AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ನಕಲಿ ಜಮೀನಿನ ದಾಖಲೆ ಸೃಷ್ಟಿಸಿ ಅಮಾಯಕರಿಗೆ ಮಾರಾಟ ಮಾಡಿದ ಭೂಪರು

ಜಿಲ್ಲೆಯಲ್ಲಿ ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರಿಗೆ ಪಂಗನಾಮ ಹಾಕಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಎನ್. ಬಾಲರಾಜು, ನಗರಸಭೆ ಹಾಲಿ ಸದಸ್ಯ ಶಿವರಾಜ್ ಸೇರಿ ಒಟ್ಟು ಐದು ಜನರ ವಿರುದ್ದ ಎಫ್​ಐಆರ್​ ದಾಖಲಾಗಿದೆ.

ಚಾಮರಾಜನಗರ: ನಕಲಿ ಜಮೀನಿನ ದಾಖಲೆ ಸೃಷ್ಟಿಸಿ ಅಮಾಯಕರಿಗೆ ಮಾರಾಟ ಮಾಡಿದ ಭೂಪರು
ಚಾಮರಾಜನಗರ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jan 31, 2023 | 10:48 PM

Share

ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಎನ್. ಬಾಲರಾಜು, ನಗರಸಭೆ ಹಾಲಿ ಸದಸ್ಯ ಶಿವರಾಜ್ ಸೇರಿ ಒಟ್ಟು ಐದು ಜನ ಅಕ್ರಮವಾಗಿ ಭೂಮಿಯನ್ನ ಬೇರೆಯವರ ಖಾತೆಗೆ ಮಾಡಿಕೊಡುವ ಮೂಲಕ ಭೂಮಾಲೀಕರಿಗೆ ಪಂಗನಾಮ ಹಾಕಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ವಾಸವಿರುವ ರತ್ನಮ್ಮ ಎನ್ನುವವರಿಗೆ ಸೇರಿದ ಜಮೀನು ಚಾಮರಾಜನಗರ ತಾಲೂಕು ಮಲ್ಲಯ್ಯನಪುರ ಗ್ರಾಮದ ಸರ್ವೇ ನಂ. 106 ಮತ್ತು 107ರಲ್ಲಿದ್ದು, ಅವರಿಗೆ ಗೊತ್ತಾಗದಂತೆ ಬೇರೆಯವರಿಗೆ ಮಾರಾಟವಾಗಿದೆ. ಒಟ್ಟು ಏಳು ಎಕರೆ ಜಮೀನು 80 ಲಕ್ಷ ರೂ ಕೊಟ್ಟು ನಟರಾಜು ಮತ್ತು ಅಬ್ದುಲ್ ರೆಹಮಾನ್ ಎಂಬುವರಿಗೆ ಮಾರಾಟ ಮಾಡಿದ್ದಾರೆಂದು ಸಂತ್ರಸ್ತೆ ರತ್ನಮ್ಮ ಚಾಮರಾಜನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇನ್ನು ರತ್ನಮ್ಮ ಹೇಳಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ನನ್ನ ಪತಿ ವೆಂಕಟಾಚಲಂ ಮತ್ತು ಅವರ ಅಣ್ಣ ಪಳನಿಸ್ವಾಮಿ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಜಮೀನು ಖರೀದಿ ಮಾಡಿದ್ದರು. ಈ ಜಮೀನು ಈಗಲೂ ನಮ್ಮ ಸ್ವಾಧೀನದಲ್ಲೇ ಇದೆ. ವೆಂಕಟಾಚಲಂ 2021ರಲ್ಲಿ ನಿಧನರಾದರು. ನಾವು ತಮಿಳುನಾಡಿನಲ್ಲಿ ವಾಸವಿದ್ದೇವೆ. ಇತ್ತೀಚಿಗೆ ಯಾರೋ ನಮ್ಮ ಜಮೀನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಪಕ್ಕದ ಜಮೀನಿನವರು ಹೇಳಿದರು. ಈ ಕುರಿತು ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಪರಿಶೀಲನೆ ನಡೆಸಿದಾಗ ತೆರಕಣಾಂಬಿಯ ವೆಂಕಟಾಚಲಂ ಮತ್ತು ಅವರ ಅಣ್ಣನ ಹೆಸರಿನ ಪಳನಿಸ್ವಾಮಿ ಎಂಬುವವರು ತಾವೇ ಮಾಲೀಕರು ಎಂದು ಜಮೀನು ಮಾರಾಟ ಮಾಡಿದ್ದಾರೆ ಎಂದು ರತ್ನಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:Ramesh Jarkiholi: ಅಣ್ಣ ತಮ್ಮಂದಿರಂತಿದ್ದ ಡಿಕೆಶಿ ಮತ್ತು ನನ್ನ ಸಂಬಂಧ ಹಾಳಾಗಿದ್ದೇ ಬೆಳಗಾವಿ ಗ್ರಾಮಾಂತರ ಶಾಸಕಿ, ವಿಷಕನ್ಯೆಯಿಂದ – ರಮೇಶ್ ಜಾರಕಿಹೊಳಿ

ಆದರೆ ಈ ಅವ್ಯವಹಾರ ಉಪನೊಂದಣಾಧಿಕಾರಿಗೂ ತಿಳಿದಿಲ್ಲ. ಆರ್​ಟಿಸಿ ಮತ್ತು ಆಧಾರ್ ಕಾರ್ಡ್ ಕೊಟ್ಟರೆ ನೊಂದಣಿ ಮಾಡಿಕೊಡ್ತಿವಿ. ದಾಖಲಾತಿಗಳು ಅಸಲಿಯೋ ನಕಲಿಯೋ ಎಂಬುದು ತಿಳಿಯಲ್ಲ. ಈಗ ಪೊಲೀಸರು ನಮ್ಮಿಂದ ಮಾಹಿತಿ ಕೇಳಿದ್ದು ಒದಗಿಸುತ್ತೇವೆ ಎನ್ನುತ್ತಾರೆ ಚಾಮರಾಜನಗರ ಸಬ್ ರಿಜಿಸ್ಟ್ರಾರ್. ಒಟ್ಟಾರೆ ಲಕ್ಷಾಂತರ ರೂಪಾಯಿ ಮೌಲ್ಯದ ಜಮೀನು ಕಳೆದುಕೊಂಡಿರುವ ರತ್ಮಮ್ಮ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅಕ್ರಮವಾಗಿ ಖಾತೆ ಬದಲಿಸಿ ಜಮೀನು ಮಾರಾಟ ಮಾಡುವ ದಂಧೆ ಜಿಲ್ಲೆಯಲ್ಲಿ ಹರಡಿರುವ ಸಂಶಯವಿದ್ದು ಪೊಲೀಸ್ ಇಲಾಖೆ ಇದಕ್ಕೆ ಬ್ರೇಕ್ ಹಾಕಬೇಕಿದೆ.

ವರದಿ: ದಿಲೀಪ್ ಚೌಡಹಳ್ಳಿ ಟಿವಿ9 ಚಾಮರಾಜನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ