಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ
ದಾಳಿಯಿಂದ ಹಾನಿಗೊಳಗಾಗಿರುವ ವಸ್ತುಗಳುImage Credit source: Tv9 Kannada
ಕಿರಣ ಹೆಚ್​. ವಿ.
| Edited By: |

Updated on:Aug 19, 2026 | 3:49 PM

Share

ಬೆಂಗಳೂರು/ಚಾಮರಾಜನಗರ, ಆಗಸ್ಟ್​​ 19: ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ (Firing) ಮೂವರು ಬಲಿ ಪ್ರಕರಣ ಸಂಬಂಧ ಬಗೆದಷ್ಟೂ ಅಚ್ಚರಿಯ ವಿಚಾರಗಳು ಬಯಲಾಗುತ್ತಿವೆ. ಆಗಸ್ಟ್​​ 14ರ ರಾತ್ರಿ ತಾಂಮ್ರಿಪಲ್ಲಿ ಕಳ್ಳಬೇಟೆ ತಡೆ ಶಿಬಿರದ (Anti-Poaching Camp) ಬಳಿ ಫೈರಿಂಗ್​​ ಆಗಿದ್ದು, ಕಾವೇರಿ ವನ್ಯಧಾಮದಲ್ಲಿ ಗುಂಡಿನ ಸದ್ದು ಮೊಳಗಿದೆ ಎಂಬ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗಾರ್ಡ್​​ ಮಾಹಿತಿ ನೀಡಿದ್ದ ಎಂಬುದು ಗೊತ್ತಾಗಿದೆ.

ಘಟನೆ ನಡೆದ ದಿನ ಆಗಿದ್ದೇನು?

ಹೀಗಾಗಿ ಆಗಸ್ಟ್​​ 15ರಂದು ಬೇಟೆಗಾರರು ಮತ್ತು ಕಾಡಿನಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ಇಟ್ಟಿದ್ದರು. ಆ ದಿನಂದೇ ನಾಲ್ವರು ಬೇಟೆಯಾಡಲೆಂದು ಕಾಡಿಗೆ ತೆರಳಿದ್ದರು. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಅಧಿಕಾರಿಗಳು ಧ್ವಜಾರೋಹಣಕ್ಕೆ ತೆರಳಿರುತ್ತಾರೆ ಎಂದು ಇವರು ಭಾವಿಸಿದ್ದರು. ಆದರೆ ಅಂದು ಅರಣ್ಯ ಇಲಾಖೆ ಸಿಬ್ಬಂದಿ ಕಳ್ಳಬೇಟೆ ತಡೆ ಶಿಬಿರದಲ್ಲಿಯೇ ಇದ್ದರು. ಈ ವೇಳೆ ಬೇಟೆಗಾರರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶೂಟೌಟ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಅರಣ್ಯ ಇಲಾಖೆ ನಡೆಗೆ ವ್ಯಕ್ತವಾಯ್ತು ಭಾರಿ ಅನುಮಾನ!

ಮೃತರ ಪೈಕಿ ಓರ್ವನ ಮೇಲಿವೆ ಕೆಲ ಪ್ರಕರಣ

ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಟಾರ್ಗೆಟ್​​ ಮಾಡಿ, ಮೃತರ ಕಡೆಯವರು ಇಲಾಖಾ ಕ್ಯಾಂಪ್​​ಗಳನ್ನು ಸ್ಫೋಟಗೊಳಿಸಿದ್ದಾರೆ. ಮಿಂಚಿನಹಳ್ಳಿ , ಭೀಮೇಶ್ವರಿ, ಒಳ್ಳೆಮರದ ಹಟ್ಟಿ, ಬೂದಿಕೆರೆ, ಬಂಡಹಳ್ಳಿ ಮತ್ತು ಕಲಿದೊಡ್ಡಿ ಸೇರಿದಂತೆ ಒಟ್ಟು 6 ಕಡೆ ಕಳ್ಳಬೇಟೆ ತಡೆ ಶಿಬಿರಗಳ ದಾಳಿ ನಡೆಸಲಾಗಿದೆ. ಇನ್ನು ಗುಂಡಿನ ದಾಳಿ ವೇಳೆ ಮೃತಪಟ್ಟಿರುವ ಮೂವರ ಪೈಕಿ ಪೀಟರ್​​ ಮೇಲೆ ಬೇರೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಗಳಿದ್ದು, ಆತನಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಚರ್ಚ್​​ಗಳಲ್ಲಿ ಆತ 3 ತಿಂಗಳು ಅಡಗಿ ಕುಳಿತಿದ್ದ ಎಂಬ ಮಾಹಿತಿಯೂ ಸಿಕ್ಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:44 pm, Wed, 19 August 26

Follow Us
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ