AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಗಂಡು ಹುಲಿ ಸಾವು; ಅರಣ್ಯ ಸಂರಕ್ಷಣಾಧಿಕಾರಿಯೇ ಕಾರಣ ಎಂದ ಪರಿಸರವಾದಿ ಜೋಸೆಫ್ ಹೂವರ್

ನಿತ್ರಾಣಗೊಂಡಿದ್ದ ಹುಲಿ(Tiger)ಗೆ ಸಕಾಲದಲ್ಲಿ ಚಿಕಿತ್ಸೆ ನೀಡದ ಕಾರಣ ಸತ್ತಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಹುಲಿ ಉಳಿಸುವ ಪ್ರಯತ್ನವನ್ನೇ ಮಾಡಲಿಲ್ಲ ಎಂದು ಪರಿಸರವಾದಿ ಜೋಸೆಫ್ ಹ್ಯೂವರ್ ಗಂಭೀರ ಆರೋಪ ಮಾಡಿದ್ದಾರೆ.

ಚಾಮರಾಜನಗರ: ಗಂಡು ಹುಲಿ ಸಾವು; ಅರಣ್ಯ ಸಂರಕ್ಷಣಾಧಿಕಾರಿಯೇ ಕಾರಣ ಎಂದ ಪರಿಸರವಾದಿ ಜೋಸೆಫ್ ಹೂವರ್
ಪರಿಸರವಾದಿ ಜೋಸೆಫ್ ಹ್ಯೂವರ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Nov 26, 2023 | 6:31 PM

Share

ಚಾಮರಾಜನಗರ, ನ.26: ಬಂಡೀಪುರದ ಮದ್ದೂರು ವಲಯ ವ್ಯಾಪ್ತಿಯಲ್ಲಿ 3 ವರ್ಷ ವಯಸ್ಸಿನ ಗಂಡು ಹುಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನಿತ್ರಾಣಗೊಂಡಿದ್ದ ಹುಲಿ(Tiger)ಗೆ ಸಕಾಲದಲ್ಲಿ ಚಿಕಿತ್ಸೆ ನೀಡದ ಕಾರಣ ಸತ್ತಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಹುಲಿ ಉಳಿಸುವ ಪ್ರಯತ್ನವನ್ನೇ ಮಾಡಲಿಲ್ಲ ಎಂದು ಪರಿಸರವಾದಿ ಜೋಸೆಫ್ ಹ್ಯೂವರ್ ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ(ನ.24) ಬೆಳಿಗ್ಗೆ 6.30 ಕ್ಕೆ ಹುಲಿ ನಿತ್ರಾಣಗೊಂಡು ಬಿದ್ದಿದೆ. ಆದರೆ, ರಮೇಶ್‌ಕುಮಾರ್ ಸ್ಥಳಕ್ಕೆ ಬಂದಿದ್ದು ಮಧ್ಯಾಹ್ನ 3.33 ಕ್ಕೆ. ಇತ್ತ ನಿತ್ರಾಣಗೊಂಡು ಹುಲಿ ಸಾವು ಬದುಕಿನೊಂದಿಗೆ ಹೋರಾಟ ಮಾಡುತ್ತಿದ್ದರೆ, ಅತ್ತ ರಮೇಶ್‌ಕುಮಾರ್ ಕ್ಷೌರ ಮಾಡಿಸಿಕೊಳ್ಳುತ್ತಾ ಕುಳಿತಿದ್ದರು.

ರೋಮ್ ಹೊತ್ತಿ ಉರಿಯುವಾಗ ನೀರೋ ಪಿಟೀಲು ಬಾರಿಸುತ್ತಿದ್ದನಂತೆ, ಅದೇ ರೀತಿ ರಮೇಶ್ ಕುಮಾರ್ ವರ್ತಿಸಿದ್ದಾರೆ. ಕೆಳಹಂತದ ಅಧಿಕಾರಿಗಳು ಏನು ಮಾಡಬೇಕೆಂದು ಹಿರಿಯ ಅಧಿಕಾರಿಯಿಂದ ನಿರ್ದೇಶನ ಬಾರದೆ ಅಸಹಾಯಕರಾಗಿದ್ದರು. ವಿಷಯ ಗೊತ್ತಾದ ತಕ್ಷಣ ಹೋಗಿ ಹುಲಿಗೆ ಚಿಕಿತ್ಸೆ ಕೊಡಿಸಬಹುದಿತ್ತು. ರಮೇಶ್‌ಕುಮಾರ್ ಯಾವುದೇ ಪ್ರಯತ್ನವನ್ನೂ ಮಾಡದೆ ಹುಲಿ ಸಾವಿಗೆ ಕಾರಣರಾಗಿದ್ದಾರೆ. ಕೂಡಲೇ ಅವರನ್ನು ಅಮಾನತ್ತು ಮಾಡಿ ಬಂಧಿಸಬೇಕು. ರಮೇಶ್‌ಕುಮಾರ್ ಮುಂದುವರಿದರೆ ಇನ್ನೇನು ತೊಂದರೆಗಳಾಗುತ್ತೋ, ಅವರ ಮೇಲೆ ಕ್ರಮವಹಿಸದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಪರಿಸರವಾದಿ ಜೋಸೆಫ್ ಹ್ಯೂವರ್ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ:ಮೈಸೂರು: ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ, ರೈತ ಸ್ಥಳದಲ್ಲೇ ಸಾವು

ಘಟನೆ ವಿವರ

ಬಂಡೀಪುರ ಹುಲಿ ಸಂರಕ್ಷಣಾ ವ್ಯಾಪ್ತಿಯ ಮದ್ದೂರು ವಲಯದ ದೊಡ್ಡಕರಿಯಯ್ಯ ಎಂಬುವವರ ಹೊಲದಲ್ಲಿ ಶುಕ್ರವಾರ ಮೂರು ವರ್ಷದ ಹುಲಿಯೊಂದು ಸಾವನ್ನಪ್ಪಿದ ಘಟನೆ ನಡೆದಿತ್ತು. ಕಾಡಿನೊಳಗೆ ವನ್ಯಪ್ರಾಣಿಗಳ ಕಾದಾಟದಿಂದ ಹುಲಿಯ ತಲೆ ಸೇರಿದಂತೆ ಹಲವು ಕಡೆಗಳಲ್ಲಿ ತೀವ್ರ ಗಾಯವಾಗಿತ್ತು. ಇದರಿಂದ ನಿತ್ರಾಣಗೊಂಡು ನಡೆಯಲಾರದಂತಹ ಸ್ಥಿತಿಗೆ ತಲುಪಿತ್ತು. ಇದಕ್ಕೆ ಚಿಕಿತ್ಸೆ ನೀಡಲು ಅರಣ್ಯಾಧಿಕಾರಿಗಳು ಹುಲಿಯ ಸೆರೆಗೆ ಬಲೆ ಬಿಸಿದ್ದರು. ಆದರೆ, ರಕ್ಷಣೆ ಮಾಡುವ ಮುಂಚೆಯೇ ಹುಲಿ ಕೊನೆಯುಸಿರೆಳೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Sun, 26 November 23

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ