AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಮರಳಹಳ್ಳಿ ಬಳಿ ಹುಲಿ ದಾಳಿಗೆ ಅರಣ್ಯ ಇಲಾಖೆಯ ಕಳ್ಳಬೇಟೆ ತಡೆ ಶಿಬಿರದ ವಾಚರ್ ಸ್ಥಳದಲ್ಲೇ ದುರಂತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಗಸ್ತಿಗೆ ತೆರಳಿದ್ದ ವೇಳೆ ಹುಲಿ ಏಕಾಏಕಿ ದಾಳಿ ಮಾಡಿದೆ. ಬಂಡೀಪುರ ಸಿಎಫ್ ಪ್ರಭಾಕರನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಚಾಮರಾಜನಗರ: ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಮೃತ ಸಣ್ಣ ಹೈದ, ಹುಲಿ(ಸಂಗ್ರಹ ಚಿತ್ರ)
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Dec 27, 2025 | 5:48 PM

Share

ಚಾಮರಾಜನಗರ, ಡಿಸೆಂಬರ್​ 27: ಹುಲಿ ದಾಳಿಗೆ (Tiger Attack) ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಸಣ್ಣ ಹೈದ(56) ಮೃತ ಅರಣ್ಯ ಸಿಬ್ಬಂದಿ. ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು?

ಚಾಮರಾಜನಗರದಲ್ಲಿ ದಿನ ಕಳೆದಂತೆ ಹುಲಿಗಳ ಆರ್ಭಟ ಮಿತಿಮೀರಿದೆ. ಕೇವಲ ಗುಂಡ್ಲುಪೇಟೆ ಭಾಗ ಅಷ್ಟೇ ಅಲ್ಲ ಚಾಮರಾಜನಗರ ಹನೂರು ತಾಲೂಕುಗಳಲ್ಲಿಯೂ ವ್ಯಾಘ್ರನ ಉಪಟಳ ಮಿತಿಮೀರಿದೆ. ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದಲ್ಲಿ ಬೃಹತ್ ವ್ಯಾಘ್ರವೊಂದು ಮೈಸೂರು ಕೇಜ್​ನಲ್ಲಿ ಲಾಕ್ ಆಗಿತ್ತು.

ಇದನ್ನೂ ಓದಿ: ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ

ಇನ್ನೊಂದೆಡೆ ಚಾಮರಾಜನಗರ ತಾಲೂಕಿನ ನಂಜೆದೇವನಪುರದಲ್ಲಿ 5 ಹುಲಿಗಳು ಜಮೀನಿನಲ್ಲಿ ಓಡಾಟ ನಡೆಸಿ ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​ನ ಸಿಬ್ಬಂದಿ ಅದೆಷ್ಟೂ ತಡಕಾಡಿದರು ಒಂದು ವ್ಯಾಘ್ರ ಸಹ ಇನ್ನು ಸೆರೆ ಹಿಡಿಯುವುದಕ್ಕೆ ಆಗುತ್ತಿಲ್ಲ. ಈ ಪ್ರಕರಣ ಮಾಸುವ ಮುನ್ನವೇ ಮತ್ತೆ ಗಡಿ ನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

56 ವರ್ಷದ ಸಣ್ಣ ಹೈದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಮರಳಹಳ್ಳದ ಕಳ್ಳಬೇಟೆ ಶಿಬಿರದಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ದಿನ ನಿತ್ಯ ಈ ಮರಳಹಳ್ಳ ಕ್ಯಾಂಪ್ ಸುತ್ತಮುತ್ತ ಬೀಟ್ ಹಾಕುವುದು, ಯಾರಾದರೂ ಕಾಡುಗಳ್ಳರು ಸಂಚರಿಸಿದ್ದಾರೆ, ಬೇಟೆ ನಡೆಸಿದ್ದಾರಾ ಎಂದು ಪತ್ತೆ ಹಚ್ಚುವುದರ ಜೊತೆ ಪ್ರಾಣಿಗಳ ಓಡಾಟದ ಮೇಲು ಕಣ್ಣಿಟ್ಟಿರ ಬೇಕು.

ದಿನ ನಿತ್ಯ ಬೀಟ್​​ಗೆ ಹೋಗುವ ಹಾಗೆ ತನ್ನ ಕ್ಯಾಂಪ್​ನ 4 ಮಂದಿ ಜೊತೆ ಇಂದು ಮಧ್ಯಾಹ್ನ ಸಣ್ಣಹೈದ ಬೀಟ್ ಗೆ ಹೋಗಿದ್ದರು. ಹುಲ್ಲು ಬೀಜಗಳನ್ನ ಆಯುವ ಕೆಲಸ ಮಾಡ್ತಾಯಿದ್ರು. ಈ ವೇಳೆ ಹಠಾತ್ತನೆ ಹುಲಿವೊಂದು ಸಣ್ಣ ಹೈದನ ಮೇಲೆ ದಾಳಿ ನಡೆಸಿದೆ ತಕ್ಷಣವೇ ಅಲರ್ಟ್ ಅದ ಜೊತೆಗಿದ್ದ ಸಿಬ್ಬಂದಿ ಕೂಗಿಕೊಂಡು ಪರಿಣಾಮ ಹುಲಿ ಪರಾರಿಯಾಗಿದೆ, ಆದರೆ ಸಣ್ಣ ಹೈದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದ್ಯ ಸ್ಥಳಕ್ಕೆ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಎಫ್ ಹಾಗೂ ಮುಖ್ಯಸ್ಥ ಪ್ರಭಾಕರನ್ ಭೇಟಿ ನೀಡಿ  ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತೆ. ಒಟ್ಟಿನಲ್ಲಿ ಹುಲಿ ದಾಳಿಗಳು ಗಡಿ ನಾಡು ಚಾಮರಾಜನಗರದಲ್ಲಿ ಮುಂದುವರೆದಿದ್ದು, ಜನ ಅಷ್ಟೇ ಅಲ್ಲ ಅರಣ್ಯ ಸಿಬ್ಬಂದಿ ಕೂಡ ಆತಂಕ ಪಡುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:37 pm, Sat, 27 December 25

ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಮೋದಿ ಚಾಲನೆ
ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಮೋದಿ ಚಾಲನೆ
ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು
ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಗದಗ: ಆಂಜನೇಯ ದೇಗುಲದಲ್ಲಿ 3 ದಿನಗಳಿಂದ ನಿರಂತರ ನಿಗೂಢ ಗೆಜ್ಜೆ ಶಬ್ದ!
ಗದಗ: ಆಂಜನೇಯ ದೇಗುಲದಲ್ಲಿ 3 ದಿನಗಳಿಂದ ನಿರಂತರ ನಿಗೂಢ ಗೆಜ್ಜೆ ಶಬ್ದ!
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ವಿಡಿಯೋ ನೋಡಿ
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ವಿಡಿಯೋ ನೋಡಿ
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್
ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ
ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ