AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಡೆಡ್ಲಿ ಹೈವೇಯಾಗಿ ಬದಲಾದ ರಾಷ್ಟ್ರೀಯ ಹೆದ್ದಾರಿ, 15 ದಿನಗಳಲ್ಲಿ 5 ಭೀಕರ ಅಪಘಾತ, ಐವರ ದುರ್ಮರಣ

ಇದು ಕರ್ನಾಟಕ ಕೇರಳ ಸಂಪರ್ಕಿಸುವ ಮುಖ್ಯ ರಸ್ತೆ. ದಿನ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿ. ಆದರೆ, ಕಳೆದ 15 ದಿನಗಳಲ್ಲಿ ಐದು ಪ್ರತ್ಯೇಕ ಅಪಘಾತ ಪ್ರಕರಣಗಳು ಸಂಭವಿಸಿ ಡೆಡ್ಲಿ ಹೈವೇ ಎಂಬ ಹಣೆ ಪಟ್ಟಿ ಪಡೆದಿದೆ. ಇಲ್ಲಿ ಅಪಘಾತ ಹೆಚ್ಚಾಗಲು ಕಾರಣವೇನು? ಪರಿಹಾರ ಹೇಗೆ ಸಾಧ್ಯ? ಎಲ್ಲ ವಿವರ ಇಲ್ಲಿದೆ.

ಚಾಮರಾಜನಗರ: ಡೆಡ್ಲಿ ಹೈವೇಯಾಗಿ ಬದಲಾದ ರಾಷ್ಟ್ರೀಯ ಹೆದ್ದಾರಿ, 15 ದಿನಗಳಲ್ಲಿ 5 ಭೀಕರ ಅಪಘಾತ, ಐವರ ದುರ್ಮರಣ
ರಾಷ್ಟ್ರೀಯ ಹೆದ್ದಾರಿ 766
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jun 15, 2024 | 6:22 PM

Share

ಚಾಮರಾಜನಗರ, ಜೂನ್ 15: ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ (Gundlupete)ತಾಲೂಕಿನ ಬೇಗೂರು ರಾಷ್ಟ್ರೀಯ ಹೆದ್ದಾರಿ 766 (National Highway 766) ರಲ್ಲಿ ಕಳೆದ ಕೆಲವು ದಿನಗಳಿಂದ ಅಪಘಾತಗಳು (Accidents) ಹೆಚ್ಚಾಗಿವೆ. ದಿನ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ಈ ಹೆದ್ದಾರಿಯಲ್ಲಿ ಕಳೆದ 15 ದಿನಗಳಲ್ಲಿ ಐದು ಪ್ರತ್ಯೇಕ ಅಪಘಾತ ಪ್ರಕರಣಗಳು ಸಂಭವಿಸಿದ್ದು, ಈಗ ಡೆಡ್ಲಿ ಹೈವೆ ಎಂಬ ಹಣೆ ಪಟ್ಟಿ ಪಡೆದಿದೆ. ಕೇರಳ ಹಾಗೂ ಕರ್ನಾಟಕ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ.

ಅತಿ ವೇಗ, ಅಪಘಾತಗಳಿಗೆ ಇದುವೇ ಕಾರಣ!

ಈ ಹೆದ್ದಾರಿಗೆ ಡೆಡ್ಲಿ ಹೈವೆ ಎಂಬ ಅಪಖ್ಯಾತಿ ಬರಲು ಒಂದು ಕಾರಣವಿದೆ. ಈ ರಸ್ತೆ ಗುಂಡ್ಲುಪೇಟೆ, ಬಂಡೀಪುರ, ಕೇರಳದ ಮೂಲೆಹೊಳೆ, ಮುಥಾಂಗ ಹಾಗೂ ತಮಿಳುನಾಡಿನ ಊಟಿಗೆ ಸಂಪರ್ಕ ಕಲ್ಪಿಸುವ ಸಂಪರ್ಕ ಕೇಂದ್ರವಾಗಿದೆ. ರಾತ್ರಿ 9 ಗಂಟೆಗೆ ಚೆಕ್ ಪೋಸ್ಟ್ ಬಂದ್ ಆದರೆ ಬೆಳೆಗ್ಗೆ 5 ಗಂಟೆಗೆ ಚೆಕ್ ಪೋಸ್ಟ್ ತೆರೆಯುತ್ತದೆ. ಹಾಗಾಗಿ ಚೆಕ್ ಪೋಸ್ಟ್ ದಾಟುವ ದಾವಂತದಲ್ಲಿ ವಾಹನ ಚಾಲಕರು ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಾರೆ. ಇದರ ಜತೆಗೆ ಕೇರಳದಿಂದ ಆಗಮಿಸುವ ಯುವಕರ ತಂಡ ಕಂಠಪೂರ್ತಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪಘಾತಕ್ಕೆ ಮುಖ್ಯ ಕಾರಣವಾಗಿದೆ. ರಾತ್ರಿ ವೇಳೆ ಅತಿ ಹೆಚ್ಚು ಅವಘಾತವಾಗುವುದಕ್ಕೆ ಇದೇ ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

ಬೇಗೂರು ನಗರದಲ್ಲಿ ಸೂಕ್ತ ಸ್ಕೈವಾಕ್ ಹಾಗೂ ರಸ್ತೆ ಅಗಲೀಕರಣ ಮಾಡುವುದರ ಜೊತೆಗೆ ಡ್ರಿಂಕ್ ಎಂಡ್ ಡ್ರೈವ್ ತಪಾಸಣೆ ನಡೆಸಿದರೆ ಅಪಘಾತ ತಡೆಯುವುದರ ಜೊತೆ ಅಮಾಯಕ ಪಾದಚಾರಿಗಳ ಪ್ರಾಣ ಉಳಿಸಬಹುದಾಗಿದೆ ಎಂಬುದು ಸ್ಥಳೀಯರ ವಾದವಾಗಿದೆ. ಆದಷ್ಟು ಬೇಗ ಆಡಳಿತ ರಸ್ತೆ ಅಗಲೀಕರಣ ಮಾಡಿಸಿ ಹಾಗೂ ಸ್ಕೈವಾಕ್ ಸೇರಿದಂತೆ ಇತರ ಕ್ರಮಗಳನ್ನು ಕೈಗೊಂಡು ಅಮಾಯಕ ಜೀವ ಬಲಿಯಾಗುವುದನ್ನ ತಡೆಯ ಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:20 pm, Sat, 15 June 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ