AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಫೈರಿಂಗ್​​ ಕೇಸ್​​: ತಲೆಮರೆಸಿಕೊಂಡಿರುವ ನಾಲ್ಕನೇ ಆರೋಪಿ ಕುರಿತು ಮಹತ್ವದ ಸುಳಿವು ಲಭ್ಯ

Chamarajanagar Forest Firing: ಚಾಮರಾಜನಗರ ಫೈರಿಂಗ್ ಪ್ರಕರಣದ ನಾಲ್ಕನೇ ಆರೋಪಿ ಮಹಿಮ ದಾಸ್ ಲೊಕೇಷನ್ ಪತ್ತೆಯಾಗಿದ್ದು, ಪೊಲೀಸರು ಕಣ್ಗಾವಲು ವಹಿಸಿದ್ದಾರೆ. ಮತ್ತೊಂದೆಡೆ ಪ್ರಕರಣ ಸಂಬಂಧ ಮಾಜಿಸ್ಟ್ರೇಟ್ ನೇತೃತ್ವದ ತನಿಖೆಯ ವರದಿ ಶನಿವಾರ ಕೈಸೇರಲಿದ್ದು, ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಚಾಮರಾಜನಗರ ಫೈರಿಂಗ್​​ ಕೇಸ್​​: ತಲೆಮರೆಸಿಕೊಂಡಿರುವ ನಾಲ್ಕನೇ ಆರೋಪಿ ಕುರಿತು ಮಹತ್ವದ ಸುಳಿವು ಲಭ್ಯ
ಮಹಿಮ ದಾಸ್Image Credit source: Tv9 Kannada
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 20, 2026 | 3:45 PM

Share

ಮುಖ್ಯಾಂಶಗಳು

  • ಗುಂಡೇಟಿಗೆ ಹನೂರು ಬಳಿ ಮೂವರು ಬಲಿ ಪ್ರಕರಣ
  • ತಲೆಮರೆಸಿಕೊಂಡಿರುವ 4ನೇ ಆರೋಪಿ ಸುಳಿವು ಲಭ್ಯ
  • ಆತನ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟ ಖಾಕಿ

ಚಾಮರಾಜನಗರ, ಆಗಸ್ಟ್​​ 20: ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಚಾಮರಾಜನಗರದ ಹನೂರು ಬಳಿ ಮೂವರು ಬಲಿ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ನಾಲ್ಕನೇ ಆರೋಪಿ ಕುರಿತು ಮಹತ್ವದ ಸುಳಿವು ಸಿಕ್ಕಿದೆ. ಅರಣ್ಯ ಸಿಬ್ಬಂದಿ ಮಹಿಮ ದಾಸ್ ಲೊಕೇಷನ್ ಪತ್ತೆ ಹಚ್ಚಿದ್ದು, ಆರೋಪಿ ಚಾಮರಾಜನಗರ ಜಿಲ್ಲಾ ಪೊಲೀಸರ ಕಣ್ಗಾವಲಿನಲ್ಲಿದ್ದಾನೆ ಎನ್ನಲಾಗಿದೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಮಹಿಮ ದಾಸ್, ಸದ್ಯ ಅಜ್ಞಾತ ಸ್ಥಳದಲ್ಲಿದ್ದಾನೆ. ಹೀಗಾಗಿ ಆತನ ಚಲನವಲನಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈತ ಎನ್​ಕೌಂಟರ್​ನಲ್ಲಿ ಬದುಕುಳಿದ ಏಕೈಕ ವಿಟ್ನೆಸ್ ಆಗಿದ್ದು, ಗುಂಡೇಟಿಗೆ ಬಲಿಯಾದವರ ಜತೆ ಮಹಿಮ ದಾಸ್​ ಇದ್ದ ಎನ್ನಲಾಗಿದೆ.

‘ವರದಿ ಬಂದ ಬಳಿಕ ಕ್ರಮ’

ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರು ಪ್ರಕರಣವನ್ನು ಮಾಜಿಸ್ಟ್ರೇಟ್ ತನಿಖೆಗೆ ವಹಿಸಿದ್ದು, ಆ ತನಿಖೆಯ ವರದಿ ಶನಿವಾರ ಬರಲಿದೆ. ವರದಿ ಬಂದ ಬಳಿಕ ಅದನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ತೇವೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ನಮ್ಮ ಅಧಿಕಾರಿಗಳು ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಸಿಬ್ಬಂದಿಯ ಕೊಠಡಿ ಕೂಡ ಧ್ವಂಸಗೊಳಿಸಿದ್ದಾರೆ. ಜಿಲೆಟಿನ್ ಸಹ ಬಳಸಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಎಲ್ಲವನ್ನೂ ತನಿಖೆ ಮಾಡುತ್ತೇವೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ: ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಗುಂಡಿನದಾಳಿಯಲ್ಲಿ​ ಬಚಾವಾಗಿದ್ದ ಮಹಿಮದಾಸ್

ಅರಣ್ಯಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಗುಂಡೇಟಿಗೆ ಮೂವರು ಬಲಿ ಪ್ರಕರದ ಬಳಿಕ ದುಷ್ಕರ್ಮಿಗಳು ಅರಣ್ಯ ಇಲಾಖೆಯನ್ನೇ ಟಾರ್ಗೆಟ್ ಮಾಡಿಕೊಂಡಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಬೆಂಕಿ ಇಟ್ಟಿದ್ದಾರೆ. ಪರಿಣಾಮ, ಬರೋಬ್ಬರಿ 2.5 ಹೆಕ್ಟರ್​ನಷ್ಟು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಮೊನ್ನೆ ಜಿಲೆಟಿನ್ ಕಡ್ಡಿ ಇಟ್ಟು ಕಳ್ಳಬೇಟೆ ಶಿಬಿರಗಳನ್ನು ಸ್ಫೋಟಿಸಿದ್ದರೆ, ಈಗ ಅರಣ್ಯಕ್ಕೇ ಬೆಂಕಿ ಇಡಲಾಗಿದೆ. ಹೀಗಾಗಿ ಪ್ರಾಣ ಭಯದಲ್ಲೇ ಈ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯಕ್ಕೆ ಬರಬೇಕಿರುವ ಸ್ಥಿತಿ ಉದ್ಭವಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:45 pm, Thu, 20 August 26

Follow Us
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು