AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿಗಳಿಗೆ ಕಾರಾಗೃಹದಲ್ಲಿ ಕಂಪ್ಯೂಟರ್ ಶಿಕ್ಷಣ; ವಿನೂತನ ಪ್ರಯತ್ನಕ್ಕೆ ಮುಂದಾದ ಚಾಮರಾಜನಗರ ಜಿಲ್ಲಾ ಕಾರಾಗೃಹ

ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ಕಾರಾಗೃಹ ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿಯನ್ನು ನೀಡುವ ವಿನೂತನ ಯೋಜನೆಗೆ ಚಾಲನೆ ಸಿಕ್ಕಿದೆ. ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ಯಾಕೆ?, ಮೊದಲು ಚಾಮರಾಜನಗರದಲ್ಲಿ ಚಾಲನೆ ಸಿಕ್ಕಿದ್ಯಾಕೆ ಗೊತ್ತಅ? ಇಲ್ಲಿದೆ ಈ ಕುರಿತು ಸಂಪೂರ್ಣ ವಿವರ.

ಕೈದಿಗಳಿಗೆ ಕಾರಾಗೃಹದಲ್ಲಿ ಕಂಪ್ಯೂಟರ್ ಶಿಕ್ಷಣ; ವಿನೂತನ ಪ್ರಯತ್ನಕ್ಕೆ ಮುಂದಾದ ಚಾಮರಾಜನಗರ ಜಿಲ್ಲಾ ಕಾರಾಗೃಹ
ಚಾಮರಾಜನಗರದ ಕಾರಾಗೃಹದಲ್ಲಿ ಕೈದಿಗಳಿಗೆ ಕಂಪ್ಯೂಟರ್​ ತರಬೇತಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 16, 2023 | 7:14 PM

Share

ಚಾಮರಾಜನಗರ, ನ.16: ಕತ್ತಲ ಕೂಪದಲ್ಲಿರುವ ಕೈದಿಗಳ ಬದುಕಲ್ಲೂ ಕೂಡ ಭರವಸೆಯ ಬೆಳಕು ಮೂಡಿಸುವ ಕೆಲಸಕ್ಕೆ ಚಾಮರಾಜನಗರ (Chamarajanagar) ಜಿಲ್ಲಾಡಳಿತ ಹಾಗೂ ಕಾರಾಗೃಹದ ಅಧಿಕಾರಿಗಳು ಹೊಸ ಮುನ್ನುಡಿ ಬರೆದಿದ್ದಾರೆ. ಇನ್ಫೋಸಿಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ, ರಾಜ್ಯದಲ್ಲಿ ಮೊದಲ ಬಾರಿಗೆ ಕಾರಾಗೃಹದಲ್ಲಿ ಕಂಪ್ಯೂಟರ್ ಶಿಕ್ಷಣ ಕೊಡುವ ಕೆಲಸಕ್ಕೆ ನಾಂದಿ ಹಾಡಿದೆ. ಚಾಮರಾಜನಗರದ ಉಪ ಕಾರಾಗೃಹದಲ್ಲಿ ಈ ಯೋಜನೆಗೆ ಚಾಲನೆ ಸಿಕ್ಕಿದೆ.

ಈ ಕುರಿತು ಮಾತನಾಡಿದ ಕಾರಾಗೃಹದ ಅಧಿಕಾರಿಗಳು ‘ಇದು ಡಿಜಿಟಲ್ ಯುಗ, ಡಿಜಿಟಲೀಕರಣದ ಅಗತ್ಯವಿದೆ. ಅದರ ಜೊತೆಗೆ ಕಂಪ್ಯೂಟರ್ ಶಿಕ್ಷಣದ ಅವಶ್ಯಕತೆ ಕೂಡ ಪ್ರತಿಯೊಬ್ಬನಿಗೂ ಕೂಡ ಇದೆ. ಈ ಕಂಪ್ಯೂಟರ್ ಜ್ಞಾನದಿಂದ ಅವರ ಮಕ್ಕಳಿಗೂ ಕೂಡ ಅನುಕೂಲವಾಗಲಿದೆ. ಅದರ ಜೊತೆಗೆ ಜೈಲಿನಿಂದ ಶಿಕ್ಷೆಯ ಅವಧಿ ಮುಗಿಸಿದ ಬಳಿಕ ಅವರ ಜೀವನ ರೂಪಿಸಿಕೊಳ್ಳಲೂ ನೆರವಾಗುತ್ತೆ ಎನ್ನುವ ಆಶಯದಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಜೈಲಿನಲ್ಲಿ ಕಂಪ್ಯೂಟರ್ ಶಿಕ್ಷಣ ಕೊಡಲಾಗುತ್ತಿದೆ ಎಂದರು.

ಇದನ್ನೂ ಓದಿ:ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹವನ್ನ ಬ್ಲಾಸ್ಟ್​​​ ಮಾಡುತ್ತೇವೆ ಎಂದು ಡಿಐಜಿಪಿಗೆ ಬೆದರಿಕೆ ಕರೆ

ಇನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ವಿಶೇಷ ಕಾಳಜಿ ಹಾಗೂ ಆಸಕ್ತಿಯಿಂದ ಚಾಮರಾಜನಗರದ ಜಿಲ್ಲಾ ಕಾರಾಗೃಹ ಬಂಧಿಗಳಿಗೆ ಮೈಸೂರಿನ ಇನ್ಫೋಸಿಸ್ , ರೋಟರಿ ಹಾಗೂ ಪಂಚಶೀಲ ಸಹಯೋಗದೊಂದಿಗೆ ಕಾರಾಗೃಹ ಬಂಧಿಗಳಿಗೆ, ಕಾರಾಗೃಹದಲ್ಲೇ ಕಂಪ್ಯೂಟರ್ ತರಬೇತಿ ಪಡೆಯಲು ಸುಸಜ್ಜಿತ ಕೊಠಡಿಯಲ್ಲಿ 10 ಕಂಪ್ಯೂಟರ್ ಮತ್ತು ಪ್ರಿಂಟರ್​ಗಳನ್ನೊಳಗೊಂಡ ತರಬೇತಿಗೆ ಚಾಲನೆ ದೊರೆತಿದೆ. ಕಾರಾಗೃಹ ಕಟ್ಟಡದಲ್ಲಿಯೇ ಕೈದಿಗಳಿಗೆ ಕಂಪ್ಯೂಟರ್ ತರಬೇತಿ ಪಡೆಯಲು ಇನ್ಫೋಸಿಸ್ ಸಹಕಾರದೊಂದಿಗೆ ತರಬೇತಿ ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ.

ತರಬೇತಿ ಕೊಠಡಿಯಲ್ಲಿ ಕಲಿಕಾರ್ಥಿಗಳಿಗೆ ಸುಲಭವಾಗಿ ಕಂಪ್ಯೂಟರ್ ಅರ್ಥೈಸುವ ಕನ್ನಡ ಕಿರುಪುಸ್ತಕಗಳನ್ನೂ ಸಹ ಇಡಲಾಗಿದೆ. ಹಿಂದೆ ಕಾರಾಗೃಹದಲ್ಲಿ ಗಂಧದ ಕಡ್ಡಿ ತಯಾರಿಕೆ ಮತ್ತಿತ್ತರ ಕೆಲಸಕ್ಕೆ ಪ್ರೋತ್ಸಾಹ ಸಿಕ್ಕಿತ್ತು. ಕೋವಿಡ್ ಬಳಿಕ ಇದೆಲ್ಲಾ ಸ್ಟಾಪ್ ಆಗಿದೆ. ಆ ಹಿನ್ನಲೆ ಸದುದ್ದೇಶದೊಂದಿಗೆ ಕಂಪ್ಯೂಟರ್ ತರಬೇತಿ ಆರಂಭವಾಗಿದೆ. ಒಟ್ಟಿನಲ್ಲಿ ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಮೊದಲ ಹಂತವಾಗಿ 130 ಕ್ಕೂ ಹೆಚ್ಚು ಕೈದಿಗಳಿದ್ದು, ಎಸ್ಎಸ್ಎಲ್​ಸಿ ಹಾಗೂ ಮೇಲ್ಪಟ್ಟ 38 ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣಕ್ಕೆ ಆಯ್ಕೆ ಮಾಡಲಾಗಿದೆ. ನಂತರ ಹಂತಹಂತವಾಗಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಶಿಕ್ಷಣ ಒದಗಿಸುವ ಆಶಯ ಹೊಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!