ಚಾಮರಾಜನಗರ: ಡೆಡ್ಲಿ ಹೈವೇಯಾಗಿ ಬದಲಾದ ರಾಷ್ಟ್ರೀಯ ಹೆದ್ದಾರಿ, 15 ದಿನಗಳಲ್ಲಿ 5 ಭೀಕರ ಅಪಘಾತ, ಐವರ ದುರ್ಮರಣ

ಇದು ಕರ್ನಾಟಕ ಕೇರಳ ಸಂಪರ್ಕಿಸುವ ಮುಖ್ಯ ರಸ್ತೆ. ದಿನ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿ. ಆದರೆ, ಕಳೆದ 15 ದಿನಗಳಲ್ಲಿ ಐದು ಪ್ರತ್ಯೇಕ ಅಪಘಾತ ಪ್ರಕರಣಗಳು ಸಂಭವಿಸಿ ಡೆಡ್ಲಿ ಹೈವೇ ಎಂಬ ಹಣೆ ಪಟ್ಟಿ ಪಡೆದಿದೆ. ಇಲ್ಲಿ ಅಪಘಾತ ಹೆಚ್ಚಾಗಲು ಕಾರಣವೇನು? ಪರಿಹಾರ ಹೇಗೆ ಸಾಧ್ಯ? ಎಲ್ಲ ವಿವರ ಇಲ್ಲಿದೆ.

ಚಾಮರಾಜನಗರ: ಡೆಡ್ಲಿ ಹೈವೇಯಾಗಿ ಬದಲಾದ ರಾಷ್ಟ್ರೀಯ ಹೆದ್ದಾರಿ, 15 ದಿನಗಳಲ್ಲಿ 5 ಭೀಕರ ಅಪಘಾತ, ಐವರ ದುರ್ಮರಣ
ರಾಷ್ಟ್ರೀಯ ಹೆದ್ದಾರಿ 766
Edited By:

Updated on: Jun 15, 2024 | 6:22 PM

ಚಾಮರಾಜನಗರ, ಜೂನ್ 15: ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ (Gundlupete)ತಾಲೂಕಿನ ಬೇಗೂರು ರಾಷ್ಟ್ರೀಯ ಹೆದ್ದಾರಿ 766 (National Highway 766) ರಲ್ಲಿ ಕಳೆದ ಕೆಲವು ದಿನಗಳಿಂದ ಅಪಘಾತಗಳು (Accidents) ಹೆಚ್ಚಾಗಿವೆ. ದಿನ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ಈ ಹೆದ್ದಾರಿಯಲ್ಲಿ ಕಳೆದ 15 ದಿನಗಳಲ್ಲಿ ಐದು ಪ್ರತ್ಯೇಕ ಅಪಘಾತ ಪ್ರಕರಣಗಳು ಸಂಭವಿಸಿದ್ದು, ಈಗ ಡೆಡ್ಲಿ ಹೈವೆ ಎಂಬ ಹಣೆ ಪಟ್ಟಿ ಪಡೆದಿದೆ. ಕೇರಳ ಹಾಗೂ ಕರ್ನಾಟಕ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ.

ಅತಿ ವೇಗ, ಅಪಘಾತಗಳಿಗೆ ಇದುವೇ ಕಾರಣ!

ಈ ಹೆದ್ದಾರಿಗೆ ಡೆಡ್ಲಿ ಹೈವೆ ಎಂಬ ಅಪಖ್ಯಾತಿ ಬರಲು ಒಂದು ಕಾರಣವಿದೆ. ಈ ರಸ್ತೆ ಗುಂಡ್ಲುಪೇಟೆ, ಬಂಡೀಪುರ, ಕೇರಳದ ಮೂಲೆಹೊಳೆ, ಮುಥಾಂಗ ಹಾಗೂ ತಮಿಳುನಾಡಿನ ಊಟಿಗೆ ಸಂಪರ್ಕ ಕಲ್ಪಿಸುವ ಸಂಪರ್ಕ ಕೇಂದ್ರವಾಗಿದೆ. ರಾತ್ರಿ 9 ಗಂಟೆಗೆ ಚೆಕ್ ಪೋಸ್ಟ್ ಬಂದ್ ಆದರೆ ಬೆಳೆಗ್ಗೆ 5 ಗಂಟೆಗೆ ಚೆಕ್ ಪೋಸ್ಟ್ ತೆರೆಯುತ್ತದೆ. ಹಾಗಾಗಿ ಚೆಕ್ ಪೋಸ್ಟ್ ದಾಟುವ ದಾವಂತದಲ್ಲಿ ವಾಹನ ಚಾಲಕರು ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಾರೆ. ಇದರ ಜತೆಗೆ ಕೇರಳದಿಂದ ಆಗಮಿಸುವ ಯುವಕರ ತಂಡ ಕಂಠಪೂರ್ತಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪಘಾತಕ್ಕೆ ಮುಖ್ಯ ಕಾರಣವಾಗಿದೆ. ರಾತ್ರಿ ವೇಳೆ ಅತಿ ಹೆಚ್ಚು ಅವಘಾತವಾಗುವುದಕ್ಕೆ ಇದೇ ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

ಬೇಗೂರು ನಗರದಲ್ಲಿ ಸೂಕ್ತ ಸ್ಕೈವಾಕ್ ಹಾಗೂ ರಸ್ತೆ ಅಗಲೀಕರಣ ಮಾಡುವುದರ ಜೊತೆಗೆ ಡ್ರಿಂಕ್ ಎಂಡ್ ಡ್ರೈವ್ ತಪಾಸಣೆ ನಡೆಸಿದರೆ ಅಪಘಾತ ತಡೆಯುವುದರ ಜೊತೆ ಅಮಾಯಕ ಪಾದಚಾರಿಗಳ ಪ್ರಾಣ ಉಳಿಸಬಹುದಾಗಿದೆ ಎಂಬುದು ಸ್ಥಳೀಯರ ವಾದವಾಗಿದೆ. ಆದಷ್ಟು ಬೇಗ ಆಡಳಿತ ರಸ್ತೆ ಅಗಲೀಕರಣ ಮಾಡಿಸಿ ಹಾಗೂ ಸ್ಕೈವಾಕ್ ಸೇರಿದಂತೆ ಇತರ ಕ್ರಮಗಳನ್ನು ಕೈಗೊಂಡು ಅಮಾಯಕ ಜೀವ ಬಲಿಯಾಗುವುದನ್ನ ತಡೆಯ ಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:20 pm, Sat, 15 June 24

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us