ಚಾಮರಾಜನಗರ ಆಕ್ಸಿಜನ್ ದುರಂತ: ಪರಿಹಾರ ಸಿಗದೆ ಹೋದ್ರೆ ನಮ್ಮ ಸಾವಿಗೆ ಕಾರಣರಾಗುವಿರಿ, ಸರ್ಕಾರಕ್ಕೆ ಸಂತ್ರಸ್ತರ ಎಚ್ಚರಿಕೆ

ಚಾಮರಾಜನಗರ ಜಿಲ್ಲೆಯ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ಸುಮಾರು 24ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನಮ್ಮ ಗಂಡಂದಿರ ಸಾವಿಗೆ ಕಾರಣ ಆಯ್ತು, ಈ ಸರ್ಕಾರ ನಮ್ಮ ಸಾವಿಗೆ ಕಾರಣ ಆಗೋದು ಬೇಡ ಎಂದು ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಆಕ್ಸಿಜನ್ ದುರಂತ ಸಂಭವಿಸಿ ಮೂರು ವರ್ಷ ಕಳೆದರೂ ಸಂತ್ರಸ್ತರ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಿಲ್ಲ.

ಚಾಮರಾಜನಗರ ಆಕ್ಸಿಜನ್ ದುರಂತ: ಪರಿಹಾರ ಸಿಗದೆ ಹೋದ್ರೆ ನಮ್ಮ ಸಾವಿಗೆ ಕಾರಣರಾಗುವಿರಿ, ಸರ್ಕಾರಕ್ಕೆ ಸಂತ್ರಸ್ತರ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Edited By: ಆಯೇಷಾ ಬಾನು

Updated on: Jan 17, 2024 | 2:00 PM

ಚಾಮರಾಜನಗರ, ಜ.17: 2021ರ ಮೇ 2ರಂದು ಚಾಮರಾಜನಗರ ಜಿಲ್ಲೆಯ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ಸುಮಾರು 24ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು (Chamarajanagar Oxygen Shortage). ಕೋವಿಡ್ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಐಸಿಯುನಲ್ಲಿ ಇದ್ದ ರೋಗಿಗಳು ಆಕ್ಸಿಜನ್‌ ಇಲ್ಲದೆ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆ ಭಾರೀ ಚರ್ಚೆಗೆ ಕಾರಣವಾಗಿತ್ತು. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ನೆರವಿನ ಡ್ರಾಮ ಮಾಡಿದ್ದರು, ಈ ಪ್ರಕರಣವನ್ನು ಚುನಾವಣೆಗೆ ಅಸ್ತ್ರವಾಗಿ ಉಪಯೋಗಿಸಿಕೊಂಡಿದ್ದರು. ಆದರೆ ಈಗ ಘಟನೆ ನಡೆದು ಮೂರು ವರ್ಷ ಕಳೆದರೂ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಸರ್ಕಾರಗಳು ಬದಲಾದರೂ ಸಂತ್ರಸ್ತರ ಕಣ್ಣೀರೊರೆಸುವ ಕೈಗಳು ಮುಂದೆ ಬಂದಿಲ್ಲ. ಹೀಗಾಗಿ ಪರಿಹಾರ ಸಿಗದೆ ಹೋದ್ರೆ ನಮ್ಮ ಸಾವಿಗೆ ನೀವು ಕಾರಣ ಆಗ್ಬೇಡಿ ಎಂದು ಸಂತ್ರಸ್ತರು ಎಚ್ಚರಿಕೆ ನೀಡಿದ್ದಾರೆ.

ಹೋದ ಸರ್ಕಾರ ನಮ್ಮ ಗಂಡಂದಿರ ಸಾವಿಗೆ ಕಾರಣ ಆಯ್ತು, ಈ ಸರ್ಕಾರ ನಮ್ಮ ಸಾವಿಗೆ ಕಾರಣ ಆಗೋದು ಬೇಡ ಎಂದು ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಆಕ್ಸಿಜನ್ ದುರಂತ ಸಂಭವಿಸಿ ಮೂರು ವರ್ಷ ಕಳೆದರೂ ಸಂತ್ರಸ್ತರ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಿಲ್ಲ. ಇತ್ತ ಸೂಕ್ತ ಪರಿಹಾರ, ಸರ್ಕಾರಿ ನೌಕರಿ ಕೂಡ ಸಿಕ್ಕಿಲ್ಲ. ಸಂತ್ರಸ್ತ ಕುಟುಂಬಸ್ಥರ ಜೀವನ ಅಡ್ಡಕತ್ತರಿಗೆ ಸಿಲುಕಿದಂತಾಗಿದೆ. ಕಚೇರಿಗೆ ತಿರುಗಿ ತಿರುಗಿ ಜನಪ್ರತಿನಿಧಿಗಳ ಮನೆ ಸುತ್ತಿ ಚಪ್ಪಲಿ ಸವಿತೇ ಹೊರತೆ ನ್ಯಾಯ ಮಾತ್ರ ಇನ್ನೂ ಸಿಕ್ಕಿಲ್ಲ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದ ಆಕ್ಸಿಜನ್​ ದುರಂತದ ಬಗ್ಗೆ ಮರುತನಿಖೆ: ದಿನೇಶ್​ ಗುಂಡೂರಾವ್

ಆಕ್ಸಿಜನ್ ದುರಂತದಲ್ಲಿ 24ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ರು. ಈ ವೇಳೆ ಈ ಹಿಂದಿನ ಬಿಜೆಪಿ ಸರ್ಕಾರ ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರದ ಜೊತೆ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿತ್ತು. ಕಳೆದ ಭಾರಿ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಸ್ವತಃ ರಾಹುಲ್ ಗಾಂಧಿ ಸಹ ಸಂತ್ರಸ್ತರಿಗೆ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿದ್ರು. ಸರ್ಕಾರ ಬದಲಾದ್ರು ಇನ್ನು ಪರಿಹಾರ ಸಿಗದೆ ಸಂತ್ರಸ್ತ ಕುಟುಂಬಸ್ಥರು ಪರಿತಪ್ಪಿಸುತ್ತಿದ್ದಾರೆ. ಎಲ್ಲೇ ಜನತಾ ದರ್ಶನ ನಡೆದ್ರೂ ಅಲ್ಲಿಗೆ ಹೋಗಿ ಮನವಿ ಮಾಡಿ ಸುಸ್ತಾಗಿದ್ದಾರೆ. ಪರಿಹಾರ ಸಿಗದೆ ಹೋದ್ರೆ ನಮ್ಮ ಸಾವಿಗೆ ನೀವು ಕಾರಣ ಆಗ್ಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಗಂಡ ಸಾವನ್ನಪ್ಪಿದ ಬಳಿಕ ತಂದೆ ಮನೆಯಲ್ಲಿ ಆಶ್ರಯ ಪಡೆದಿದ್ದೇವೆ. ಊಟ, ಬಟ್ಟೆಗೂ ಭಾರಿ ಸಮಸ್ಯೆಯಾಗಿದ್ದು ಆದಷ್ಟು ಬೇಗ ನಮಗೆ ಪರಿಹಾರ ನೀಡಿ ಎಂದು ಸಂತ್ರಸ್ತ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us