ಚಾಮರಾಜನಗರ: ಡೆಡ್ಲಿ ಹೈವೇಯಾಗಿ ಬದಲಾದ ರಾಷ್ಟ್ರೀಯ ಹೆದ್ದಾರಿ, 15 ದಿನಗಳಲ್ಲಿ 5 ಭೀಕರ ಅಪಘಾತ, ಐವರ ದುರ್ಮರಣ

ಇದು ಕರ್ನಾಟಕ ಕೇರಳ ಸಂಪರ್ಕಿಸುವ ಮುಖ್ಯ ರಸ್ತೆ. ದಿನ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿ. ಆದರೆ, ಕಳೆದ 15 ದಿನಗಳಲ್ಲಿ ಐದು ಪ್ರತ್ಯೇಕ ಅಪಘಾತ ಪ್ರಕರಣಗಳು ಸಂಭವಿಸಿ ಡೆಡ್ಲಿ ಹೈವೇ ಎಂಬ ಹಣೆ ಪಟ್ಟಿ ಪಡೆದಿದೆ. ಇಲ್ಲಿ ಅಪಘಾತ ಹೆಚ್ಚಾಗಲು ಕಾರಣವೇನು? ಪರಿಹಾರ ಹೇಗೆ ಸಾಧ್ಯ? ಎಲ್ಲ ವಿವರ ಇಲ್ಲಿದೆ.

ಚಾಮರಾಜನಗರ: ಡೆಡ್ಲಿ ಹೈವೇಯಾಗಿ ಬದಲಾದ ರಾಷ್ಟ್ರೀಯ ಹೆದ್ದಾರಿ, 15 ದಿನಗಳಲ್ಲಿ 5 ಭೀಕರ ಅಪಘಾತ, ಐವರ ದುರ್ಮರಣ
ರಾಷ್ಟ್ರೀಯ ಹೆದ್ದಾರಿ 766
Follow us
| Updated By: ಗಣಪತಿ ಶರ್ಮ

Updated on:Jun 15, 2024 | 6:22 PM

ಚಾಮರಾಜನಗರ, ಜೂನ್ 15: ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ (Gundlupete)ತಾಲೂಕಿನ ಬೇಗೂರು ರಾಷ್ಟ್ರೀಯ ಹೆದ್ದಾರಿ 766 (National Highway 766) ರಲ್ಲಿ ಕಳೆದ ಕೆಲವು ದಿನಗಳಿಂದ ಅಪಘಾತಗಳು (Accidents) ಹೆಚ್ಚಾಗಿವೆ. ದಿನ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ಈ ಹೆದ್ದಾರಿಯಲ್ಲಿ ಕಳೆದ 15 ದಿನಗಳಲ್ಲಿ ಐದು ಪ್ರತ್ಯೇಕ ಅಪಘಾತ ಪ್ರಕರಣಗಳು ಸಂಭವಿಸಿದ್ದು, ಈಗ ಡೆಡ್ಲಿ ಹೈವೆ ಎಂಬ ಹಣೆ ಪಟ್ಟಿ ಪಡೆದಿದೆ. ಕೇರಳ ಹಾಗೂ ಕರ್ನಾಟಕ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ.

ಅತಿ ವೇಗ, ಅಪಘಾತಗಳಿಗೆ ಇದುವೇ ಕಾರಣ!

ಈ ಹೆದ್ದಾರಿಗೆ ಡೆಡ್ಲಿ ಹೈವೆ ಎಂಬ ಅಪಖ್ಯಾತಿ ಬರಲು ಒಂದು ಕಾರಣವಿದೆ. ಈ ರಸ್ತೆ ಗುಂಡ್ಲುಪೇಟೆ, ಬಂಡೀಪುರ, ಕೇರಳದ ಮೂಲೆಹೊಳೆ, ಮುಥಾಂಗ ಹಾಗೂ ತಮಿಳುನಾಡಿನ ಊಟಿಗೆ ಸಂಪರ್ಕ ಕಲ್ಪಿಸುವ ಸಂಪರ್ಕ ಕೇಂದ್ರವಾಗಿದೆ. ರಾತ್ರಿ 9 ಗಂಟೆಗೆ ಚೆಕ್ ಪೋಸ್ಟ್ ಬಂದ್ ಆದರೆ ಬೆಳೆಗ್ಗೆ 5 ಗಂಟೆಗೆ ಚೆಕ್ ಪೋಸ್ಟ್ ತೆರೆಯುತ್ತದೆ. ಹಾಗಾಗಿ ಚೆಕ್ ಪೋಸ್ಟ್ ದಾಟುವ ದಾವಂತದಲ್ಲಿ ವಾಹನ ಚಾಲಕರು ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಾರೆ. ಇದರ ಜತೆಗೆ ಕೇರಳದಿಂದ ಆಗಮಿಸುವ ಯುವಕರ ತಂಡ ಕಂಠಪೂರ್ತಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪಘಾತಕ್ಕೆ ಮುಖ್ಯ ಕಾರಣವಾಗಿದೆ. ರಾತ್ರಿ ವೇಳೆ ಅತಿ ಹೆಚ್ಚು ಅವಘಾತವಾಗುವುದಕ್ಕೆ ಇದೇ ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

ಬೇಗೂರು ನಗರದಲ್ಲಿ ಸೂಕ್ತ ಸ್ಕೈವಾಕ್ ಹಾಗೂ ರಸ್ತೆ ಅಗಲೀಕರಣ ಮಾಡುವುದರ ಜೊತೆಗೆ ಡ್ರಿಂಕ್ ಎಂಡ್ ಡ್ರೈವ್ ತಪಾಸಣೆ ನಡೆಸಿದರೆ ಅಪಘಾತ ತಡೆಯುವುದರ ಜೊತೆ ಅಮಾಯಕ ಪಾದಚಾರಿಗಳ ಪ್ರಾಣ ಉಳಿಸಬಹುದಾಗಿದೆ ಎಂಬುದು ಸ್ಥಳೀಯರ ವಾದವಾಗಿದೆ. ಆದಷ್ಟು ಬೇಗ ಆಡಳಿತ ರಸ್ತೆ ಅಗಲೀಕರಣ ಮಾಡಿಸಿ ಹಾಗೂ ಸ್ಕೈವಾಕ್ ಸೇರಿದಂತೆ ಇತರ ಕ್ರಮಗಳನ್ನು ಕೈಗೊಂಡು ಅಮಾಯಕ ಜೀವ ಬಲಿಯಾಗುವುದನ್ನ ತಡೆಯ ಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:20 pm, Sat, 15 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್