AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಮಲೆ ಮಹದೇಶ್ವರನಿಗೆ ತಟ್ಟಲ್ಲ ಯಾವುದೇ ಗ್ರಹಣ: ಮಾದಪ್ಪನ ರಹಸ್ಯ ತಿಳಿಯಿರಿ!

ಇಂದು ನಭೋ ಮಂಡಲದಲ್ಲಿ ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಇದ್ದು, ಈ ಗ್ರಹಣದ ಎಫೆಕ್ಟ್ ದೇವರಿಗೂ ತಟ್ಟಲಿದೆ. ತಿರುಪತಿ, ಮಂತ್ರಾಲಯ, ಬೆಂಗಳೂರು ಸೇರಿದಂತೆ ರಾಜ್ಯದ ದೊಡ್ಡ ದೊಡ್ಡ ದೇವಾಲಯಗಳು ಬಹುತೇಕ ಮಧ್ಯಾಹ್ನವೇ ಬಂದ್ ಆಗಲಿವೆ. ಆದರೆ, ಈ ಗ್ರಹಣ ಮಾತ್ರ ಮಾದಪ್ಪನಿಗೆ ತಟ್ಟುವುದೇ ಇಲ್ವಂತೆ. ಬರೀ ಈ ಚಂದ್ರಗ್ರಹಣ ಅಷ್ಟೇ ಅಲ್ಲ ಯಾವ ಗ್ರಹಣ ಸಂದರ್ಭದಲ್ಲೂ ಈ ದೇವಾಲಯ ಬಂದ್ ಆಗಲ್ಲ. ಕಾರಣ ಏನು ಅಂತೀರಾ? ಇಲ್ಲಿದೆ ಮಾಹಿತಿ.

ಚಾಮರಾಜನಗರ ಮಲೆ ಮಹದೇಶ್ವರನಿಗೆ ತಟ್ಟಲ್ಲ ಯಾವುದೇ ಗ್ರಹಣ: ಮಾದಪ್ಪನ ರಹಸ್ಯ ತಿಳಿಯಿರಿ!
ಮಲೆ ಮಹದೇಶ್ವರ ಬೆಟ್ಟ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 07, 2025 | 12:08 PM

Share

ಚಾಮರಾಜನಗರ, ಸೆಪ್ಟೆಂಬರ್​ 07: ಇಂದು ರಣ ರಣ ಕಗ್ರಾಸ ಚಂದ್ರಗ್ರಹಣ (Blood Moon Eclipse). ಈ ಗ್ರಹಣ ಹಿನ್ನಲೆ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಿಗೆ ಬೀಗ ಬೀಳಲಿದೆ. ಆದರೆ ಮಲೆ ಮಹದೇಶ್ವರನಿಗೆ (Male Mahadeshwara) ಮಾತ್ರ ಗ್ರಹಣದ ಕರಿಛಾಯೆ ಮಾತ್ರ ತಟ್ಟಲ್ಲ. ಕೇವಲ ಈ ಚಂದ್ರಗ್ರಹಣ ಅಷ್ಟೇ ಅಲ್ಲ ಯಾವ ಗ್ರಹಣಕ್ಕೂ ಈ ದೇವಾಲಯ ಬಂದ್ ಆಗುವುದಿಲ್ಲ. ಏಕೆ ಬಂದ ಆಗುವುದಿಲ್ಲ ಎಂದು ತಿಳಿಯಲು ಮುಂದೆ ಓದಿ.

ಹುಣ್ಣಿಮೆಯ ದಿನದಂದು ಚೆಂದುಳ್ಳಿ ಚೆಲುವೆ ತರ ಮಿರಮಿರ ಮಿಂಚ ಬೇಕಿದ್ದ ಚಂದಮಾಮ ಗ್ರಹಣ ಹಿನ್ನಲೆ ಕಡುಗೆಂಪು ವರ್ಣಕ್ಕೆ ತಿರುಗಲಿದ್ದಾರೆ. ಈಗಾಗಲೇ ಜ್ಯೋತಿಷಿಗಳು ಗ್ರಹಣದ ಸೈಡ್ ಎಫೆಕ್ಟ್, ಪ್ರಕೃತಿ ವಿಕೋಪ, ಜಲ ಪ್ರಳಯದ ಭವಿಷ್ಯ ನುಡಿಯುತ್ತಿದ್ದರೆ, ರಾಜ್ಯಾದ್ಯಂತ ಪ್ರಮುಖ ದೇವಾಲಯಗಳು ಗ್ರಹಣದ ಎಫೆಕ್ಟ್​ಗೆ ಬಂದ್ ಆಗಲಿದೆ. ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಮಲೆ ಮಹದೇಶ್ವರನ ಬೆಟ್ಟದಲ್ಲಿ ಮಾತ್ರ ಎಂದಿನಂತೆ ಪೂಜಾ ಕೈಂಕರ್ಯ ನಡೆಯಲಿದೆ.

ಮಾದಪ್ಪನಿಗೆ ಏಕೆ ಗ್ರಹಣ ತಟ್ಟಲ್ಲಾ?

ಇನ್ನು ಮಾದಪ್ಪನಿಗೆ ಮಾತ್ರ ಏಕೆ ಈ ಗ್ರಹಣ ತಟ್ಟುವುದಿಲ್ಲ ಅಂತ ನೋಡುವುದಾದರೆ, ಮಾದಪ್ಪ ಶಿವನ ಒಂದು ಅವತಾರ, ಪವಾಡ ಪುರುಷ. ಈತನಿಗೆ ಮುಟ್ಟು-ಮೈಲಿಗೆ ಅನ್ನೋದಿಲ್ಲ, ಹಾಗಾಗಿ ಯಾವುದೇ ಗ್ರಹಣದಲ್ಲೂ ಮಲೆ ಮಹದೇಶ್ವರನ ದರ್ಶನ ಭಾಗ್ಯ ತಪ್ಪುವುದಿಲ್ಲ.

ಇದನ್ನೂ ಓದಿ: Blood Moon Eclipse: ದೇವರ ದರ್ಶನಕ್ಕೂ ‘ಗ್ರಹಣ’! ನಾಳೆ ರಾಜ್ಯದ ಪ್ರಮುಖ ದೇಗುಲಗಳು ಬಂದ್

ಈ ಚಂದ್ರಗ್ರಹಣ ಅಷ್ಟೇ ಅಲ್ಲ ಬೇರೆ ಯಾವ ಗ್ರಹಣಕ್ಕೂ ಮಾದಪ್ಪನ ಬೆಟ್ಟ ಬಂದ್ ಆಗುವುದಿಲ್ಲ. ಹಾಗಾಗಿ ಎಂದಿನಂತೆ ಇಂದು ಕೂಡ ಭಕ್ತರಿಗೆ ದರ್ಶನ ಭಾಗ್ಯ ಸಿಗಲಿದೆ.

ಇದನ್ನೂ ಓದಿ: ರಾಹುಗ್ರಸ್ತ ರಕ್ತ ಚಂದ್ರಗ್ರಹಣ ವಿಶೇಷತೆ ಏನು? ಬರಿಗಣ್ಣಿನಿಂದಲೇ ವೀಕ್ಷಿಸಬಹುದೇ?

ಅದೇನೆ ಹೇಳಿ ಸಾತ್ವಿಕರು ಈ ಗ್ರಹಣದ ಶುಭ-ಅಶುಭ, ಪೂಜೆ-ಪುನಸ್ಕಾರ ಅಂತ ತಲೆ ಕೆಡಿಸಿಕೊಂಡರೆ ಇನ್ನು ಕೆಲವರು ವಿಜ್ಞಾನದ ವೈಪರಿತ್ಯ ವಿಸ್ಮಯ ನೋಡಲು ಕಾದು ಕುಳಿತಿರುವುದು ಮಾತ್ರ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?