AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರದಲ್ಲಿ ವ್ಯಕ್ತಿಯ ಅರ್ಧ ಮೃತದೇಹ ಪತ್ತೆ: ಹುಲಿ ಕೊಂದಿರುವ ಶಂಕೆ

Tiger Attack: ಸಂತ್ರಸ್ತ ವ್ಯಕ್ತಿಯ ಕುಟುಂಬದವರಿಗೆ ಆರ್ಥಿಕ ಪರಿಹಾರ ನೀಡುವ ಕುರಿತು ಸರ್ಕಾರದಿಂದ ಮುಂದಿನ ನಿರ್ದೇಶನವನ್ನು ಕೋರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಮಾನವೀಯತೆಯ ಆಧಾರದ ಮೇಲೆ ಸಂತ್ರಸ್ತ ಕುಟುಂಬಕ್ಕೆ ಬಿಟಿಆರ್ ನಿರ್ದೇಶಕ ಪಿ ರಮೇಶ್ ಕುಮಾರ್ ಅವರು 2 ಲಕ್ಷ ರೂ ಚೆಕ್ ವಿತರಿಸಿದ್ದಾರೆ.

ಬಂಡೀಪುರದಲ್ಲಿ ವ್ಯಕ್ತಿಯ ಅರ್ಧ ಮೃತದೇಹ ಪತ್ತೆ: ಹುಲಿ ಕೊಂದಿರುವ ಶಂಕೆ
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on: Dec 13, 2023 | 9:37 AM

Share

ಚಾಮರಾಜನಗರ, ಡಿಸೆಂಬರ್ 13: ಬುಡಕಟ್ಟು ವ್ಯಕ್ತಿಯೊಬ್ಬರು (Tribal Man) ನಾಪತ್ತೆಯಾದ ಒಂದು ದಿನದ ನಂತರ ಅವರ ಅರ್ಧ ದೇಹವು ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ (BTR) ಪತ್ತೆಯಾಗಿದೆ. ಹುಲಿ ದಾಳಿಯಿಂದ (Tiger Attack) ಅವರು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅರ್ಧ ಮೃತದೇಹ ಪತ್ತೆಯಾಗಿರುವ ಬಗ್ಗೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯನ್ನು ಬಸವ (54) ಎಂದು ಗುರುತಿಸಲಾಗಿದೆ.

ಬಸವ ಅವರು ಚಾಮರಾಜನಗರ ಜಿಲ್ಲೆಯ ಆಡಿನಕಣಿವೆ ಹಾಡಿಯ ಬಳಿ ಬಿಟಿಆರ್ ವ್ಯಾಪ್ತಿಯಲ್ಲಿ ಉರುವಲು ಸಂಗ್ರಹಿಸಲು ಮತ್ತು ಜಾನುವಾರುಗಳನ್ನು ಮೇಯಿಸಲು ಹೋಗಿದ್ದಾಗ ಗುಲಿ ದಾಳಿ ಮಾಡಿರು ಸಾಧ್ಯತೆ ಇದೆ. ಬಸವ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಬಸವನ ಅವರ ಸಾವಿನ ಸುದ್ದಿ ಹೊರಬಿದ್ದ ನಂತರ, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಸವ ಅವರು ಅರಣ್ಯ ಅತಿಕ್ರಮಣ ಮಾಡಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬಕ್ಕೆ ಯಾವುದೇ ಪರಿಹಾರವನ್ನು ಘೋಷಿಸಲು ಅರಣ್ಯಾಧಿಕಾರಿಗಳು ನಿರಾಕರಿಸಿದ್ದರು. ಇದರಿಂದ ಗ್ರಾಮಸ್ಥರು ಅಸಮಾಧಾನಗೊಂಡು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಕ್ರಿಯೆ ವಿಳಂಬವಾಯಿತು.

ಸಂತ್ರಸ್ತ ವ್ಯಕ್ತಿಯ ಕುಟುಂಬದವರಿಗೆ ಆರ್ಥಿಕ ಪರಿಹಾರ ನೀಡುವ ಕುರಿತು ಸರ್ಕಾರದಿಂದ ಮುಂದಿನ ನಿರ್ದೇಶನವನ್ನು ಕೋರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಮಾನವೀಯತೆಯ ಆಧಾರದ ಮೇಲೆ ಸಂತ್ರಸ್ತ ಕುಟುಂಬಕ್ಕೆ ಬಿಟಿಆರ್ ನಿರ್ದೇಶಕ ಪಿ ರಮೇಶ್ ಕುಮಾರ್ ಅವರು 2 ಲಕ್ಷ ರೂ ಚೆಕ್ ವಿತರಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚಾಮರಾಜನಗರ: 2 ಹುಲಿಗಳ ಮೃತದೇಹ ಪತ್ತೆ ಪ್ರಕರಣ; ವಿಷವಿಕ್ಕಿ ಕೊಂದ್ರ ಅಕ್ಕ-ಪಕ್ಕದ ಜಮೀನಿನ ಮಾಲೀಕರು?

ಕಲ್ಲಹಳ್ಳಿಯಲ್ಲಿ ಹುಲಿ ದಾಳಿ

ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿಯಲ್ಲಿ ಮಂಗಳವಾರ ರಾತ್ರಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಕಲ್ಲಹಳ್ಳಿ-ಸಂಪಿಗೆಪುರ ಮಾರ್ಗದಲ್ಲಿ ಹುಲಿ ಸಂಚರಿಸುವ ದೃಶ್ಯ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದೆ. ಪದೇ ಪದೆ ಹುಲಿ ಕಾಣಿಸಿರುವ ಕಾರಣ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ