ಅಪಘಾತ ಪ್ರಕರಣಗಳಿಂದ ಹೆಚ್ಚು ಸುದ್ದಿಯಾದ ಚಾಮರಾಜನಗರ! ಒಂದೇ ತಿಂಗಳಲ್ಲಿ 19 ಅಪಘಾತ; 26 ಮಂದಿ ಸಾವು

2024 ಪ್ರಾರಂಭವಾಗಿ ಈಗ ತಾನೆ ವರ್ಷದ ಎರಡನೆ ತಿಂಗಳಿಗೆ ಕಾಲಿಟ್ಟಿದ್ದೇವಷ್ಟೆ. ಆದ್ರೆ, ಅಷ್ಟರಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಅಪಘಾತಕ್ಕೆ 26 ಮಂದಿ ಬಲಿಯಾಗಿದ್ದಾರೆ. ಈ ಅಪಘಾತಗಳಿಗೆ ಕಾರಣವೇನು?, ಸಾವಿನ ಸಂಖ್ಯೆ ಅಷ್ಟರ ಮಟ್ಟಿಗೆ ಏರಿಕೆಯಾಕೆ, ಈ ಸ್ಟೋರಿ ಓದಿ.

ಅಪಘಾತ ಪ್ರಕರಣಗಳಿಂದ ಹೆಚ್ಚು ಸುದ್ದಿಯಾದ ಚಾಮರಾಜನಗರ! ಒಂದೇ ತಿಂಗಳಲ್ಲಿ 19 ಅಪಘಾತ; 26 ಮಂದಿ ಸಾವು
ಚಾಮರಾಜನಗರ ಅಪಘಾತ ಪ್ರಕರಣ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 11, 2024 | 7:24 PM

ಚಾಮರಾಜನಗರ, ಫೆ.11: ಹೊಸ ವರ್ಷಕ್ಕೆ ಕಾಲಿಟ್ಟು ಜನವರಿ ಅಂತ್ಯಗೊಂಡು, ಎರಡನೇ ತಿಂಗಳಿಗೆ ಕಾಲಿಟ್ಟಿದ್ದೇವೆ ಅಷ್ಟೇ, ಅಷ್ಟರಲ್ಲಾಗಲೇ ಒಂದು ತಿಂಗಳೊಳಗೆ ಗಡಿ ನಾಡು ಚಾಮರಾಜನಗರ(Chamarajanagara)ದಲ್ಲಿ ಬರೋಬ್ಬರಿ 19 ಅಪಘಾತ ಪ್ರಕರಣಗಳು(Accident cases) ದಾಖಲಾಗಿದ್ದು, ಅಪಘಾತದಲ್ಲಿ 26 ಮಂದಿ ಸವಾರರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಗಡಿ ನಾಡು ಚಾಮರಾಜನಗರ ಅಪಘಾತ ಪ್ರಕರಣಗಳಿಂದಲೇ ಇತ್ತೀಚಿಗೆ ಸುದ್ದಿಯಾಗುತ್ತಿದೆ. ದುರಂತವೆಂದರೆ, ಅತಿ ಹೆಚ್ಚು ಅಪಘಾತವಾಗಿ ಮೃತಪಟ್ಟಿರುವವರ ಸಂಖ್ಯೆಯಲ್ಲಿ ಬೈಕ್ ಸವಾರರೇ ಹೆಚ್ಚಾಗಿರುವುದು. ಅತಿ ಹೆಚ್ಚು ಮಂದಿ ತಲೆಗೆ ಬಲವಾಗಿ ಹೊಡೆತ ಬಿದ್ದು ಸಾವನ್ನಪ್ಪಿರುವುದಾಗಿ ವರದಿ ಹೇಳುತ್ತಿದೆ.

ಇನ್ನು ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿರುವುದಕ್ಕೂ ಒಂದು ಕಾರಣವಿದೆ. ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಸಂಚಾರ ಮಾಡಿದ್ದೆ ಈ ಸಾವುಗಳಿಗೆ ಕಾರಣವೆಂಬ ವರದಿ ಸಿಕ್ಕಿದೆ. ಒಂದು ವೇಳೆ ಸವಾರರು ಹೆಲ್ಮೆಟ್ ಧರಿಸಿದ್ದರೆ ಜೀನಹಾನಿ ಆಗುವುದನ್ನು ತಡೆಯಬಹುದಾಗಿತ್ತು. ಇನ್ನು ಅಪ್ರಾಪ್ತರು ಸಹ ಅತಿ ಹೆಚ್ಚು ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಪೋಷಕರು ಅಪ್ರಾಪ್ತರ ಕೈಯಲ್ಲಿ ಬೈಕ್ ನೀಡದಂತೆ ಪೊಲೀಸ್ ಇಲಾಖೆ ಸಹ ಎಚ್ಚರಿಕೆ ನೀಡಿದ್ದು, ಪೋಷಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ:ಸಾವಿನ ರಸ್ತೆ ಆದ ಮಡಿಕೇರಿ-ಕುಶಾಲನಗರ ಹೆದ್ದಾರಿ; ಐದು ತಿಂಗಳಲ್ಲಿ 15ಕ್ಕೂ ಅಧಿಕ ಅಪಘಾತ, ನಾಲ್ವರ ಸಾವು

ಪೊಲೀಸರು ಅದೇಷ್ಟೇ ದಂಡ ವಿಧಿಸಿ, ಬುದ್ದಿ ಹೇಳಿದರೂ ಕೂಡ ಸವಾರರಿಗೆ ಮಾತ್ರ ಬುದ್ದಿ ಬರುವ ಹಾಗೇ ಕಾಣುತ್ತಿಲ್ಲ. ಹೇರ್ ಸ್ಟೈಲ್ ಹಾಳಾಗುತ್ತೆ, ಕೂದಲು ಉದುರತ್ತೆ ಎಂದು ಹೆಲ್ಮೆಟ್ ತಲೆಗೆ ಹಾಕುವ ಬದಲು ಕೈಯಲ್ಲಿ ಹಿಡಿದುಕೊಂಡು ಹೋಗುವವರೇ ಇನ್ಮೇಲಾದರೂ ಬುದ್ದಿ ಕಲಿತರೆ ಒಳಿತು. ಇಲ್ಲದೇ ಹೋದರೆ ನಿಮ್ಮ ಅಮೂಲ್ಯವಾದ ಜೀವ ಕಳೆದುಕೊಳ್ಳುವುದರ ಜೊತೆಗೆ ನಿಮ್ಮನ್ನೇ ನಂಬಿಕೊಂಡ ಜೀವಗಳು ಕಷ್ಟಪಡಬೇಕಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us