AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಯಲ್ಲಿ ಒಬ್ಬನೇ ವಿದ್ಯಾರ್ಥಿ: ಏನಾಯ್ತು ಈ ಕನ್ನಡ ಶಾಲೆ..?

ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಉಳಿದಿದ್ದಾನೆ.ಪೋಷಕರು ಮಕ್ಕಳನ್ನು ಬೇರೆ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಇದರಿಂದ ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ. ಸರ್ಕಾರ ಎಚ್ಚೆತ್ತು ಮುಚ್ಚುವ ಹಂತದಲ್ಲಿರುವ ಶಾಲೆಯನ್ನು ಉಳಿಸಬೇಕೆಂದು ಆಗ್ರಹ ವ್ಯಕ್ತವಾಗಿದೆ.

ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಯಲ್ಲಿ ಒಬ್ಬನೇ ವಿದ್ಯಾರ್ಥಿ: ಏನಾಯ್ತು ಈ ಕನ್ನಡ ಶಾಲೆ..?
ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jun 24, 2025 | 10:42 PM

Share

ಚಾಮರಾಜನಗರ, ಜೂನ್​ 24: ಗಡಿ ಜಿಲ್ಲೆ ಚಾಮರಾಜನಗರದಲ್ಲಿ (Chamrajanagar) ಕಳೆದ ವರ್ಷಕ್ಕಿಂತ ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಯಲ್ಲಿ (Government School) ದಾಖಲಾತಿ ಪಡೆದಿದ್ದು, ಇದಕ್ಕೆ ಕಾರಣ ಸರ್ಕಾರಿ ಶಾಲೆಯ ಶಿಕ್ಷಕನ ವಿನೂತ ಅಭಿಯಾನ ಎಂದು ವರದಿಯಾಗಿತ್ತು. ಆದರೆ ಇದೀಗ, ಇದೇ ಚಾಮರಾಜನಗರ ಜಿಲ್ಲೆಯಲ್ಲಿನ ಒಂದು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಲ್ಲದೆ ಮುಚ್ಚುವ ಹಂತಕ್ಕೆ ತಲುಪಿದೆ. ಚಾಮರಾಜನಗರ ತಾಲೂಕಿನ ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೋಷಕರು ಮಕ್ಕಳನ್ನು ಕಳುಹಿಸುತ್ತಿಲ್ಲ. ಟಿಸಿ ಪಡೆದು ಬೇರೆ ಶಾಲೆಗೆ ದಾಖಲಿಸುತ್ತಿದ್ದಾರೆ. ಸದ್ಯ ಈ ಶಾಲೆಯಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ ಇದ್ದು ಮುಚ್ಚುವ ಹಂತಕ್ಕೆ ಬಂದಿದೆ.

ಈ ಹಿಂದೆ ಈ ಶಾಲೆಯಲ್ಲಿ ಮೂವರು ಶಿಕ್ಷಕರಿದ್ದರು. ಇವರ ಒಳಜಗಳದಿಂದ ಸಮರ್ಪಕವಾಗಿ ಪಾಠ ನಡೆಯದೆ ಪೋಷಕರು ಬೇಸತ್ತು ಹಲವು ಬಾರಿ ಈ ಶಾಲೆಗೆ ಬೀಗ ಜಡಿದು ಪ್ರತಿಭಟನೆಯನ್ನೂ ಮಾಡಿದ್ದರು. ಮಕ್ಕಳ ಸಂಖ್ಯೆಯೂ 22 ಕ್ಕೆ ಕುಸಿದಿತ್ತು. ನಂತರ ವರ್ಷಗಳಲ್ಲಿ ಮಕ್ಕಳ ಸಂಖ್ಯೆ ದಿಢೀರ್​ನೆ ಕುಸಿದಿದ್ದು, 12 ವಿದ್ಯಾರ್ಥಿಗಳು ಟಿಸಿ ಪಡೆದು ಬೇರೆ ಕಡೆ ಸೇರಿಕೊಂಡಿದ್ದಾರೆ. ಉಳಿದವರು ಟಿಸಿಗೆ ಅರ್ಜಿ ಸಲ್ಲಿಸಿದ್ದು ಶಾಲೆ ಕಡೆ ಮುಖ ಮಾಡುತ್ತಿಲ್ಲ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಶಿಕ್ಷಕ ಚಿನ್ನಸ್ವಾಮಿ, ಹಿಂದೆ ಈ ಶಾಲೆಯಲ್ಲಿ ಶಿಕ್ಷಕರು ಸರಿಯಾದ ರೀತಿ ಪಾಠ ಮಾಡುತ್ತಿಲ್ಲ ಎಂಬ ಆರೋಪ ಬಂದಿತ್ತು. ಊರಿನ ಗ್ರಾಮಸ್ಥರು ಕೂಡ ಅಧಿಕಾರಿಗಳಿಗೆ ದೂರು ಕೊಟ್ಟಿದ್ದರು. ನಂತರ ಆ ಇಬ್ಬರೂ ಶಿಕ್ಷಕರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ನಂತರ ಸಮಸ್ಯೆ ಉದ್ಬವವಾಗಿರಲಿಲ್ಲ. ಆದರೆ, ಪೋಷಕರು ಮಕ್ಕಳ ಟಿಸಿ ಪಡೆದು ಕರೆದುಕೊಂಡು ಹೋಗುತ್ತಿದ್ದು, ಯಾವ ಕಾರಣಕ್ಕೆ ಎಂಬುವುದು ಗೊತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ
Image
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕ ವಿನೂತನ ಪ್ರಯೋಗ
Image
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
Image
KCET Exam ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡಿ
Image
ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಕೆಇಎ ಹೊಸ ನಿಯಮ

ಜಾತಿ ಕಾರಣದಿಂದ ಮಕ್ಕಳ ಸಂಖ್ಯೆಗೆ ಇಳಿಮುಖ?

ಈ ಶಾಲೆಯಲ್ಲಿ ಮುಂಚೆ ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ‌ಸೇರಿದ ಇಬ್ಬರು ಅಡುಗೆ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಮಕ್ಕಳ ಸಂಖ್ಯೆ ಕಡಿಮೆಯಾದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ಮಹಿಳೆಯನ್ನು ಕೆಲಸದಿಂದ ತೆಗೆದು ಹಾಕಿ, ರೋಸ್ಟರ್ ಪದ್ಧತಿ ಪ್ರಕಾರ ದಲಿತ ಮಹಿಳೆಯನ್ನು ಅಡುಗೆ ಸಿಬ್ಬಂದಿಯಾಗಿ ನೇಮಕ ಮಾಡಲಾಯ್ತು. ದಲಿತ ಮಹಿಳೆ ಅಡುಗೆ ಮಾಡುತ್ತಾರೆ ಎಂಬ ಕಾರಣಕ್ಕೆ ಮಕ್ಕಳನ್ನು ಶಾಲೆ ಬಿಡಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ, ಈ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.

ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ಗುಡ್​ ಬೈ, ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ

ಒಟ್ಟಿನಲ್ಲಿ ಹಿಂದೆ ಈ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಪಾಠ ಮಾಡ್ತಿಲ್ಲವೆಂದು ಪೋಷಕರು ಗಲಾಟೆ ಮಾಡಿ ಶಿಕ್ಷಕರನ್ನು ಬೇರೆಡೆಗೆ ಎತ್ತಂಗಡಿ ಮಾಡಿಸಿದ್ದರು. ಹೊಸ ಶಿಕ್ಷಕರು ನೇಮಕವಾದರೂ ಕೂಡ ಪೋಷಕರು ತಮ್ಮ ಮಕ್ಕಳ ಟಿಸಿ ಪಡೆದು ಬೇರೆ ಶಾಲೆಗೆ ದಾಖಲಿಸುತ್ತಿರುವುದು ಏಕೆ ಪ್ರಶ್ನೆಗೆ ಉತ್ತರ ಇನ್ನೂ ಸಿಕ್ಕಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Tue, 24 June 25

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?