AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಎನ್‌ಕೌಂಟರ್ ಪ್ರತಿಕಾರಕ್ಕೆ ಅರಣ್ಯವೇ ಬಲಿ: ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ

ಚಾಮರಾಜನಗರದ ಕೊಳ್ಳೇಗಾಲ ಅರಣ್ಯದಲ್ಲಿ ದುಷ್ಕರ್ಮಿಗಳಿಂದ ಸರಣಿ ಕೃತ್ಯಗಳು ಹೆಚ್ಚಾಗಿವೆ. ಮೂವರ ಎನ್‌ಕೌಂಟರ್ ನಂತರ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 10 ಎಕರೆ ಅರಣ್ಯಕ್ಕೆ ಬೆಂಕಿ ಹಚ್ಚಲಾಗಿದೆ. ಕಾವೇರಿ ವನ್ಯಜೀವಿಧಾಮದ ಕಳ್ಳಬೇಟೆ ತಡೆ ಕ್ಯಾಂಪ್‌ಗಳನ್ನು ಜಿಲೆಟಿನ್ ಬಳಸಿ ಸ್ಫೋಟಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಪ್ರಾಣಭಯ ಎದುರಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ತನಿಖೆ ತೀವ್ರಗೊಂಡಿದೆ.

ಚಾಮರಾಜನಗರ: ಎನ್‌ಕೌಂಟರ್ ಪ್ರತಿಕಾರಕ್ಕೆ ಅರಣ್ಯವೇ ಬಲಿ: ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ
ವನ್ಯಜೀವಿಧಾಮ ದಾಳಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 20, 2026 | 10:45 AM

Share

ಚಾಮರಾಜನಗರ, ಆ.20: ಇತ್ತೀಚೆಗೆ ನಡೆದ ಮೂವರ ಎನ್‌ಕೌಂಟರ್ ಘಟನೆಯ ಬೆನ್ನಲ್ಲೇ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಅರಣ್ಯ ಇಲಾಖೆಯನ್ನು ಗುರಿಯಾಗಿಸಿಕೊಂಡು ಸರಣಿ ಕೃತ್ಯಗಳನ್ನು ಎಸಗುತ್ತಿರುವುದು ಭಾರಿ ಆತಂಕ ಸೃಷ್ಟಿಸಿದೆ. ಕಾವೇರಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮಗಳಲ್ಲಿ ಅರಣ್ಯ ಸಿಬ್ಬಂದಿಯನ್ನು ಟಾರ್ಗೆಟ್ ಮಾಡುತ್ತಿರುವ ದುಷ್ಕರ್ಮಿಗಳು, ಇದೀಗ ಮಲೆ ಮಹದೇಶ್ವರ ವನ್ಯಜೀವಿಧಾಮದ ಸುಮಾರು 10 ಎಕರೆ (2.5 ಹೆಕ್ಟೇರ್) ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕೆನ್ನಾಲಿಗೆಗೆ ಬರೋಬ್ಬರಿ 10 ಎಕರೆ ಅರಣ್ಯ ಪ್ರದೇಶ ಸಂಪೂರ್ಣವಾಗಿ ಭಸ್ಮವಾಗಿದೆ. ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಕಾವೇರಿ ವನ್ಯಜೀವಿಧಾಮದ ಕಳ್ಳಬೇಟೆ ತಡೆ ಶಿಬಿರಗಳನ್ನು ಗುರಿಯಾಗಿಸಿಕೊಂಡಿದ್ದ ದುಷ್ಕರ್ಮಿಗಳು, ಜಿಲೆಟಿನ್ ಕಡ್ಡಿಗಳನ್ನು ಬಳಸಿ ನಾಲ್ಕು ಎಪಿಸಿ ಕ್ಯಾಂಪ್‌ಗಳನ್ನು ಸ್ಫೋಟಿಸಿ ಪುಡಿಪುಡಿ ಮಾಡಿದ್ದರು.

ಇದನ್ನೂ ಓದಿ: ಚಾಮರಾಜನಗರ ಶೂಟೌಟ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ, ಹೊರಬರುತ್ತಾ ಅಸಲಿ ಸತ್ಯ?

ಇಲ್ಲಿದೆ ನೋಡಿ ಸ್ಟೋರಿ:

ಮೂವರು ಬೇಟೆಗಾರರ ಎನ್‌ಕೌಂಟರ್ ನಂತರ ಕಾಡಿನಲ್ಲಿ ದುಷ್ಕರ್ಮಿಗಳ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಪ್ರತಿದಿನ ಪ್ರಾಣಭಯದಲ್ಲೇ ಕರ್ತವ್ಯಕ್ಕೆ ಹಾಜರಾಗುವ ಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಎಸಿಎಫ್ ವಿಜಯ್ ಹೊಸೂರು ಅವರು ಟಿವಿ9ಗೆ ನೀಡಿದ ಮಾಹಿತಿಯ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಲಾಗಿದ್ದು, ಅರಣ್ಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Thu, 20 August 26

Follow Us