AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಆಕ್ಸಿಜನ್ ದುರಂತ: ದಯಾಮರಣ ಕೋರಿ ಸಂತ್ರಸ್ತೆಯರಿಂದ ರಾಷ್ಟ್ರಪತಿಗೆ ಪತ್ರ

2021ರ ಮೇ 2ರಂದು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಗೋಳು ಇನ್ನೂ ನಿಂತಿಲ್ಲ. ಇದೀಗ ಸಂತ್ರಸ್ತೆಯರು ದಯಾಮರಣ ಕೂರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ: ದಯಾಮರಣ ಕೋರಿ ಸಂತ್ರಸ್ತೆಯರಿಂದ ರಾಷ್ಟ್ರಪತಿಗೆ ಪತ್ರ
ಚಾಮರಾಜನಗರ ಆಕ್ಸಿಜನ್ ದುರಂತ: ದಯಾಮರಣ ಕೋರಿ ಸಂತ್ರಸ್ತೆಯರಿಂದ ರಾಷ್ಟ್ರಪತಿಗೆ ಪತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 09, 2024 | 1:22 PM

Share

ಚಾಮರಾಜನಗರ, ಜುಲೈ 09: ಮೂರು ವರ್ಷಗಳ ಹಿಂದೆ ಚಾಮರಾಜನಗರ (Chamarajanagar) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್​ ದುರಂತದಲ್ಲಿ (Oxygen tragedy) ಮೃತಪಟ್ಟವರ ಕುಟುಂಬದ ಸದಸ್ಯರು ವೇತನ, ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ (Presedent of India) ಪತ್ರ ಬರೆದಿದ್ದಾರೆ.

ನೆಪ ಮಾತ್ರಕ್ಕೆ ಒಂಬತ್ತು ಮಂದಿಗೆ ಹೊರಗುತ್ತಿಗೆ ಆಧಾರದ ಡಿ ಗ್ರೂಪ್​ ನೌಕರಿ ನೀಡಲಾಗಿದೆ. ಆದರೆ ಯಾವುದೇ ಆದೇಶ ಪ್ರತಿ ನೀಡದೆ ಬರಿ ಮೌಖಿಕ ಆದೇಶದ ಮೇಲೆ ಜಿಲ್ಲಾಡಳಿತ ಕೆಲಸ ನೀಡಿದೆ. ಕೇವಲ ಮೂರು ತಿಂಗಳ ವೇತನವನ್ನು ಮಾತ್ರ ನೀಡಿ, ಇನ್ನೂ ಎರಡು ತಿಂಗಳ ವೇತನವನ್ನು ಜಿಲ್ಲಾಡಳಿತ ಬಾಕಿ ಉಳಿಸಿ ಕೊಂಡಿದೆ. ಅತ್ತ ಕೂಲಿ ಕೆಲಸಕ್ಕೂ ಹೋಗಲಾಗದೆ, ಇತ್ತ ಹೊರ ಗುತ್ತಿಗೆ ಕೆಲಸವನ್ನು ಮಾಡಲಾಗದೆ ಪರಿತಪ್ಪಿಸುತ್ತಿದ್ದೇವೆ. ಹೀಗಾಗಿ ನಮಗೆ ದಯಾ ಮರಣ ಕರುಣಿಸಿ ಎಂದು ಸಂತ್ರಸ್ತೆಯರು ಕಣ್ಣೀರಿಟ್ಟರು.

ಇದನ್ನೂ ಓದಿ: ಚಾಮರಾಜನಗರ ನಗರಸಭೆಯಿಂದ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ: 8 ಕೋಟಿ ರೂ ಖರ್ಚಾದ್ರೂ ಮುಗಿಲಿಲ್ಲ ರಸ್ತೆ 

ಏನಿದು ಪ್ರಕರಣ

ಮೂರು ವರ್ಷಗಳ ಹಿಂದೆ 2021ರ ಮೇ 2ರಂದು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. 2022ರ ಸೆಪ್ಟೆಂಬರ್​ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಭಾರತ್​ ಜೋಡೋ ಪಾದಯಾತ್ರೆಗಾಗಿ ಗುಂಡ್ಲುಪೇಟೆಗೆ ಬಂದಾಗ, ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿದ್ದರು.

ಬಳಿಕ, ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂತು. ಉದ್ಯೋಗ, ಪರಿಹಾರದ ನಿರೀಕ್ಷೆಯಲ್ಲಿದ ಸಂತ್ರಸ್ತರ ಕಡೆ ಸರ್ಕಾರ ತಲೆ ಹಾಕಲಿಲ್ಲ. ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವುದಾಗಿ ನೀಡಿದ್ದ ಭರವಸೆ ಮರಿಚಿಕೆಯಾಯಿತು.

ಬಳಿಕ ಸಂತ್ರಸ್ತರ ಹೋರಾಟದ ನಂತರ ಕೇವಲ 10 ಮಂದಿಗೆ ಜಿಲ್ಲಾಡಳಿತ ಐದು ತಿಂಗಳ ಹಿಂದೆ ಹೊರಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್‌ ನೌಕರಿ ನೀಡಿತು. ಆದರೆ, ಫೆಬ್ರುವರಿ ಹೊರತುಪಡಿಸಿ ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿಲ್ಲ. ಉದ್ಯೋಗ ಭದ್ರತೆಯನ್ನು ಕೂಡ ನೀಡಿಲ್ಲ. ಕೇವಲ ಮೌಖಿಕ ಸೂಚನೆ ಮೇರೆಗೆ ವಿವಿಧ ಇಲಾಖೆ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸಂತ್ರಸ್ತರು ಕೆಲಸ ಮಾಡುತ್ತಿದ್ದಾರೆ.

ಆಕ್ಸಿಜನ್ ಕೊರತೆಯಿಂದ 36 ಜನ ಮೃತ

2021ರ ಮೇ 2ರಂದು ಚಾಮರಾಜನಗರ ಜಿಲ್ಲೆಯ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿಂದ ಆಕ್ಸಿಜನ್ ಬರಲೇ ಇಲ್ಲ, ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೇ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ವೆಂಟಿಲೇಟರ್‌, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು.

ದುರ್ಘಟನೆಯಲ್ಲಿ ಸರಕಾರದ ಅಂಕಿಅಂಶಗಳ ಪ್ರಕಾರ 24 ಮಂದಿ ಮೃತಪಟ್ಟಿದ್ದಾರೆ ಎಂದಿತ್ತು. ಆದರೆ ಪ್ರಕರಣದ ತನಿಖೆಗಾಗಿ ಹೈಕೋರ್ಟ್‌ ನೇಮಿಸಿದ್ದ ತನಿಖಾ ಸಮಿತಿ 36 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ನೀಡಿತ್ತು. ಹೈಕೋರ್ಟ್‌ನ ಸೂಚನೆಯಂತೆ, ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ಕಳೆದ ವರ್ಷ 2021ರಲ್ಲಿ ಜೂನ್‌ ತಿಂಗಳ ಆರಂಭದಲ್ಲಿ ತಲಾ 2 ಲಕ್ಷ ರೂ ಹಾಗೂ ಆಗಸ್ಟ್‌ ಎರಡನೇ ವಾರದಲ್ಲಿ 13 ಮಂದಿಗೆ ಹೆಚ್ಚುವರಿಯಾಗಿ ತಲಾ 3 ಲಕ್ಷ ಹಣವನ್ನು ತಾತ್ಕಾಲಿಕ ಪರಿಹಾರವಾಗಿ ಜಿಲ್ಲಾಡಳಿತ ವಿತರಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ