AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧ ವಾಪಸ್

Himavad Gopalaswamy Temple: ಪ್ರಸಿದ್ಧ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಅಲ್ಲಿನ ದೇಗುಲಕ್ಕೆ ತೆರಳುವ ಭಕ್ತರು ಹಾಗೂ ಪ್ರವಾಸಿಗರನ್ನು ಗುಂಡ್ಲುಪೇಟೆ ತಾಲೂಕು ಆಡಳಿತ ನಿರಾಳರನ್ನಾಗಿಸಿದೆ. ಮಧ್ಯಾಹ್ನ ನಂತರ 3 ಗಂಟೆಯ ಬಳಿಕ ಬಸ್ ಸಂಚಾರಕ್ಕೆ ನಿಷೇಧ ಹೇರಿ ಹೊರಡಿಸಿದ್ದ ಆದೇಶವನ್ನು ಒಂದೇ ದಿನದಲ್ಲಿ ಹಿಂಪಡೆದಿದೆ. ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೆ ಮಣಿದು ಆಡಳಿತ ಈ ನಿರ್ಧಾರ ಕೈಗೊಂಡಿದೆ.

ಚಾಮರಾಜನಗರ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧ ವಾಪಸ್
ಹಿಮವದ್ ಗೋಪಾಲಸ್ವಾಮಿ ದೇವಸ್ಥಾನ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Feb 17, 2024 | 2:27 PM

Share

ಚಾಮರಾಜನಗರ, ಫೆಬ್ರವರಿ 17: ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ (Himavad Gopalaswamy Temple) ಬಸ್ ಸಂಚಾರವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ. ಸಂಚಾರ ನಿಷೇಧ ಆದೇಶವನ್ನು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ತಹಶೀಲ್ದಾರ್ ಹಿಂಪಡೆದಿದ್ದಾರೆ. ಹೀಗಾಗಿ ಬಂಡೀಪುರ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್​ ಸಂಚಾರ ಯಥಾಸ್ಥಿತಿಯಂತೆ ಮುಂದುವರಿಯಲಿದೆ.

ವನ್ಯಜೀವಿಗಳಿಗೆ ತೊಂದರೆ, ಪ್ರವಾಸಿಗರಿಗೆ ಅಪಾಯದ ಕಾರಣವೊಡ್ಡಿ ಮಧ್ಯಾಹ್ನ 3 ಗಂಟೆ ಬಳಿಕ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು. ಇದಕ್ಕೆ ಸಾರ್ವಜನಿಕರು, ಪ್ರವಾಸಿಗರು ಹಾಗೂ ಭಕ್ತರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು.

ವಿರೋಧದ ಕಾರಣ ಒಂದೇ ದಿನಕ್ಕೆ ನಿಷೇಧವನ್ನು ತಹಶೀಲ್ದಾರ್ ರಮೇಶ್‌ಬಾಬು ಹಿಂಪಡೆದಿದ್ದಾರೆ. ಇದೀಗ ನಿಷೇಧ ವಾಪಸ್ ಪಡೆದಿರುವುದರಿಂದ ಸಂಜೆ 4 ಗಂಟೆವರೆಗೆ ಬಸ್ ಸಂಚಾರಕ್ಕೆ ಅವಕಾಶ ದೊರೆಯಲಿದೆ.

ಕ್ಯಾಮೆರಾ, ಡ್ರೋನ್​ ಚಿತ್ರೀಕರಣಕ್ಕಿದೆ ನಿಷೇಧ

ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತ ಡ್ರೋನ್ ಮೂಲಕ ಚಿತ್ರೀಕರಣ ಮತ್ತು ಕ್ಯಾಮೆರಾ ಚಿತ್ರೀಕರಣಕ್ಕೆ ನಿಷೇಧ ಹೇರಿ ಫೆಬ್ರವರಿ 10ರಂದು ಗುಂಡ್ಲುಪೇಟೆ ತಹಸೀಲ್ದಾರ್ ಟಿ. ರಮೇಶ್‌ಬಾಬು ಆದೇಶ ಹೊರಡಿಸಿದ್ದರು. ಸಂಜೆ ವೇಳೆ ದೇವಾಲಯದ ಬಳಿ ಬರುವ ಕಾಡಾನೆಯ ಹತ್ತಿರ ತೆರಳಿ ಪ್ರವಾಸಿಗರು ಛಾಯಾಚಿತ್ರ ತೆಗೆಯುವುದು, ಸೆಲ್ಫೀ ತೆಗೆದು ಅದರ ತುಣುಕುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವುದು ಗಮನಕ್ಕೆ ಬಂದಿತ್ತು. ಕಾಡಾನೆಯಿಂದ ಜನರಿಗೆ ಮತ್ತು ಜನರಿಂದ ಕಾಡಾನೆಗೂ ತೊಂದರೆಯಾಗಬಹುದು. ವಲಯ ಅರಣ್ಯಾಧಿಕಾರಿಯವರ ಕೋರಿಕೆ ಮೇರೆಗೆ, ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಸುತ್ತಮುತ್ತ ಕಾಡುಪ್ರಾಣಿಗಳನ್ನು ಕ್ಯಾಮರಾ ಮತ್ತು ಡೋನ್ ಮೂಲಕ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್ ಅವರು ಆದೇಶದಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಬಂಡೀಪುರ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕ್ಯಾಮೆರಾ, ಡ್ರೋನ್​ ಚಿತ್ರೀಕರಣ ನಿಷೇಧ

ಇದಾದ ಕೆಲವೇ ದಿನಗಳ ನಂತರ ಅವರು, ಸಂಜೆ 3ರ ನಂತರ ಬೆಟ್ಟಕ್ಕೆ ಬಸ್ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದರು. ಹೀಗಾಗಿ ಇನ್ನು ಮುಂದೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಈ ಹಿಂದಿನಂತೆ ಬೆಳಿಗ್ಗೆ 8.30 ರಿಂದ ಸಂಜೆ 4 ರವರೆಗೆ ತೆರಳಬಹುದಾಗಿದೆ.

ಇದನ್ನೂ ಓದಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟ; ಪ್ರತಿ ನಿತ್ಯ ದೇವಸ್ಥಾನಕ್ಕೆ ಬಂದು ಪ್ರದಕ್ಷಿಣೆ ಹಾಕುತ್ತೆ ಈ ಒಂಟಿ ಸಲಗ, ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟ ಜನ

ಕರ್ನಾಟಕದ ಊಟಿ ಎಂದೇ ಖ್ಯಾತಿ ಪಡೆದಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗವೊಂದು ಜನವರಿ ತಿಂಗಳಲ್ಲಿ ಕಾಣಿಸಿಕೊಂಡಿತ್ತು. ಅದು ಪ್ರತಿ ದಿನ ಬಂದು ದೇವಾಲಯ ಪ್ರದಕ್ಷಿಣೆ ಹಾಕುವ ಬಗ್ಗೆ ಮತ್ತು ಪ್ರವಾಸಿಗರು ಅದರ ಬಳಿ ತೆರಳಿ ಫೋಟೊ, ಸೆಲ್ಫೀ ತೆಗೆಯುವ ಬಗ್ಗೆ ವರದಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:26 pm, Sat, 17 February 24

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?