AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡ್ಲುಪೇಟೆ: ಕಾಂಗ್ರೆಸ್ ಶಾಸಕಗೆ ಸೆಡ್ಡು ಹೊಡೆದ ಬಿಜೆಪಿ ಗ್ರಾಮ ಪಂಚಾಯತಿ ಅಧ್ಯಕ್ಷೆ -ಎರಡು ಕಡೆ ಗುದ್ದಲಿ ಪೂಜೆ

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಗೋವಿಂದವಾಡಿ ಗ್ರಾ. ಪಂ. ಅಧ್ಯಕ್ಷೆ ಅಡ್ಡಿಪಡಿಸಿದ ಹಿನ್ನೆಲೆ ಗುದ್ದಲಿ ಪೂಜೆ ರಾಜಕೀಯ ತಿರುವು ಪಡೆದಿದ್ದು, ಪೊಲೀಸ್ ರಕ್ಷಣೆಯಲ್ಲಿ ಕಾರ್ಯಕ್ರಮ ನಡೆದಿದೆ. ಅಂತೂ ಗ್ರಾ ಪಂ ಕಚೇರಿ ಕಟ್ಟಡ ಭೂಮಿಪೂಜೆ ವಿಚಾರವು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದು, ಮುಂದೇನು ತಿರುವು ಪಡೆಯಲಿದೆಯೋ ಕಾದುನೋಡಬೇಕಿದೆ.

ಗುಂಡ್ಲುಪೇಟೆ: ಕಾಂಗ್ರೆಸ್ ಶಾಸಕಗೆ ಸೆಡ್ಡು ಹೊಡೆದ ಬಿಜೆಪಿ ಗ್ರಾಮ ಪಂಚಾಯತಿ ಅಧ್ಯಕ್ಷೆ -ಎರಡು ಕಡೆ ಗುದ್ದಲಿ ಪೂಜೆ
ಕಾಂಗ್ರೆಸ್ ಶಾಸಕಗೆ ಸೆಡ್ಡು ಹೊಡೆದ ಚಾಮರಾಜನಗರ ಬಿಜೆಪಿ ಗ್ರಾಮ ಪಂಚಾಯತಿ ಅಧ್ಯಕ್ಷೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ಸಾಧು ಶ್ರೀನಾಥ್​|

Updated on: Oct 26, 2023 | 11:53 AM

Share

ಚಾಮರಾಜನಗರ, ಅಕ್ಟೋಬರ್​ 26: ಸ್ಥಳೀಯ ಕಾಂಗ್ರೆಸ್ ಶಾಸಕಗೆ ಸೆಡ್ಡು ಹೊಡೆದ ಬಿಜೆಪಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗ್ರಾಮ ಪಂಚಾಯ್ತಿಯ ಒಂದೇ ಕಟ್ಟಡಕ್ಕೆ ಎರಡು ಕಡೆ ಗುದ್ದಲಿ ಪೂಜೆ ನೆರವೇರಿಸಿರುವ ಪ್ರಸಂಗ ನಡೆದಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಗೋವಿಂದವಾಡಿಯಲ್ಲಿ ಒಂದು ಕಡೆ (Govindavadi GP) ಗುಂಡ್ಲುಪೇಟೆ ಶಾಸಕ (Gundlupet Congress MLA) ಗಣೇಶ ಪ್ರಸಾದ್ ಗುದ್ದಲಿ ಪೂಜೆ (Foundation Stone) ನೆರವೇರಿಸಿದರೆ, ಅದನ್ನು ಒಪ್ಪದ ಗ್ರಾಮ ಪಂಚಾಯ್ತಿ (Govindavadi BJP Gram Panchayat) ಅಧ್ಯಕ್ಷೆ ನಾಗಲಾಂಬಿಕೆ ಅವರು ಮತ್ತೊಂದು ಕಡೆ ಭೂಮಿ ಪೂಜೆ ಮಾಡಿದ್ದಾರೆ.

ಈ ಹಿಂದೆ ಗೀತಾ ‌ಮಹದೇವಪ್ರಸಾದ್ ಶಾಸಕರಾಗಿದ್ದಾಗ ಭೂಮಿ ಪೂಜೆಯಾಗಿತ್ತು. ಸರ್ಕಾರಿ ಶಾಲೆಯಿಂದ ಒತ್ತುವರಿಯಾಗಿ ತಾಂತ್ರಿಕ ಸಮಸ್ಯೆಯಿಂದ ಕಾಮಗಾರಿ ಆರಂಭವಾಗಿರಲಿಲ್ಲ. ಶಿಕ್ಷಣ ಇಲಾಖೆಯು ಒತ್ತುವರಿ ಜಾಗದಲ್ಲಿ ಅಡುಗೆ ಮನೆ ನಿರ್ಮಿಸಿಕೊಂಡಿದೆ. ತಾಂತ್ರಿಕ ಸಮಸ್ಯೆ ಬಗೆಹರಿಸಿ, ಸ್ಥಳೀಯ ಶಾಸಕ ಗಣೇಶ್ ಪ್ರಸಾದ್ ಅವರು ಈಗ ಅದೇ ಜಾಗದಲ್ಲಿ ಮತ್ತೆ ಭೂಮಿ ಪೂಜೆ ಮಾಡಿದ್ದಾರೆ.

ಆದರೆ ಇದಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಡುಗೆ ಮನೆ ಒಡೆದು ಗ್ರಾ ಪಂ ಕಟ್ಟಡ ನಿರ್ಮಿಸುವುದು ಸರಿಯಿಲ್ಲ ಎಂದು ಅಧ್ಯಕ್ಷೆ ನಾಗಲಾಂಬಿಕೆ ಅಡ್ಡಿಪಡಿಸಲು ಮುಂದಾಗಿದ್ದಾರೆ.

ಗ್ರಾಮ ಪಂಚಾಯ್ತಿಗೆ ಸೇರಿದ ಮತ್ತೊಂದು ಕಡೆ ಕಟ್ಟಡ ನಿರ್ಮಿಸುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಶಾಸಕ ಗಣೇಶ್ ಪ್ರಸಾದ್ ಅವರು ಇದಕ್ಕೆ ಒಪ್ಪದೆ, ಈ ಹಿಂದೆ ಗುರುತಿಸಿದ್ದ ಜಾಗದಲ್ಲೇ ಭೂಮಿ ಪೂಜೆ ಮಾಡಿದ್ದಾರೆ. ಗ್ರಾ. ಪಂ. ಅಧ್ಯಕ್ಷೆ ಅಡ್ಡಿ ಹಿನ್ನೆಲೆ ಗುದ್ದಲಿ ಪೂಜೆ ರಾಜಕೀಯ ತಿರುವು ಪಡೆದಿದ್ದು, ಪೊಲೀಸ್ ರಕ್ಷಣೆಯಲ್ಲಿ ಕಾರ್ಯಕ್ರಮ ನಡೆದಿದೆ. ಅಂತೂ ಗ್ರಾ ಪಂ ಕಚೇರಿ ಕಟ್ಟಡ ಭೂಮಿಪೂಜೆ ವಿಚಾರವು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದು, ಮುಂದೇನು ತಿರುವು ಪಡೆಯಲಿದೆಯೋ ಕಾದುನೋಡಬೇಕಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ