AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಬೆಟ್ಟದ ಕಾಡಂಚಿನ ಜನರಿಗೆ ಗುಡ್ ನ್ಯೂಸ್; ಜನವನ ಸಾರಿಗೆ ಮತ್ತೆ ಆರಂಭ

ಅರಣ್ಯದಲ್ಲಿನ ಜನರ ಅನುಕೂಲಕ್ಕಾಗಿ ನಾಲ್ಕು ಮಾರ್ಗಗಳಲ್ಲಿ ಜನವನ ಸಾರಿಗೆ ವಾಹನಗಳು ಸಂಚರಿಸುತ್ತಿತ್ತವೆ. ಈ ವಾಹನಗಳು ಅನಾರೋಗ್ಯ ತುತ್ತಾದವರು, ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯ ಜನರನ್ನು ನಗರಕ್ಕೆ ಕರೆತರುತ್ತವೆ. ಇದರಿಂದ ಮಾದಪ್ಪನ ಬೆಟ್ಟದ ಜನರಿಗೆ ತಂಬಾ ಅನುಕೂಲವಾಗಿತ್ತು.

ಮಲೆ ಮಹದೇಶ್ವರ ಬೆಟ್ಟದ ಕಾಡಂಚಿನ ಜನರಿಗೆ ಗುಡ್ ನ್ಯೂಸ್; ಜನವನ ಸಾರಿಗೆ ಮತ್ತೆ ಆರಂಭ
ಜನವನ ವಾಹನ
TV9 Web
| Edited By: ವಿವೇಕ ಬಿರಾದಾರ|

Updated on: Oct 23, 2023 | 1:30 PM

Share

ಚಾಮರಾಜನಗರ ಅ.23: ಮಲೆ ಮಹದೇಶ್ವರ (Male Mahadeshwara) ಬೆಟ್ಟದ ಕಾಡಂಚಿನ ಜನರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಜನವನ ಸಾರಿಗೆ ಮತ್ತೇ ಶುರುವಾಗಲಿದೆ. ಅರಣ್ಯ ಇಲಾಖೆಯ (Forest Department) ಇಡಿಸಿ ಬದಲು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದಿಂದಲೇ ಜನವನ ಸಾರಿಗೆ ಸೌಲಭ್ಯ ಆರಂಭಿಸಲಾಗುತ್ತದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ವರ್ಷ ಜನವನ ಸಾರಿಗೆ ಸೇವೆ ಆರಂಭಿಸಿದ್ದರು. ನಂತರ ಇಕೋ ಡೆವಲಪ್ಮೆಂಟ್ ಕಮಿಟಿಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗಿತ್ತು.

ನಿರ್ವಹಣೆ ಇಲ್ಲದೆ ಜನವನ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೇ ಜನವನ ಸಾರಿಗೆ ವ್ಯವಸ್ಥೆ ಆರಂಭಿಸುವಂತೆ ಸ್ಥಳೀಯರಿಂದ ಒತ್ತಾಯಿಸಿದ್ದಾರೆ. ಇದೀಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಜನವನ ಸೇವೆ ಆರಂಭಿಸಲು ನಿರ್ಧರಿಸಿದೆ. ಕಡಿಮೆ ದರದಲ್ಲಿ ಕಾಡಂಚಿನ ಜನರಿಗೆ‌ ಜನವನ ಸಾರಿಗೆ ಸೌಲಭ್ಯ ನೀಡಲು ನಿರ್ಧರಿಸಿದೆ.

ಇದನ್ನೂ ಓದಿ: ಅರಣ್ಯಾಧಿಕಾರಿಯ ಪ್ರತಿಷ್ಠೆಗೆ ಜನ ಕಂಗಾಲು, ಬಡ ಗ್ರಾಮಸ್ಥರಿಗೆ ಕಾಡುಮೇಡಿನ ದುರ್ಗಮ ಹಾದಿಯೇ ಗತಿ! 

ಏನಿದು ಜನವನ ಸಾರಿಗೆ

ಅರಣ್ಯದಲ್ಲಿನ ಜನರ ಅನುಕೂಲಕ್ಕಾಗಿ ನಾಲ್ಕು ಮಾರ್ಗಗಳಲ್ಲಿ ಜನವನ ಸಾರಿಗೆ ವಾಹನಗಳು ಸಂಚರಿಸುತ್ತಿತ್ತವೆ. ಈ ವಾಹನಗಳು ಅನಾರೋಗ್ಯ ತುತ್ತಾದವರು, ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯ ಜನರನ್ನು ನಗರಕ್ಕೆ ಕರೆತರುತ್ತವೆ. ಇದರಿಂದ ಮಾದಪ್ಪನ ಬೆಟ್ಟದ ಜನರಿಗೆ ತಂಬಾ ಅನುಕೂಲವಾಗಿತ್ತು.

ಆದರೆ ನಿರ್ವಹಣೆ ಇಲ್ಲದೆ ವಾಹನಗಳು ನಿಂತುಹೋದ ಮೇಲೆ ಸಾರಿಗೆ ಸೌಲಭ್ಯವಿಲ್ಲದೇ ಜನರು ಪರದಾಡುತ್ತಿದ್ದಾರೆ. ಆರೋಗ್ಯ ಹದಗೆಟ್ಟರೇ ರೋಗಿಯನ್ನು ಡೋಲಿಯಲ್ಲಿ ಹೊತ್ತು ಜನರು ಆಸ್ಪತ್ರೆಗೆ ತರುವಂತಾಗಿದೆ. ಹೀಗಾಗಿ ಶೀಘ್ರದಲ್ಲೇ ಮತ್ತೆ ಜನವನ ಆರಂಭವಾಗಲಿ ಎಂಬುವುದು ಗ್ರಾಮಸ್ಥರ ಒತ್ತಾಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು