AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರನ ದರ್ಶನ ಪಡೆದು ವಾಪಸ್ ಬರುವಾಗ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ 

ಮೈಸೂರು ಜಿಲ್ಲೆಯ ಕೆ.ಆರ್​​.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರನ ದರ್ಶನ ಪಡೆದ ಬಳಿಕ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದೆ. ಓರ್ವ ಮೃತಪಟ್ಟಿದ್ದಾರೆ. ಮೂವರನ್ನು ಕೊಳ್ಳೆಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹದೇಶ್ವರನ ದರ್ಶನ ಪಡೆದು ವಾಪಸ್ ಬರುವಾಗ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ 
ಕೊಳ್ಳೇಗಾಲ ಆಸ್ಪತ್ರೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on:Jun 08, 2024 | 3:28 PM

Share

ಚಾಮರಾಜನಗರ, ಜೂನ್​ 08: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿದ್ದು, ಓರ್ವ ಮೃತಪಟ್ಟಿರುವ ಘಟನೆ ಹನೂರು (Hunur) ತಾಲೂಕಿನ ಮಲೆಮಹದೇಶ್ವರ (Male Mahadeshwara Betta) ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ನಡೆದಿದೆ. ಅಸ್ವಸ್ಥಗೊಂಡ ಮೂವರನ್ನು ಕೊಳ್ಳೇಗಾಲ (Kollegala) ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್​​.ನಗರ ತಾಲೂಕಿನ ಚಂದಗಾಲು ಗ್ರಾಮದ ನಿವಾಸಿ ಮಹದೇವನಾಯಕ (65) ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ (60), ಲೀಲಾವತಿ (45) ಮತ್ತು ರಿಷಿತಾ (21) ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ನಾಲ್ವರೂ ಶುಕ್ರವಾರ (ಜೂ.07) ರಾತ್ರಿ ಮಹದೇಶ್ವರನ ಬೆಟ್ಟಕ್ಕೆ ಬಂದಿದ್ದಾರೆ. ಇಂದು (ಜೂ.08) ಬೆಳಗ್ಗೆ ಮಹದೇಶ್ವರನ ದರ್ಶನ ಪಡೆದಿದ್ದಾರೆ. ಮಹದೇಶ್ವರನ ದರ್ಶನ ಬಳಿಕ ತಾಳಬೆಟ್ಟಕ್ಕೆ ಹೋಗುವುದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಅದರಂತೆ ಕುಟುಂಬ ತಾಳಬೆಟ್ಟಕ್ಕೆ ಹೋಗಿದ್ದಾರೆ. ಅಲ್ಲಿ ನಾಲ್ವರೂ ವಿಷ ಸೇವಿಸಿದ್ದಾರೆ. ನಾಲ್ವರಲ್ಲಿ ಮಹದೇವನಾಯಕ ಎಂಬುವರು ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯಾಯ ಸಿಗದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

K.R.ನಗರ ತಾಲೂಕಿನ ಚೀರನಹಳ್ಳಿಯ ಯುವಕನಿಂದ ಬ್ಲ್ಯಾಕ್​ಮೇಲ್ ಮೃತ ಮಹದೇವನಾಯಕ ಮೊಮ್ಮಗಳನ್ನು‌ ಓರ್ವ ಯುವಕ ಪ್ರೀತಿಸುತ್ತಿದ್ದನು. ಈತ ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಆಕೆಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದನು. ಈ ಬಗ್ಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕುಟಂಬಸ್ಥರು ಮಾನ ಮರ್ಯಾದೆಗೆ ಅಂಜಿ ಮಹದೇಶ್ವರ ದರ್ಶನ ಪಡೆದು ಬಳಿಕ  ತಾಳಬೆಟ್ಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Sat, 8 June 24

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?