AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಡೆಡ್ಲಿ ಹೈವೇಯಾಗಿ ಬದಲಾದ ರಾಷ್ಟ್ರೀಯ ಹೆದ್ದಾರಿ, 15 ದಿನಗಳಲ್ಲಿ 5 ಭೀಕರ ಅಪಘಾತ, ಐವರ ದುರ್ಮರಣ

ಇದು ಕರ್ನಾಟಕ ಕೇರಳ ಸಂಪರ್ಕಿಸುವ ಮುಖ್ಯ ರಸ್ತೆ. ದಿನ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿ. ಆದರೆ, ಕಳೆದ 15 ದಿನಗಳಲ್ಲಿ ಐದು ಪ್ರತ್ಯೇಕ ಅಪಘಾತ ಪ್ರಕರಣಗಳು ಸಂಭವಿಸಿ ಡೆಡ್ಲಿ ಹೈವೇ ಎಂಬ ಹಣೆ ಪಟ್ಟಿ ಪಡೆದಿದೆ. ಇಲ್ಲಿ ಅಪಘಾತ ಹೆಚ್ಚಾಗಲು ಕಾರಣವೇನು? ಪರಿಹಾರ ಹೇಗೆ ಸಾಧ್ಯ? ಎಲ್ಲ ವಿವರ ಇಲ್ಲಿದೆ.

ಚಾಮರಾಜನಗರ: ಡೆಡ್ಲಿ ಹೈವೇಯಾಗಿ ಬದಲಾದ ರಾಷ್ಟ್ರೀಯ ಹೆದ್ದಾರಿ, 15 ದಿನಗಳಲ್ಲಿ 5 ಭೀಕರ ಅಪಘಾತ, ಐವರ ದುರ್ಮರಣ
ರಾಷ್ಟ್ರೀಯ ಹೆದ್ದಾರಿ 766
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma|

Updated on:Jun 15, 2024 | 6:22 PM

Share

ಚಾಮರಾಜನಗರ, ಜೂನ್ 15: ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ (Gundlupete)ತಾಲೂಕಿನ ಬೇಗೂರು ರಾಷ್ಟ್ರೀಯ ಹೆದ್ದಾರಿ 766 (National Highway 766) ರಲ್ಲಿ ಕಳೆದ ಕೆಲವು ದಿನಗಳಿಂದ ಅಪಘಾತಗಳು (Accidents) ಹೆಚ್ಚಾಗಿವೆ. ದಿನ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ಈ ಹೆದ್ದಾರಿಯಲ್ಲಿ ಕಳೆದ 15 ದಿನಗಳಲ್ಲಿ ಐದು ಪ್ರತ್ಯೇಕ ಅಪಘಾತ ಪ್ರಕರಣಗಳು ಸಂಭವಿಸಿದ್ದು, ಈಗ ಡೆಡ್ಲಿ ಹೈವೆ ಎಂಬ ಹಣೆ ಪಟ್ಟಿ ಪಡೆದಿದೆ. ಕೇರಳ ಹಾಗೂ ಕರ್ನಾಟಕ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ.

ಅತಿ ವೇಗ, ಅಪಘಾತಗಳಿಗೆ ಇದುವೇ ಕಾರಣ!

ಈ ಹೆದ್ದಾರಿಗೆ ಡೆಡ್ಲಿ ಹೈವೆ ಎಂಬ ಅಪಖ್ಯಾತಿ ಬರಲು ಒಂದು ಕಾರಣವಿದೆ. ಈ ರಸ್ತೆ ಗುಂಡ್ಲುಪೇಟೆ, ಬಂಡೀಪುರ, ಕೇರಳದ ಮೂಲೆಹೊಳೆ, ಮುಥಾಂಗ ಹಾಗೂ ತಮಿಳುನಾಡಿನ ಊಟಿಗೆ ಸಂಪರ್ಕ ಕಲ್ಪಿಸುವ ಸಂಪರ್ಕ ಕೇಂದ್ರವಾಗಿದೆ. ರಾತ್ರಿ 9 ಗಂಟೆಗೆ ಚೆಕ್ ಪೋಸ್ಟ್ ಬಂದ್ ಆದರೆ ಬೆಳೆಗ್ಗೆ 5 ಗಂಟೆಗೆ ಚೆಕ್ ಪೋಸ್ಟ್ ತೆರೆಯುತ್ತದೆ. ಹಾಗಾಗಿ ಚೆಕ್ ಪೋಸ್ಟ್ ದಾಟುವ ದಾವಂತದಲ್ಲಿ ವಾಹನ ಚಾಲಕರು ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಾರೆ. ಇದರ ಜತೆಗೆ ಕೇರಳದಿಂದ ಆಗಮಿಸುವ ಯುವಕರ ತಂಡ ಕಂಠಪೂರ್ತಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪಘಾತಕ್ಕೆ ಮುಖ್ಯ ಕಾರಣವಾಗಿದೆ. ರಾತ್ರಿ ವೇಳೆ ಅತಿ ಹೆಚ್ಚು ಅವಘಾತವಾಗುವುದಕ್ಕೆ ಇದೇ ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

ಬೇಗೂರು ನಗರದಲ್ಲಿ ಸೂಕ್ತ ಸ್ಕೈವಾಕ್ ಹಾಗೂ ರಸ್ತೆ ಅಗಲೀಕರಣ ಮಾಡುವುದರ ಜೊತೆಗೆ ಡ್ರಿಂಕ್ ಎಂಡ್ ಡ್ರೈವ್ ತಪಾಸಣೆ ನಡೆಸಿದರೆ ಅಪಘಾತ ತಡೆಯುವುದರ ಜೊತೆ ಅಮಾಯಕ ಪಾದಚಾರಿಗಳ ಪ್ರಾಣ ಉಳಿಸಬಹುದಾಗಿದೆ ಎಂಬುದು ಸ್ಥಳೀಯರ ವಾದವಾಗಿದೆ. ಆದಷ್ಟು ಬೇಗ ಆಡಳಿತ ರಸ್ತೆ ಅಗಲೀಕರಣ ಮಾಡಿಸಿ ಹಾಗೂ ಸ್ಕೈವಾಕ್ ಸೇರಿದಂತೆ ಇತರ ಕ್ರಮಗಳನ್ನು ಕೈಗೊಂಡು ಅಮಾಯಕ ಜೀವ ಬಲಿಯಾಗುವುದನ್ನ ತಡೆಯ ಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:20 pm, Sat, 15 June 24

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ