Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಗಂಡು ಹುಲಿ ಸಾವು; ಅರಣ್ಯ ಸಂರಕ್ಷಣಾಧಿಕಾರಿಯೇ ಕಾರಣ ಎಂದ ಪರಿಸರವಾದಿ ಜೋಸೆಫ್ ಹೂವರ್

ನಿತ್ರಾಣಗೊಂಡಿದ್ದ ಹುಲಿ(Tiger)ಗೆ ಸಕಾಲದಲ್ಲಿ ಚಿಕಿತ್ಸೆ ನೀಡದ ಕಾರಣ ಸತ್ತಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಹುಲಿ ಉಳಿಸುವ ಪ್ರಯತ್ನವನ್ನೇ ಮಾಡಲಿಲ್ಲ ಎಂದು ಪರಿಸರವಾದಿ ಜೋಸೆಫ್ ಹ್ಯೂವರ್ ಗಂಭೀರ ಆರೋಪ ಮಾಡಿದ್ದಾರೆ.

ಚಾಮರಾಜನಗರ: ಗಂಡು ಹುಲಿ ಸಾವು; ಅರಣ್ಯ ಸಂರಕ್ಷಣಾಧಿಕಾರಿಯೇ ಕಾರಣ ಎಂದ ಪರಿಸರವಾದಿ ಜೋಸೆಫ್ ಹೂವರ್
ಪರಿಸರವಾದಿ ಜೋಸೆಫ್ ಹ್ಯೂವರ್
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 26, 2023 | 6:31 PM

ಚಾಮರಾಜನಗರ, ನ.26: ಬಂಡೀಪುರದ ಮದ್ದೂರು ವಲಯ ವ್ಯಾಪ್ತಿಯಲ್ಲಿ 3 ವರ್ಷ ವಯಸ್ಸಿನ ಗಂಡು ಹುಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನಿತ್ರಾಣಗೊಂಡಿದ್ದ ಹುಲಿ(Tiger)ಗೆ ಸಕಾಲದಲ್ಲಿ ಚಿಕಿತ್ಸೆ ನೀಡದ ಕಾರಣ ಸತ್ತಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಹುಲಿ ಉಳಿಸುವ ಪ್ರಯತ್ನವನ್ನೇ ಮಾಡಲಿಲ್ಲ ಎಂದು ಪರಿಸರವಾದಿ ಜೋಸೆಫ್ ಹ್ಯೂವರ್ ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ(ನ.24) ಬೆಳಿಗ್ಗೆ 6.30 ಕ್ಕೆ ಹುಲಿ ನಿತ್ರಾಣಗೊಂಡು ಬಿದ್ದಿದೆ. ಆದರೆ, ರಮೇಶ್‌ಕುಮಾರ್ ಸ್ಥಳಕ್ಕೆ ಬಂದಿದ್ದು ಮಧ್ಯಾಹ್ನ 3.33 ಕ್ಕೆ. ಇತ್ತ ನಿತ್ರಾಣಗೊಂಡು ಹುಲಿ ಸಾವು ಬದುಕಿನೊಂದಿಗೆ ಹೋರಾಟ ಮಾಡುತ್ತಿದ್ದರೆ, ಅತ್ತ ರಮೇಶ್‌ಕುಮಾರ್ ಕ್ಷೌರ ಮಾಡಿಸಿಕೊಳ್ಳುತ್ತಾ ಕುಳಿತಿದ್ದರು.

ರೋಮ್ ಹೊತ್ತಿ ಉರಿಯುವಾಗ ನೀರೋ ಪಿಟೀಲು ಬಾರಿಸುತ್ತಿದ್ದನಂತೆ, ಅದೇ ರೀತಿ ರಮೇಶ್ ಕುಮಾರ್ ವರ್ತಿಸಿದ್ದಾರೆ. ಕೆಳಹಂತದ ಅಧಿಕಾರಿಗಳು ಏನು ಮಾಡಬೇಕೆಂದು ಹಿರಿಯ ಅಧಿಕಾರಿಯಿಂದ ನಿರ್ದೇಶನ ಬಾರದೆ ಅಸಹಾಯಕರಾಗಿದ್ದರು. ವಿಷಯ ಗೊತ್ತಾದ ತಕ್ಷಣ ಹೋಗಿ ಹುಲಿಗೆ ಚಿಕಿತ್ಸೆ ಕೊಡಿಸಬಹುದಿತ್ತು. ರಮೇಶ್‌ಕುಮಾರ್ ಯಾವುದೇ ಪ್ರಯತ್ನವನ್ನೂ ಮಾಡದೆ ಹುಲಿ ಸಾವಿಗೆ ಕಾರಣರಾಗಿದ್ದಾರೆ. ಕೂಡಲೇ ಅವರನ್ನು ಅಮಾನತ್ತು ಮಾಡಿ ಬಂಧಿಸಬೇಕು. ರಮೇಶ್‌ಕುಮಾರ್ ಮುಂದುವರಿದರೆ ಇನ್ನೇನು ತೊಂದರೆಗಳಾಗುತ್ತೋ, ಅವರ ಮೇಲೆ ಕ್ರಮವಹಿಸದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಪರಿಸರವಾದಿ ಜೋಸೆಫ್ ಹ್ಯೂವರ್ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ:ಮೈಸೂರು: ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ, ರೈತ ಸ್ಥಳದಲ್ಲೇ ಸಾವು

ಘಟನೆ ವಿವರ

ಬಂಡೀಪುರ ಹುಲಿ ಸಂರಕ್ಷಣಾ ವ್ಯಾಪ್ತಿಯ ಮದ್ದೂರು ವಲಯದ ದೊಡ್ಡಕರಿಯಯ್ಯ ಎಂಬುವವರ ಹೊಲದಲ್ಲಿ ಶುಕ್ರವಾರ ಮೂರು ವರ್ಷದ ಹುಲಿಯೊಂದು ಸಾವನ್ನಪ್ಪಿದ ಘಟನೆ ನಡೆದಿತ್ತು. ಕಾಡಿನೊಳಗೆ ವನ್ಯಪ್ರಾಣಿಗಳ ಕಾದಾಟದಿಂದ ಹುಲಿಯ ತಲೆ ಸೇರಿದಂತೆ ಹಲವು ಕಡೆಗಳಲ್ಲಿ ತೀವ್ರ ಗಾಯವಾಗಿತ್ತು. ಇದರಿಂದ ನಿತ್ರಾಣಗೊಂಡು ನಡೆಯಲಾರದಂತಹ ಸ್ಥಿತಿಗೆ ತಲುಪಿತ್ತು. ಇದಕ್ಕೆ ಚಿಕಿತ್ಸೆ ನೀಡಲು ಅರಣ್ಯಾಧಿಕಾರಿಗಳು ಹುಲಿಯ ಸೆರೆಗೆ ಬಲೆ ಬಿಸಿದ್ದರು. ಆದರೆ, ರಕ್ಷಣೆ ಮಾಡುವ ಮುಂಚೆಯೇ ಹುಲಿ ಕೊನೆಯುಸಿರೆಳೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Sun, 26 November 23

ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು