Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡ್ಲುಪೇಟೆ: ಕಾಂಗ್ರೆಸ್ ಶಾಸಕಗೆ ಸೆಡ್ಡು ಹೊಡೆದ ಬಿಜೆಪಿ ಗ್ರಾಮ ಪಂಚಾಯತಿ ಅಧ್ಯಕ್ಷೆ -ಎರಡು ಕಡೆ ಗುದ್ದಲಿ ಪೂಜೆ

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಗೋವಿಂದವಾಡಿ ಗ್ರಾ. ಪಂ. ಅಧ್ಯಕ್ಷೆ ಅಡ್ಡಿಪಡಿಸಿದ ಹಿನ್ನೆಲೆ ಗುದ್ದಲಿ ಪೂಜೆ ರಾಜಕೀಯ ತಿರುವು ಪಡೆದಿದ್ದು, ಪೊಲೀಸ್ ರಕ್ಷಣೆಯಲ್ಲಿ ಕಾರ್ಯಕ್ರಮ ನಡೆದಿದೆ. ಅಂತೂ ಗ್ರಾ ಪಂ ಕಚೇರಿ ಕಟ್ಟಡ ಭೂಮಿಪೂಜೆ ವಿಚಾರವು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದು, ಮುಂದೇನು ತಿರುವು ಪಡೆಯಲಿದೆಯೋ ಕಾದುನೋಡಬೇಕಿದೆ.

ಗುಂಡ್ಲುಪೇಟೆ: ಕಾಂಗ್ರೆಸ್ ಶಾಸಕಗೆ ಸೆಡ್ಡು ಹೊಡೆದ ಬಿಜೆಪಿ ಗ್ರಾಮ ಪಂಚಾಯತಿ ಅಧ್ಯಕ್ಷೆ -ಎರಡು ಕಡೆ ಗುದ್ದಲಿ ಪೂಜೆ
ಕಾಂಗ್ರೆಸ್ ಶಾಸಕಗೆ ಸೆಡ್ಡು ಹೊಡೆದ ಚಾಮರಾಜನಗರ ಬಿಜೆಪಿ ಗ್ರಾಮ ಪಂಚಾಯತಿ ಅಧ್ಯಕ್ಷೆ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಸಾಧು ಶ್ರೀನಾಥ್​

Updated on: Oct 26, 2023 | 11:53 AM

ಚಾಮರಾಜನಗರ, ಅಕ್ಟೋಬರ್​ 26: ಸ್ಥಳೀಯ ಕಾಂಗ್ರೆಸ್ ಶಾಸಕಗೆ ಸೆಡ್ಡು ಹೊಡೆದ ಬಿಜೆಪಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗ್ರಾಮ ಪಂಚಾಯ್ತಿಯ ಒಂದೇ ಕಟ್ಟಡಕ್ಕೆ ಎರಡು ಕಡೆ ಗುದ್ದಲಿ ಪೂಜೆ ನೆರವೇರಿಸಿರುವ ಪ್ರಸಂಗ ನಡೆದಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಗೋವಿಂದವಾಡಿಯಲ್ಲಿ ಒಂದು ಕಡೆ (Govindavadi GP) ಗುಂಡ್ಲುಪೇಟೆ ಶಾಸಕ (Gundlupet Congress MLA) ಗಣೇಶ ಪ್ರಸಾದ್ ಗುದ್ದಲಿ ಪೂಜೆ (Foundation Stone) ನೆರವೇರಿಸಿದರೆ, ಅದನ್ನು ಒಪ್ಪದ ಗ್ರಾಮ ಪಂಚಾಯ್ತಿ (Govindavadi BJP Gram Panchayat) ಅಧ್ಯಕ್ಷೆ ನಾಗಲಾಂಬಿಕೆ ಅವರು ಮತ್ತೊಂದು ಕಡೆ ಭೂಮಿ ಪೂಜೆ ಮಾಡಿದ್ದಾರೆ.

ಈ ಹಿಂದೆ ಗೀತಾ ‌ಮಹದೇವಪ್ರಸಾದ್ ಶಾಸಕರಾಗಿದ್ದಾಗ ಭೂಮಿ ಪೂಜೆಯಾಗಿತ್ತು. ಸರ್ಕಾರಿ ಶಾಲೆಯಿಂದ ಒತ್ತುವರಿಯಾಗಿ ತಾಂತ್ರಿಕ ಸಮಸ್ಯೆಯಿಂದ ಕಾಮಗಾರಿ ಆರಂಭವಾಗಿರಲಿಲ್ಲ. ಶಿಕ್ಷಣ ಇಲಾಖೆಯು ಒತ್ತುವರಿ ಜಾಗದಲ್ಲಿ ಅಡುಗೆ ಮನೆ ನಿರ್ಮಿಸಿಕೊಂಡಿದೆ. ತಾಂತ್ರಿಕ ಸಮಸ್ಯೆ ಬಗೆಹರಿಸಿ, ಸ್ಥಳೀಯ ಶಾಸಕ ಗಣೇಶ್ ಪ್ರಸಾದ್ ಅವರು ಈಗ ಅದೇ ಜಾಗದಲ್ಲಿ ಮತ್ತೆ ಭೂಮಿ ಪೂಜೆ ಮಾಡಿದ್ದಾರೆ.

ಆದರೆ ಇದಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಡುಗೆ ಮನೆ ಒಡೆದು ಗ್ರಾ ಪಂ ಕಟ್ಟಡ ನಿರ್ಮಿಸುವುದು ಸರಿಯಿಲ್ಲ ಎಂದು ಅಧ್ಯಕ್ಷೆ ನಾಗಲಾಂಬಿಕೆ ಅಡ್ಡಿಪಡಿಸಲು ಮುಂದಾಗಿದ್ದಾರೆ.

ಗ್ರಾಮ ಪಂಚಾಯ್ತಿಗೆ ಸೇರಿದ ಮತ್ತೊಂದು ಕಡೆ ಕಟ್ಟಡ ನಿರ್ಮಿಸುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಶಾಸಕ ಗಣೇಶ್ ಪ್ರಸಾದ್ ಅವರು ಇದಕ್ಕೆ ಒಪ್ಪದೆ, ಈ ಹಿಂದೆ ಗುರುತಿಸಿದ್ದ ಜಾಗದಲ್ಲೇ ಭೂಮಿ ಪೂಜೆ ಮಾಡಿದ್ದಾರೆ. ಗ್ರಾ. ಪಂ. ಅಧ್ಯಕ್ಷೆ ಅಡ್ಡಿ ಹಿನ್ನೆಲೆ ಗುದ್ದಲಿ ಪೂಜೆ ರಾಜಕೀಯ ತಿರುವು ಪಡೆದಿದ್ದು, ಪೊಲೀಸ್ ರಕ್ಷಣೆಯಲ್ಲಿ ಕಾರ್ಯಕ್ರಮ ನಡೆದಿದೆ. ಅಂತೂ ಗ್ರಾ ಪಂ ಕಚೇರಿ ಕಟ್ಟಡ ಭೂಮಿಪೂಜೆ ವಿಚಾರವು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದು, ಮುಂದೇನು ತಿರುವು ಪಡೆಯಲಿದೆಯೋ ಕಾದುನೋಡಬೇಕಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?