ಚಾಮರಾಜನಗರ: ಚಿರತೆ ಓಡಿಸಲು ಹಾರಿಸಿದ ಗುಂಡು ತಗುಲಿ ನಾಲ್ವರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿನ ಜಮೀನಿಗೆ ನುಗ್ಗಿದ್ದ ಚಿರತೆಯನ್ನು ಓಡಿಸಲು ಅರಣ್ಯ ಸಿಬ್ಬಂದಿ ಮತ್ತು ಗ್ರಾಮಸ್ಥರು ತೆರಳಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಚಿರತೆ ಓಡಿಸಲು ಗುಂಡು ಹಾರಿಸಿದ್ದಾರೆ. ಈ ಗುಂಡು ತಗುಲಿ ನಾಲ್ವರು ಗಾಯಗೊಂಡಿದ್ದಾರೆ.

ಚಾಮರಾಜನಗರ: ಚಿರತೆ ಓಡಿಸಲು ಹಾರಿಸಿದ ಗುಂಡು ತಗುಲಿ ನಾಲ್ವರಿಗೆ ಗಾಯ
ಚಿರತೆ, ಗಾಯಗೊಂಡವರು
Edited By: ವಿವೇಕ ಬಿರಾದಾರ

Updated on: Sep 20, 2024 | 11:34 AM

ಚಾಮರಾಜನಗರ, ಸೆಪ್ಟೆಂಬರ್​ 20: ಗಡಿನಾಡು ಚಾಮರಾಜನಗರದಲ್ಲಿ (Chamarajanagar) ಮಾನವ – ಕಾಡುಪ್ರಾಣಿ ಸಂಘರ್ಷ ಮಿತಿ ಮೀರಿದೆ. ಚಿರತೆ (Leopard) ಓಡಿಸಲು ಹಾರಿಸಿದ ಗುಂಡು ತಗುಲಿ ನಾಲ್ವರು ಗಾಯಗೊಂಡಿರುವ ಘಟನೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತರ ಜಮೀನಿನಲ್ಲಿ ಅಡಗಿದ್ದ ಚಿರತೆ ಹಿಡಿಯಲು ಅರಣ್ಯ ಸಿಬ್ಬಂದಿ ಹೋಗಿದ್ದವರು. ಅರಣ್ಯ ಸಿಬ್ಬಂದಿ ಜೊತೆಗೆ ಗ್ರಾಮಸ್ಥರು ಕೂಡ ತೆರಳಿದ್ದರು. ಈ ವೇಳೆ ಚಿರತೆ ಅರಣ್ಯ ಸಿಬ್ಬಂದಿ ಮೇಲೆ ಮಾಡಲು ಯತ್ನಿಸಿದೆ. ಅರಣ್ಯ ಸಿಬ್ಬಂದಿ ಕೂಡಲೆ ಚಿರತೆ ಓಡಿಸಲು ಗುಂಡು ಹಾರಿಸಿದ್ದಾರೆ. ಈ ಗುಂಡು ತಗುಲಿ ಮದ್ದೂರಿನ ರವಿ, ಶಿವು, ರಂಗಸ್ವಾಮಿ, ಮೂರ್ತಿ ಎಂಬುವರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಗಾಯವಾಗಿದ್ದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಅರಣ್ಯ ಸಿಬ್ಬಂದಿ ಆತ್ಮರಕ್ಷಣೆಗೆ ದೊಣ್ಣೆಯಿಂದಲೂ ಹೊಡೆದಾಗ ಚಿರತೆ ಸತ್ತಿರುವ ಶಂಕೆ ವ್ಯಕ್ತವಾಗಿದೆ.

ವಿಆರ್​ಎಲ್ ಬಸ್ ಹರಿದು 125 ಕುರಿಗಳ ಸಾವು

ರಾಯಚೂರು: ವಿಆರ್​ಎಲ್ ಬಸ್ ಹರಿದು 125 ಕುರಿಗಳು ಮೃತಪಟ್ಟಿರುವ ಘಟನೆ ರಾಯಚೂರು ಹೊರವಲಯದ ಯರಮರಸ್ ಬೈಪಾಸ್​ನಲ್ಲಿ ನಡೆದಿದೆ. ವಿಆರ್​ಎಲ್ ಬಸ್ ಹೈದರಾಬಾದ್​ನಿಂದ ಬೆಳಗಾವಿಗೆ ಹೊರಟಿತ್ತು.
ತೆಲಂಗಾಣದ ಮಕ್ತಲ್ ಬಳಿಯ ಓಬಳಾಪುರಂ ಗ್ರಾಮದ ಮಲ್ಲೇಶ್, ಸೀನಪ್ಪ ಮತ್ತು ಬಾಲರಾಜು ಎಂಬುವರಿಗೆ ಸೇರಿದ 150 ಕ್ಕೂ ಹೆಚ್ಚು ಕುರಿಗಳು ತೆಲಂಗಾಣದಿಂದ ರಾಯಚೂರು ಮಾರ್ಗವಾಗಿ ಬರುತ್ತಿದ್ದವು. ಈ ವೇಳೆ ಚಾಲಕನ‌ ನಿಯಂತ್ರಣ ತಪ್ಪಿ ವಿಆರ್​ಎಲ್ ಬಸ್ ಕುರಿಗಳ ಮೇಲೆ ಹರಿದಿದೆ. ಘಟನೆಯಲ್ಲಿ 125 ಕುರಿಗಳು ಮೃತಪಟ್ಟಿವೆ, 18 ಕುರಿಗಳ ಸ್ಥಿತಿ ಗಂಭೀರವಾಗಿದೆ.

ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕುರಿಗಾಹಿಗರು ಪಾರಾಗಿದ್ದಾರೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:20 am, Fri, 20 September 24

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us