AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಾಲೇಜಿಗೆ ರೋಬೋಟಿಕ್ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿದ ಸಚಿವ ವಿ.ಸೋಮಣ್ಣ ಅಭಿಮಾನಿಗಳು

ಸರ್ಕಾರಿ ಕಾಲೇಜಿಗೆ ರೋಬೋಟಿಕ್ ಪ್ರಯೋಗಾಲಯವನ್ನು ಸಚಿವ ವಿ.ಸೋಮಣ್ಣ ಅಭಿಮಾನಿಗಳು ಕೊಡುಗೆಯಾಗಿ ನೀಡುವ ಮೂಲಕ ಸಚಿವರ ಹುಟ್ಟುಹಬ್ಬವನ್ನ ವಿಶಿಷ್ಟವಾಗಿ ಆಚರಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲೇ ರೊಬೋಟಿಕ್ ಪ್ರಯೋಗಾಲಯ ಹೊಂದಿದ ಮೊದಲ ಸರ್ಕಾರಿ ಪದವಿ ಪೂರ್ವ ಕಾಲೇಜು ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಸರ್ಕಾರಿ ಕಾಲೇಜಿಗೆ ರೋಬೋಟಿಕ್ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿದ ಸಚಿವ ವಿ.ಸೋಮಣ್ಣ ಅಭಿಮಾನಿಗಳು
ರೋಬೋಟ್ ಪ್ರಯೋಗಾಲಯ
TV9 Web
| Edited By: |

Updated on:Jul 26, 2022 | 1:22 PM

Share

ಚಾಮರಾಜನಗರ: ಸರ್ಕಾರಿ ಕಾಲೇಜಿಗೆ ರೋಬೋಟಿಕ್ ಪ್ರಯೋಗಾಲಯ (Robotic Laboratory)ವನ್ನು ಸಚಿವ ವಿ.ಸೋಮಣ್ಣ ಅಭಿಮಾನಿಗಳು ಕೊಡುಗೆಯಾಗಿ ನೀಡುವ ಮೂಲಕ ಸಚಿವರ ಹುಟ್ಟುಹಬ್ಬವನ್ನ ವಿಶಿಷ್ಟವಾಗಿ ಆಚರಿಸಿದ್ದಾರೆ. ದುಂದುವೆಚ್ಚಕ್ಕೆ ತಿಲಾಂಜಲಿ ಇಟ್ಟು ಜನೋಪಯೋಗಿ ಕಾರ್ಯಕ್ಕೆ ಮುಂದಾದ ಅಭಿಮಾನಿಗಳು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೋಬೋಟಿಕ್ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿದರು. ಆ ಮೂಲಕ ರಾಜ್ಯದಲ್ಲೇ ರೊಬೋಟಿಕ್ ಪ್ರಯೋಗಾಲಯ ಹೊಂದಿದ ಮೊದಲ ಸರ್ಕಾರಿ ಪದವಿ ಪೂರ್ವ ಕಾಲೇಜು ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡಿ ವಿಜ್ರಂಭಣೆಯಿಂದ ಆಚರಿಸಲಾಗುತ್ತದೆ. ಇಂತಹ ಆಚರಣೆಗೆ ದುಂದುವೆಚ್ಚಗಳು ನಡೆಯುವುದೇ ಹೆಚ್ಚು. ಇದರ ಹೊರತಾಗಿ ಧನಾತ್ಮಕವಾಗಿ ಚಿಂತನೆ ನಡೆಸಿದ ಸಚಿವ ಸೋಮಣ್ಣ ಅವರ ಅಭಿಮಾನಿಗಳು ಬೇಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ವಿಜ್ಞಾನ ಮತ್ತು ರೋಬೋಟಿಕ್ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ರೊಬೋಟಿಕ್ ಪ್ರಯೋಗಾಲಯ ಹೊಂದಿದ ರಾಜ್ಯದ ಮೊಲದ ಸರ್ಕಾರಿ ಪದವಿ ಪೂರ್ವ ಕಾಲೇಜು ಎಂಬ ಹಿರಿಮೆಗೆ ಪಾತ್ರವಾಗಿದೆ.

ಕೇಕ್ ಕಟ್ ಮಾಡುವುದಕ್ಕೆ, ಅದ್ದೂರಿ ಪಾರ್ಟಿ ಆಯೋಜನೆ ಮಾಡುವುದಕ್ಕೆ, ಬ್ಯಾನರ್, ಪ್ಲೆಕ್ಸ್, ಬಂಟಿಂಗ್ಸ್‌ಗಳಿಗೆ, ಅನಾವಶ್ಯಕ ದುಂದುವೆಚ್ಚಕ್ಕೆ ತಿಲಾಂಜಲಿ ಇಟ್ಟು ಜನೋಪಯೋಗಿ ಕಾರ್ಯಕ್ಕೆ ಮುಂದಾದ ಅಭಿಮಾನಿಗಳು ಕಳೆದ ವರ್ಷ ಹಂಗಳದ ಸರ್ಕಾರಿ ಶಾಲೆಗೆ ಡಿಜಿಟಲ್ ಲೈಬ್ರರಿ ನೀಡಿದ್ದರು.

ಯಧುವೀರ್ ಒಡೆಯರ್ ಅವರಿಂದ ಲೋಕಾರ್ಪಣೆ

ರೋಬೋಟಿಕ್ ಪ್ರಯೋಗಾಲಯವನ್ನು ಇಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಲೋಕಾರ್ಪಣೆಗೊಳಿಸಿದರು. ಪ್ರೌಢಶಾಲಾ ಹಾಗೂ ಪಿಯುಸಿ ವಿದ್ಯಾರ್ಥಿಗಳ ಕ್ರಿಯಾಶೀಲ ಕಲಿಕೆಗೆ ಪೂರಕವಾಗಿರುವ ಈ ಪ್ರಯೋಗಾಲಯದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಮುಖದಲ್ಲಿ ಸಂತಸ ಅರಳಿದಂತಾಗಿದೆ.

ವಿದ್ಯಾರ್ಥಿಗಳಿಗೆ ಅನುಕೂಲವಾದ ರೊಬೋಟ್ ಪ್ರಯೋಗಾಲಯ

ರೊಬೋಟ್ ಪ್ರಯೋಗಾಲಯದಿಂದಾಗಿ ವಿದ್ಯಾರ್ಥಿಗಳು ಯಾವುದೇ ಸಂಶಯಗಳನ್ನು ಸುಲಭವಾಗಿ ನಿವಾರಿಕೊಳ್ಳುವಂತಾಗಿದೆ.ಶಿಕ್ಷಕರ ನೆರವಿಲ್ಲದೆ ವಿದ್ಯಾರ್ಥಿಗಳೇ ನಾನಾ ರೀತಿಯ ಮಾಡೆಲ್​ಗಳನ್ನು ತಯಾರಿಸಲು, ಪ್ರಯೋಗಗಳನ್ನು ಮಾಡಲು ಅನುಕೂಲಕರವಾಗಿದೆ. ಯಾವುದೇ ಪ್ರಶ್ನೆಗಳಿದ್ದರೂ ಅದನ್ನು ವಿದ್ಯಾರ್ಥಿಗಳು ರೋಬೋಟ್​ನೊಂದಿಗೆ ಕೇಳಿ ಉತ್ತರ ಪಡೆದುಕೊಳ್ಳಬಹುದು. ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾದ ಪಠ್ಯಗಳ ಪ್ರೊಗ್ರಾಮಿಂಗ್‌ಗಳ ಅಳವಡಿಕೆ ಮಾಡಲಾಗಿದೆ.

Published On - 1:16 pm, Tue, 26 July 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ