AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಹುಲಿ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ರಾಜ್ಯ ಸರ್ಕಾರ

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂದ ಪಟ್ಟಂತೆ ಅರಣ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರ ತಕ್ಕ ಮಟ್ಟಿಗೆ ಬಿಸಿ ಮುಟ್ಟಿದೆ. ‘ಟಿವಿ9’ ವರದಿ ಬೆನ್ನಲ್ಲೇ ಡಿಸಿಎಫ್, ಎಸಿಎಫ್ ಹಾಗೂ ಆರ್​​​ಫ್​​ಒಗೆ ಕಡ್ಡಾಯ ರಜೆಯಲ್ಲಿ ತೆರಳುವಂತೆ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ ಹುಲಿ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ರಾಜ್ಯ ಸರ್ಕಾರ
ಬಂಡಿಪುರ ಹುಲಿ ಸಂರಕ್ಷಿತಾರಣ್ಯ (ಚಿತ್ರ ಕೃಪೆ: ಅರಣ್ಯ ಇಲಾಖೆ ಎಕ್ಸ್​ ಖಾತೆ)Image Credit source: Twitter
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jul 01, 2025 | 11:45 AM

Share

ಚಾಮರಾಜನಗರ, ಜುಲೈ 1: ಅಳಿವಿನ ಅಂಚಿನಲ್ಲಿರುವ ವ್ಯಾಘ್ರ ಸಂತತಿಯನ್ನು ಉಳಿಸಿ ಬೆಳೆಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ಮಾಡುತ್ತಿವೆ. ಅದರಲ್ಲೂ ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಖ್ಯಾತಿ ಚಾಮರಾಜನಗರ ಜಿಲ್ಲೆಗೆ ಇದೆ. ಎರಡೆರಡು ಹುಲಿ ಸಂರಕ್ಷಿತಾರಣ್ಯ ಹೊಂದಿರುವ ಈ ಚಾಮರಾಜನಗರ ಜಿಲ್ಲೆಗೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ ಐದು ಹುಲಿಗಳ ಹತ್ಯಾಕಾಂಡ (Tiger Death) ಈಗ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಎಸಿ ರೂಮಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಡಿಸಿಎಫ್ ಚಕ್ರಪಾಣಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದ್ದು, ಕಡ್ಡಾಯ ರಜೆಗೆ ತೆರಳುವಂತೆ ಸೂಚಿಸಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮೀಣ್ಯಂ ಪ್ರದೇಶದಲ್ಲಿ ರಸ್ತೆ ಪಕ್ಕದಲ್ಲೇ 100 ಮೀಟರ್ ದೂರದಲ್ಲಿ ಐದು ಹುಲಿಗಳಿಗೆ ವಿಷಹಾಕಿ ಕೊಲ್ಲಲಾಗಿತ್ತು. ವ್ಯಾಘ್ರ ಹಂತಕರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ಆದರೆ ಈ ಘಟನೆಯಂದಾಗಿ, ಡಿಸಿಎಫ್ ಚಕ್ರಪಾಣಿಯ ಆಟಾಟೋಪ, ಅಸಡ್ಡೆಯಿಂದ ಮಾಡಿಕೊಂಡ ಎಡವಟ್ಟು ಒಂದೊಂದಾಗಿ ಬೆಳಕಿಗೆ ಬಂದಿದೆ. ಚಿರತೆ, ಆನೆ ದಾಳಿ ನಡೆಸಿದರೆ ಸ್ಥಳಕ್ಕೆ ಬರುವುದಿಲ್ಲ, ಎಸಿ ರೂಮ್ ಬಿಟ್ಟು ಆಚೆ ಕಾಲಿಡಲ್ಲ ಎಂಬ ಆರೋಪಗಳು ಅವರ ವಿರುದ್ಧ ಕೇಳಿಬಂದಿದ್ದವು. ರೈತರು ಕರೆ ಮಾಡಿದರೂ ಪ್ರತಿಕ್ರಿಯಿಸುವುದಿಲ್ಲ ಎಂದು ಆರೋಪಿಸಲಾಗಿತ್ತು.

ಖುದ್ದು ಸಂಸದರೇ ಕರೆ ಮಾಡಿದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಆರೋಪವೂ ಅವರ ವಿರುದ್ಧ ಕೇಳಿಬಂದಿದೆ. ಭರಚುಕ್ಕಿ ಪವರ್ ಪ್ರಾಜೆಕ್ಟ್​​ಗೆ ಭಾರೀ ವಿರೋಧವಿದ್ದರೂ ಅದಕ್ಕೆ ಚಕ್ರಪಾಣಿ ಗ್ರೀನ್ ಸಿಗ್ನಲ್ ನೀಡಿದ್ದರು. ಈ ಎಲ್ಲ ನೌಟಂಕಿಯಾಟದ ಕುರಿತು ‘ಟಿವಿ9’ ಸಮಗ್ರ ವರದಿ ಮಾಡಿತ್ತು. ಈಗ ವರದಿ ಪರಿಣಾಮ ಬೀರಿದ್ದು, ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ, ಆರ್​​ಎಫ್​​ಒ ಮಾದೇಶರಿಗೆ ಸಿಸಿಎಫ್ ಕಡ್ಡಾಯ ರಜೆಗೆ ತೆರಳುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ
Image
ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ!
Image
ನೈಸ್ ರಸ್ತೆ ಟೋಲ್ ದರ ಹೆಚ್ಚಳ: ಇಲ್ಲಿದೆ ಪರಿಷ್ಕೃತ ದರ ಪಟ್ಟಿ
Image
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್​ನಲ್ಲಿ ಅಗ್ನಿ ಅವಘಡ
Image
ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದ ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ

ಇದನ್ನೂ ಓದಿ: ಚಾಮರಾಜನಗರ: ಹುಲಿ ಹಂತಕರು 3 ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ

ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂಬಂತೆ ಮಾಡಿದ ಎಡವಟ್ಟಿಗೆ ಈಗ ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆಗೆ ತೆರಳುವಂತೆ ಸೂಚಿಸಲಾಗಿದೆ. ಆದರೆ, ಇಂಥವರನ್ನು ಅಮಾನತು ಮಾಡಲೇ ಬೇಕು. ಈ ಕಡ್ಡಾಯ ರಜೆಯ ಅವಶ್ಯಕತೆಯಿಲ್ಲ ಎಂದು ಸಾರ್ವವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:44 am, Tue, 1 July 25

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ