AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಸ್ವಾಮಿ ಫೇಸ್ ಬುಕ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋಗಳನ್ನು ಫೋಸ್ಟ್ ಮಾಡಿದ ಕಿಡಿಗೇಡಿಗಳು

ಮಲೆ ಮಹದೇಶ್ವರ ಸ್ವಾಮಿ ಹೆಸರಿನ ಫೇಸ್ ಬುಕ್​​ ಪೇಜ್​​ಅನ್ನು ಹ್ಯಾಕ್​ ಮಾಡಿ ಪೋರ್ನ್​ ವಿಡಿಯೋಗನ್ನು ಅಪ್​ಲೋಡ್​ ಮಾಡಿ ವಿಕೃತಿ ಮೆರೆಯಲಾಗಿದೆ.

ಮಲೆ ಮಹದೇಶ್ವರ ಸ್ವಾಮಿ ಫೇಸ್ ಬುಕ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋಗಳನ್ನು ಫೋಸ್ಟ್ ಮಾಡಿದ ಕಿಡಿಗೇಡಿಗಳು
ಮಲೆ ಮಹದೇಶ್ವರ ಸ್ವಾಮಿ ಫೇಸ್ ಬುಕ್ ಹ್ಯಾಕ್
TV9 Web
| Edited By: |

Updated on: Sep 22, 2022 | 11:19 AM

Share

ಚಾಮರಾಜನಗರ: ಪ್ರಸಿದ್ಧ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದ(Male Mahadeshwara Swamy Temple) ಹೆಸರಿನ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಫೇಸ್​ ಬುಕ್ ಖಾತೆಗೆ 17 ಸಾವಿರ ಫಾಲೋವರ್ಸ್ ಇದ್ದು ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ದೂರು ನೀಡಿದ್ದಾರೆ.

2013ರಲ್ಲಿ ಕೊಳ್ಳೆಗಾಲ ಮೂಲದ ಸಂಜಯ್ ಕುಮಾರ್​ ಎಂಬುವವರು ಈ ಶ್ರೀ ಮಲೆ ಮಹದೇಶ್ವರ ಸ್ವಾಮಿ ಫೇಸ್​ಬುಕ್ ಖಾತೆಯನ್ನು ಕ್ರಿಯೇಟ್ ಮಾಡಿದ್ದರು. ಇದರಲ್ಲಿ ಮಹದೇಶ್ವರ ಸ್ವಾಮಿ ಮಹಿಮೆ, ಪೂಜೆ ಪುನಸ್ಕಾರಗಳ ಮಾಹಿತಿಯನ್ನ ಅಪ್ಲೋಡ್ ಮಾಡಿ ಭಕ್ತರಿಗೆ ಮಾಹಿತಿ ನೀಡಲಾಗುತ್ತಿತ್ತು. ಈ ಪೇಜ್​​ಗೆ ಸುಮಾರು 17 ಸಾವಿರ ಫಾಲೋವರ್ಸ್ ಇದ್ದಾರೆ. ಆದ್ರೆ ಈಗ ಫೇಸ್​​ಬುಕ್​​ ಪೇಜ್​​ಅನ್ನು ಹ್ಯಾಕ್​ ಮಾಡಿ ಪೋರ್ನ್​ ವಿಡಿಯೋಗನ್ನು ಅಪ್​ಲೋಡ್​ ಮಾಡಿ ವಿಕೃತಿ ಮೆರೆಯಲಾಗಿದೆ. ಆ ಮೂಲಕ ಮಹದೇಶ್ವರನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಿದ್ದಾರೆ. ಇದನ್ನೂ ಓದಿ: ಬೀದರ್​ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ

ಮಾಹಿತಿ ಗೊತ್ತಾಗುತ್ತಿದ್ದಂತೆ ಚಾಮರಾಜನಗರ ಸೆನ್ ಠಾಣೆಯಲ್ಲಿ ಸಂಜಯ್ ದೂರು ದಾಖಲಿಸಿದ್ದಾರೆ. ಆದ್ರೆ 30 ಜನರಿಂದ ರಿಪೋರ್ಟ್ ಮಾಡಿಸಲು ಹೇಳಿ ಪೊಲೀಸರು ಸುಮ್ಮನಾಗಿದ್ದಾರೆ. ಈವರೆಗೆ 5 ಜನರಿಂದ ಸಂಜಯ್ ರಿಪೋರ್ಟ್ ಮಾಡಿಸಿದ್ದಾರೆ. ಹಾಗಾಗಿ ಹ್ಯಾಕ್ ಆಗಿರುವ ಪೇಜ್​ ಅನ್ನು ಡೀ ಆ್ಯಕ್ಟಿವ್ ಮಾಡಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ