AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತ ಬಲಿಯಾದ ಘಟನೆ ನಂತರ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ. ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗಾಗಿ, ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಹೊಸ ಆದೇಶ ನಾಳೆಯಿಂದ ಜಾರಿಗೆ ಬರಲಿದೆ.

ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್
ಮಲೆ ಮಹದೇಶ್ವರ ಬೆಟ್ಟ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jan 24, 2026 | 10:49 PM

Share

ಚಾಮರಾಜನಗರ, ಜನವರಿ 24: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara) ಚಿರತೆ (Leopard) ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ಹೊರಡಿಸಿದೆ. ಮಾದಪ್ಪನ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರು ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.

ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಮಾತ್ರ ಅವಕಾಶ

ಚಿರತೆ ದಾಳಿ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಜಿಲ್ಲಾಡಳಿತ ಜನವರಿ 24ವರೆಗೆ ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ಪಾದಯಾತ್ರೆಗೆ ನಿರ್ಬಂಧ ಹೇರಿತ್ತು. ಆದರೆ ಇದೀಗ ಪಾದಯಾತ್ರಿಗರಿ ಜಿಲ್ಲಾಡಳಿತ ಸಮಯದ ಡೈಡ್​ಲೈನ್ ನೀಡಿದೆ. ನಾಳೆಯಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮಾತ್ರ ಪಾದಯಾತ್ರಿಕರಿಗೆ ಹಾಗೂ ದ್ವಿಚಕ್ರ ವಾಹನಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಗ್ಗೆ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಮೂಲದ ಪ್ರವೀಣ್ ಎಂಬ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ತಿಂದ ಘಟನೆ ನಡೆದಿತ್ತು. ಈ ಘಟನೆಯ ಬಳಿಕ ಜಿಲ್ಲಾಡಳಿತವು ತಕ್ಷಣ ಕ್ರಮಕೈಗೊಂಡಿದ್ದು, ಮೊದಲ ಹಂತದಲ್ಲಿ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧವನ್ನು ಜನವರಿ 24ರವರೆಗೆ ಜಾರಿಗೊಳಿಸಲಾಗಿತ್ತು.

ಇದನ್ನೂ ಓದಿ: ಕಾಪಾಡಲಿಲ್ಲ ಮಹದೇಶ್ವರ: ಚಿರತೆ ದಾಳಿಗೆ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ

ಚಿರತೆ ದಾಳಿ ಸಂಭವಿಸುವ ಮೊದಲು ಪಾದಯಾತ್ರಿಕರು ಮತ್ತು ದ್ವಿಚಕ್ರ ವಾಹನಗಳಿಗೆ 24 ಗಂಟೆಗಳ ಕಾಲವೂ ಸಂಚಾರಕ್ಕೆ ಅವಕಾಶವಿತ್ತು. ಆದರೆ ಇತ್ತೀಚಿನ ದುರ್ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೊಸ ಸಮಯ ಮಿತಿಯನ್ನು ವಿಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:45 pm, Sat, 24 January 26

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ