AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ ಹಿಡಿದ ಕೂಂಬಿಂಗ್ ಕಿಂಗ್ ಬಲರಾಮ ತಂಡ

ಒಂಟಿ ಕಾಡಾನೆ ಬೆಳೆ ನಾಶ ಮಾಡುತ್ತಿದ್ದ ಹಿನ್ನಲೆ ಪುಂಡಾನೆಯನ್ನ ಸೆರೆ ಹಿಡಿದು ನಮ್ಮ ಬೆಳೆಗಳನ್ನ ರಕ್ಷಿಸಿ ಎಂದು ರೈತರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದೇ ರೀತಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೂನ್ನಾಚಿಯಲ್ಲಿ ನಿನ್ನೆಆ.18) ಅರಣ್ಯಾಧಿಕಾರಿಗಳು ಕೂಂಬಿಂಗ್ ಎಸ್ಕ್ಪರ್ಟ್ ಬಲರಾಮ ನೇತೃತ್ವದ 6 ಸಾಕಾನೆಗಳೊಂದಿಗೆ ಕೂಂಬಿಂಗ್ ಕಾರ್ಯಚರಣೆ ನಡೆಸಿ ಆನೆ ಸೆರೆ ಹಿಡಿಯಲಾಗಿದೆ.

ಸೂರಜ್ ಪ್ರಸಾದ್ ಎಸ್.ಎನ್
| Updated By: ಆಯೇಷಾ ಬಾನು|

Updated on:Aug 19, 2023 | 12:22 PM

Share

ಚಾಮರಾಜನಗರ, ಆ. 19: ಗಡಿನಾಡು ಚಾಮರಾಜನಗರ(Chamarajanagar ) ಜಿಲ್ಲೆ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್​ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನ ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ ಹಾಗೂ ಚಿರತೆ ಹೊಂದಿರುವ ಜಿಲ್ಲೆಯೆಂಬ ಖ್ಯಾತಿ ಕೂಡ ಚಾಮರಾಜನಗರಕ್ಕಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಒಂಟಿ ಸಲಗವೊಂದು(Wild Elephant) ಪದೇ ಪದೇ ಜಮೀನುಗಳಿಗೆ ನುಗ್ಗಿ ಬೆಳೆದ ಬೆಳೆಗಳನ್ನ ತಿಂದು ತೇಗುತ್ತಿತ್ತು. ಸದ್ಯ ಈಗ ಕೂಂಬಿಂಗ್ ಕಿಂಗ್ ಬಲರಾಮ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಂಚಿನ ಜನರಿಗೆ ಉಪಟಳ ನೀಡ್ತಿದ್ದ ಪುಂಡಾನೆಯನ್ನು ಸೆರೆ ಹಿಡಿದಿದೆ.

ಒಂಟಿ ಕಾಡಾನೆ ಬೆಳೆ ನಾಶ ಮಾಡುತ್ತಿದ್ದ ಹಿನ್ನಲೆ ಪುಂಡಾನೆಯನ್ನ ಸೆರೆ ಹಿಡಿದು ನಮ್ಮ ಬೆಳೆಗಳನ್ನ ರಕ್ಷಿಸಿ ಎಂದು ರೈತರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದೇ ರೀತಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೂನ್ನಾಚಿಯಲ್ಲಿ ನಿನ್ನೆಆ.18) ಅರಣ್ಯಾಧಿಕಾರಿಗಳು ಕೂಂಬಿಂಗ್ ಎಸ್ಕ್ಪರ್ಟ್ ಬಲರಾಮ ನೇತೃತ್ವದ 6 ಸಾಕಾನೆಗಳೊಂದಿಗೆ ಕೂಂಬಿಂಗ್ ಕಾರ್ಯಚರಣೆ ಆರಂಭಿಸಿ ನಿನ್ನೆ ರಾತ್ರಿ 9.30 ರ ವೇಳೆಗೆ ಕೂನೆಗೂ ಪುಂಡಾನೆಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಶು ವೈದ್ಯಾಧಿಕಾರಿ ರಮೇಶ್ ಕಾಡಾನೆಗೆ ಮತ್ತು ಬರುವ ಅರವಳಿಕೆಯನ್ನ ನೀಡುವ ಮೂಲಕ ಸೆರೆ ಹಿಡಿಯಲಾಗಿದೆ. ಹೀಗೆ ಸೆರೆ ಹಿಡಿದ ಕಾಡಾನೆಯನ್ನ ಮಲೆಹದೇಶ್ವರ ವನ್ಯಧಾಮದ ಆನೆ ಬಿಡಾರದಲ್ಲಿ 3 ತಿಂಗಳುಗಳ ಕಾಲ ಪ್ರತ್ಯೇಕವಾಗಿಟ್ಟು ಬಳಿಕ ತರಬೇತಿ ನೀಡಲಾಗುತ್ತೆ. ಸದ್ಯ ಪುಂಡಾನೆ ಸೆರೆ ಹಿಡಿದ ಪರಿಣಾಮ ಕಾಡಂಚಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಇದೇನಿದು ಬಂದೂಕು ಹಿಡಿದು ದಾಳಿಂಬೆ ತೋಟ ಕಾಯುವ ಪರಿಸ್ಥಿತಿ ಬಂದುಬಿಟ್ಟಿತೇ ರೈತನಿಗೆ!? ದಾಳಿಂಬೆಗೆ ಬಂದಿದೆ ಚಿನ್ನದ ಬೆಲೆ

ಬೀದಿ ನಾಯಿಗಳ ದಾಳಿಗೆ ಐದು ಮೇಕೆಗಳು ಬಲಿ

ಬೆಳಗಾವಿ ‌ಜಿಲ್ಲೆ ಚಿಕ್ಕೋಡಿ ತಾಲೂಕಿನ‌ ಬೇಡಕಿಹಾಳ‌ ಗ್ರಾಮದ ಹೊರವಲಯದ ತೋಟದಲ್ಲಿ ಬೀದಿ ನಾಯಿಗಳ ದಾಳಿಗೆ 5 ಮೇಕೆಗಳು ಬಲಿಯಾಗಿವೆ. ಮಹಾದೇವ ಮೋಹಿತೆ ಎಂಬುವವರಿಗೆ ಸೇರಿದ ಐದು‌ ಮೇಕೆಗಳು ಮೃತಪಟ್ಟಿದ್ದು ರೈತ ಕಂಗಾಲಾಗಿದ್ದಾರೆ. ತೋಟದ ವಸತಿಯ ಜನ ಬಿಡಾಡಿ ನಾಯಿಗಳ ಹಾವಳಿಗೆ ಬೇಸತ್ತಿದ್ದು ಈ ಹಿಂದೆಯೂ ಸಹ ದನ ಕರುಗಳ ಮೇಲೆ‌ ದಾಳಿ ನಡೆದಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 10:35 am, Sat, 19 August 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!