
ಚಾಮರಾಜನಗರ, ಜೂನ್ 16: ಇತ್ತೀಚಿಗೆ ಸರ್ಕಾರಿ ಶಾಲೆಗಳಲ್ಲಿ (Government School) ಮಕ್ಕಳ ದಾಖಲಾತಿ ಕ್ಷೀಣಿಸುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಮತ್ತು ಇತರೆ ಕಾರಣಗಳಿಂದ ಪೋಷಕರು ಮಕ್ಕಳನ್ನು ದಾಖಲು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ (Chamrajanagar) ಜಿಲ್ಲೆಯ ಕೊಳ್ಳೇಗಾಲದಲ್ಲಿರುವ ಸರ್ಕಾರಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿನೂತ ಅಭಿಯಾನದ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವಂತೆ ಪ್ರೇರೇಪಣೆ ನೀಡುತ್ತಿದ್ದಾರೆ.
ಸರ್ಕಾರಿ ಶಾಲೆಗೆ ಹೊಸದಾಗಿ ದಾಖಲಾಗುವ ಮಕ್ಕಳಿಗೆ ಶಿಕ್ಷಕ ತಮ್ಮ ವೇತನದಿಂದಲೇ 1 ಸಾವಿರ ರೂ. ಹಣ ನೀಡುವುದಾಗಿ ಘೋಷಿಸಿದ್ದಾರೆ. ಶಿಕ್ಷಕ ಶ್ರೀಧರ್ ಅವರು ಉಡುಗೊರೆ ನೀಡುವುದಾಗಿ ಘೋಷಿಸುವ ಮೂಲಕ ತಮ್ಮ ಸರ್ಕಾರಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಸರ್ಕಾರಿ ಶಾಲೆಯ ಮಕ್ಕಳು ಯಾವ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೂ ಕಮ್ಮಿ ಇಲ್ಲ. ವಿದ್ಯಾರ್ಥಿಗಳು ನಿರರ್ಗಳವಾಗಿ ಮಕ್ಕಳು ಇಂಗ್ಲಿಷ್ನಲ್ಲಿ ಮಾತನಾಡುತ್ತಾರೆ. ಕಳೆದ ವರ್ಷ 114 ವಿದ್ಯಾರ್ಥಿಗಳು ಈ ಶಾಲೆಗೆ ದಾಖಲಾಗಿದ್ದು, ಈ ಬಾರಿ 150 ಕ್ಕೆ ಏರಿಕೆಯಾಗಿದೆ. ಶಿಕ್ಷಕ ಶ್ರೀಧರ್ ಅವರ ನೂತನ ತಂತ್ರಕ್ಕೆ ಮೆಚ್ಚಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸರ್ಕಾರಿ ಶಾಲೆಗೆ ದಾಖಲಾಗುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ.ಸರ್ಕಾರಿ ಶಾಲೆಗಳತ್ತ ಮಕ್ಕಳು ಬರಲು, ಪೋಷಕರು ಒಲವು ತೋರಲು ಅನೇಕ ಕಾರಣಗಳಿಗಳಿವೆ. ಇದಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿರುವುದು ಪ್ರಮುಖ ಕಾರಣವಾಗಿದೆ.
ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ಗುಡ್ ಬೈ, ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ
ಅಲ್ಲದೆ, ಸಾಕಷ್ಟು ಶಾಲೆಗಳನ್ನು ಸಿಆರ್ಎಸ್ ಫಂಡ್ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಶಿಕ್ಷಕರ ಕೊರತೆ ಕೂಡ ನೀಗಿಸುವ ಕೆಲಸವಾಗಿದೆ. ಶಾಲೆಗಳ ಕಟ್ಟಡ ದುರಸ್ತಿ ಪಡಿಸಿಕೊಡಲಾಗಿದೆ. ಈ ಎಲ್ಲ ಕಾರಣಗಳಿಂದ ಮಕ್ಕಳು ಸರ್ಕಾರಿ ಶಾಲೆಗಳಿಗೆ ಬರುತ್ತಿದ್ದಾರೆ.