AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಅರಣ್ಯಾಧಿಕಾರಿಯ ಪ್ರತಿಷ್ಠೆಗೆ ಜನ ಕಂಗಾಲು, ಬಡ ಗ್ರಾಮಸ್ಥರಿಗೆ ಕಾಡುಮೇಡಿನ ದುರ್ಗಮ ಹಾದಿಯೇ ಗತಿ!

ದೈನಂದಿನ ಕೆಲಸ ಕಾರ್ಯಗಳಿಗೆ ಮಹದೇಶ್ವರ ಬೆಟ್ಟಕ್ಕೆ ಕಿಲೋಮೀಟರ್ ‌ಗಟ್ಟಲೆ ಬೆಟ್ಟಗುಡ್ಡ ಹತ್ತಿ ಇಳಿದು ಸಾಗಬೇಕು. ಕಾಡು ಪ್ರಾಣಿಗಳು ದಾಳಿ ನಡೆಸುವ ಆತಂಕದಲ್ಲೇ ನಡೆಯಬೇಕು.

ಚಾಮರಾಜನಗರ: ಅರಣ್ಯಾಧಿಕಾರಿಯ ಪ್ರತಿಷ್ಠೆಗೆ ಜನ ಕಂಗಾಲು, ಬಡ ಗ್ರಾಮಸ್ಥರಿಗೆ ಕಾಡುಮೇಡಿನ ದುರ್ಗಮ ಹಾದಿಯೇ ಗತಿ!
ಅರಣ್ಯಾಧಿಕಾರಿಯ ಪ್ರತಿಷ್ಠೆಗೆ ಜನ ಕಂಗಾಲು
TV9 Web
| Edited By: |

Updated on:Dec 28, 2022 | 2:28 PM

Share

ಚಾಮರಾಜನಗರ: ಅಧಿಕಾರಿಯೊಬ್ಬರ ಪ್ರತಿಷ್ಠೆಗೆ ಜನ ಕಂಗಾಲಾಗಿದ್ದಾರೆ. ಹಿಂದಿನ ಅಧಿಕಾರಿ ಮಾಡಿದ ಯೋಜನೆ ಈಗಿನ ಅಧಿಕಾರಿಯಿಂದ ನಿರ್ಲಕ್ಷ್ಯಕ್ಕೊಳಗಾಗಿದೆ. ಮಹದೇಶ್ವರ ಬೆಟ್ಟದಲ್ಲಿ ಜನವನ ಸಾರಿಗೆ ಸ್ಥಗಿತಗೊಂಡಿದೆ. ಮಹದೇಶ್ವರ ಬೆಟ್ಟ ಸುತ್ತಮುತ್ತಲಿನ (Chamarajanagar) ಗ್ರಾಮಸ್ಥರು ಮತ್ತೆ ಡೋಲಿ (Transportation) ಮೊರೆ ಹೋಗಿದ್ದಾರೆ. ಅರಣ್ಯದಲ್ಲಿನ ಗ್ರಾಮಸ್ಥರ ( villagers) ಅನುಕೂಲಕ್ಕೆ ಅರಣ್ಯ ಇಲಾಖೆ ಆರಂಭಿಸಿದ್ದ ಜನವನ ಸಾರಿಗೆ ಅದಾಗಿತ್ತು. ದುರ್ಗಮ ಅರಣ್ಯ ಪ್ರದೇಶದಲ್ಲಿ ಸಂಚರಿಸುವ ಸಾಮರ್ಥ್ಯವಿದ್ದ ಫೋರ್ಸ್ ಗೂರ್ಖಾ ವಾಹನ ಸೌಲಭ್ಯವನ್ನು ಅರಣ್ಯ ಇಲಾಖೆ ಕಲ್ಪಿಸಿತ್ತು.

ವಾಹನಗಳ ನಿರ್ವಹಣೆಯನ್ನು ಅರಣ್ಯ ಇಲಾಖೆಯು ಪರಿಸರ ಅಭಿವೃದ್ಧಿ ಸಮಿತಿಗಳಿಗೆ ವಹಿಸಿತ್ತು. ಇದಕ್ಕಾಗಿ ಹಿಂದಿನ ಅಧಿಕಾರಿ ಸಾಕಷ್ಟು ಹಣವನ್ನು ಮೀಸಲಿಟ್ಟಿದ್ದರು. ಮಲೈ ಮಹದೇಶ್ವರ ವನ್ಯಜೀವಿ ಧಾಮದ ಹಿಂದಿನ ಅಧಿಕಾರಿ ಏಡುಕೊಂಡಲರಿಂದ ಈ ಯೋಜನೆ ಆರಂಭವಾಗಿತ್ತು. ಜನವನ ಸಾರಿಗೆ ವಾಹನಗಳು ಅರಣ್ಯಲ್ಲಿನ ಒಂಬತ್ತು ಗ್ರಾಮಗಳ ಜನರ ಅನುಕೂಲಕ್ಕೆ ನಾಲ್ಕು ಮಾರ್ಗಗಳಲ್ಲಿ ಸಂಚರಿಸುತ್ತಿದ್ದವು.

ಡಿಎಫ್ ಓ ಸಂತೋಷ್ ವಿರುದ್ಧ ಜನರ ಆಕ್ರೋಶ

ವಸೂಲಿಯಾಗುವ ಪ್ರಯಾಣ ದರದಲ್ಲಿ ವಾಹನಗಳ ನಿರ್ವಹಣೆಯನ್ನು ಅರಣ್ಯ ಇಲಾಖೆ ಪರಿಸರ ಅಭಿವೃದ್ಧಿ ಸಮಿತಿಗಳಿಗೆ ಜವಾಬ್ದಾರಿ ವಹಿಸಿತ್ತು. ರಸ್ತೆ ಹದಗೆಟ್ಟಿದೆ ಎಂದು ನೆಪ ಹೇಳಿ ವಾಹನ ನಿಲ್ಲಿಸಿರುವ ಅಧಿಕಾರಿಗಳು. ಗ್ರಾಮಸ್ಥರಿಗೆ ಮತ್ತೆ ಡೋಲಿಯೇ ಗತಿಯಾಗಿದೆ. ದುರ್ಗಮ ಕಾಡಿನ ಹಾದಿಯೇ ಇವರಿಗೆ ಹೆದ್ದಾರಿ! ಡೋಲಿಯೇ ಆ್ಯಂಬುಲೆನ್ಸ್ ಆಗಿದೆ. ಅನಾರೋಗ್ಯಪೀಡಿತರು, ಗರ್ಭಿಣಿಯರನ್ನು ಡೋಲಿ ಕಟ್ಟಿಯೇ ಹೊತ್ತೊಯ್ಯಬೇಕು. Also Read:

ಚಾಮರಾಜನಗರ: ಅರಣ್ಯಾಧಿಕಾರಿಯ ಪ್ರತಿಷ್ಠೆಗೆ ಜನ ಕಂಗಾಲು, ಬಡ ಗ್ರಾಮಸ್ಥರಿಗೆ ಕಾಡುಮೇಡಿನ ದುರ್ಗಮ ಹಾದಿಯೇ ಗತಿ!

ದೈನಂದಿನ ಕೆಲಸ ಕಾರ್ಯಗಳಿಗೆ ಮಹದೇಶ್ವರ ಬೆಟ್ಟಕ್ಕೆ ಕಿಲೋಮೀಟರ್ ‌ಗಟ್ಟಲೆ ಬೆಟ್ಟಗುಡ್ಡ ಹತ್ತಿ ಇಳಿದು ಸಾಗಬೇಕು. ಕಾಡು ಪ್ರಾಣಿಗಳು ದಾಳಿ ನಡೆಸುವ ಆತಂಕದಲ್ಲೇ ನಡೆಯಬೇಕು. ನಾವು ವಾಹನ ಕೊಟ್ಟಿದ್ದೇವೆ, ನಿರ್ವಹಣೆ ನಮ್ಮ ಜವಾಬ್ದಾರಿ ಅಲ್ಲ ಎನ್ನುತ್ತಿದ್ದಾರೆ ಅರಣ್ಯಾಧಿಕಾರಿಗಳು. ಈಗಿನ ಡಿಎಫ್ ಓ ಸಂತೋಷ್ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:26 pm, Wed, 28 December 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು