AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಿಂದ ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥರು ಗುಜರಾತ್​ನಲ್ಲಿ ಪತ್ತೆ

ಮೂಲತಃ ಚಾಮರಾಜನಗರ ನಿವಾಸಿಗಳಾಗಿದ್ದ ಇರ್ಷದ್ ಹಾಗೂ ನಾಗರಾಜ್ ಮಾನಸಿಕ ಅಸ್ವಸ್ತರಾಗಿದ್ದು ಒಂದು ತಿಂಗಳ ಹಿಂದೆ ಮನೆ ಬಿಟ್ಟು ಹೋದವರು ಇಲ್ಲಿಯವರೆಗೂ ಪತ್ತೆಯಾಗಿರಲಿಲ್ಲ. ಇದೀಗ, ಗುಜರಾಜತನ ಬುಜ್​ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇವರ ಕುಟುಂಬಸ್ಥರು ಸಂತಸಗೊಂಡಿದ್ದಾರೆ.

ಚಾಮರಾಜನಗರದಿಂದ ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥರು ಗುಜರಾತ್​ನಲ್ಲಿ ಪತ್ತೆ
ನಾಗರಾಜ್​, ಇರ್ಷಾದ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:May 19, 2024 | 1:10 PM

Share

ಚಾಮರಾಜನಗರ, ಮೇ 19: ಒಂದು ತಿಂಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರು ಮಾನಸಿಕ ಅಸ್ವಸ್ಥರು (Mentally Ill) ಗುಜರಾತ್​​ನ (Gujarath) ಬುಜ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಇರ್ಷದ್ ಹಾಗೂ ನಾಗರಾಜ್ ಮಾನಸಿಕ ಅಸ್ವಸ್ತರಾಗಿದ್ದು, ಮೂಲತಃ ಚಾಮರಾಜನಗರ (Chamarajanagar) ನಿವಾಸಿಗಳಾಗಿದ್ದಾರೆ. ನಾಗರಾಜ ಕುಟುಂಬ ಚಾಮರಾಜನಗರದ ಮೇದಾರ ಬೀದಿಯಲ್ಲಿ ವಾಸವಾಗಿದೆ. ಇನ್ನು ಇರ್ಷದ್​​ ಕುಟುಂಬಸ್ಥರು ನಗರದ ಗುಂಡ್ಲುಪೇಟೆ ಸರ್ಕಲ್​​ ಬಳಿ ಇರುವ ಗಾಳಿಪುರದಲ್ಲಿ ವಾಸವಾಗಿದ್ದಾರೆ.

ಇರ್ಷದ್ ಹಾಗೂ ನಾಗರಾಜ್ ಕುಟುಂಬ ಬಡತನದಿಂದ ಕೂಡಿದ್ದು, ಇವರಿಗೆ ಚಿಕಿತ್ಸೆ ಕೊಡಿಸಲು ಪೋಷಕರಿಗೆ ಸಾಧ್ಯವಾಗಿಲ್ಲ. ಇನ್ನು ನಾಗರಾಜ ಮತ್ತು ಇರ್ಷದ್​​ ಪ್ರತಿನಿತ್ಯ ಊರಲ್ಲಿ ಸುತ್ತಾಡುತ್ತಾ ಸಾಯಂಕಾಲ ಮನೆ ಕಡೆಗೆ ಮರುಳುತ್ತಿದ್ದರು. ಅಲ್ಲದೆ ಕೆಲವು ಸಲ ಈ ಇಬ್ಬರೂ ಮನೆ ಬಿಟ್ಟು 2-3 ದಿನಗಳ ಕಾಲ ಹೋಗಿದ್ದು ಇದೆ. ಆಗ ಅಪರಚಿತ ವ್ಯಕ್ತಿಗಳನ್ನು ಮನೆಗೆ ತಂದು ಬಿಡುತ್ತಿದ್ದರು. ಅಥವಾ ತಾವೇ ಮನೆಗೆ ಬರುತ್ತಿದ್ದರು.

ಇದನ್ನೂ ಓದಿ: ವಿಜಯಪುರ: ಮೊಬೈಲ್​ ಟವರ್​ ಏರಿದ ಮಾನಸಿಕ ಅಸ್ವಸ್ಥ, ವಿಡಿಯೋ ನೋಡಿ

ಹೀಗೆ, ಕಳೆದ ಒಂದು ತಿಂಗಳ ಹಿಂದೆ ಮನೆಯಿಂದ ಹೊರಗಡೆ ಹೋದ ನಾಗರಾಜ ಮತ್ತಿ ಇರ್ಷದ್​​ 2-3 ದಿನ ಕಳೆದರೂ ಮನೆಗೆ ಮರಳಲಿಲ್ಲ. ಇದರಿಂದ ಆತಂಕಗೊಂಡ ಇವರ ಪೋಷಕರು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಹುಡುಕಾಟ ನಡೆಸಿದ್ದರು ಕೂಡ ಪತ್ತೆಯಾಗಿರಲಿಲ್ಲ. ಇದರಿಂದ ಈ ಇಬ್ಬರ ಕುಟುಂಬಸ್ಥರು ಆತಂಕಗೊಂಡಿದ್ದರು.

ಇದೀಗ, ಇಬ್ಬರೂ ಬುಜ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಅಲ್ಲಿನ ಪೊಲೀಸರು ಇವರನ್ನು ಮಾನವ ಜ್ಯೋತಿ ವಸತಿ ಕೇಂದ್ರದಲ್ಲಿರಿಸಿದ್ದಾರೆ. ಬಳಿಕ ಇವರ ಹಿನ್ನಲೆ ತಿಳಿದುಕೊಂಡು, ಜ್ಯೋತಿ ವಸತಿ ಕೇಂದ್ರದ ಸಿಬ್ಬಂದಿ ಚಾಮರಾಜನಗರ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳು ನಾಗರಾಜ ಮತ್ತು ಇರ್ಷಾದ ಕುಟುಂಬಕ್ಕೆ ತಿಳಿಸಿದ್ದಾರೆ. ಇದರಿಂದ ಸಂತಸಗೊಂಡ ಕುಟುಂಬಸ್ಥರು ನಾಗರಜಾ ಮತ್ತು ಇರ್ಷಾದನನ್ನು ಕರೆದುಕೊಂಡು ಬರಲು ಗುಜರಾತ್​​ಗೆ ತೆರಳಿದ್ದಾರೆ ಎಂದು ಮೂಲಗಳಿಂದ ಟಿವಿ9ಗೆ ಮಾಹಿತಿ ದೊರೆತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Sun, 19 May 24

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ