AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ನೆಲಕಚ್ಚಿದ್ದ ರೇಷ್ಮೆ ಕೃಷಿಗೆ ಸರ್ಕಾರದಿಂದ ಉತ್ತೇಜನ, ರೈತರಿಗೆ ಸಕಲ ಸವಲತ್ತು

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಕೃಷಿ ಒಂದು ಕಾಲದಲ್ಲಿ ಅತ್ಯಂತ ಫಲಪ್ರದವಾಗಿತ್ತು. ಆದರೆ, ಕಾಲಕ್ರಮೇಣ ಇದು ಕುಸಿಯಿತು. ಆದರೆ, ಇದೀಗ ರೇಷ್ಮೆ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಸಾಲ ಸೌಲಭ್ಯಗಳು ಮತ್ತು ತರಬೇತಿಯೊಂದಿಗೆ ರೈತರಿಗೆ ಬೆಂಬಲ ನೀಡುವ ಮೂಲಕ ರೇಷ್ಮೆ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಚಾಮರಾಜನಗರ: ನೆಲಕಚ್ಚಿದ್ದ ರೇಷ್ಮೆ ಕೃಷಿಗೆ ಸರ್ಕಾರದಿಂದ ಉತ್ತೇಜನ, ರೈತರಿಗೆ ಸಕಲ ಸವಲತ್ತು
ಪ್ರಾತಿನಿಧಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:May 17, 2025 | 2:44 PM

Share

ಚಾಮರಾಜನಗರ, ಮೇ 17: ಗಡಿ ಜಿಲ್ಲೆಯ ಚಾಮರಾಜನಗರ (Chamarajanagar) ಒಂದು ಕಾಲದಲ್ಲಿ ರೇಷ್ಮೆ ಕೃಷಿಗೆ (Sericulture) ಹೆಸರುವಾಸಸಿಯಾಗಿತ್ತು. ರೇಷ್ಮೆ ಕೃಷಿ ಅವಲಂಬಿಸಿ ಸಾಕಷ್ಟು ಕುಟುಂಬಗಳು ಬದುಕು ಕಟ್ಟಿಕೊಂಡಿದ್ದವು. ಆದರೆ ತದನಂತರ ಚಾಮರಾಜನಗರ, ಕೊಳ್ಳೇಗಾಲ ಭಾಗದಲ್ಲಿ ರೇಷ್ಮೆ ಬೇಸಾಯ ಕುಸಿದು ಹೋಗಿತ್ತು. ಇದೀಗ ಸರ್ಕಾರ ರೇಷ್ಮೆ ಕೃಷಿಗೆ ಮತ್ತೆ ಚೈತನ್ಯ ಕೊಡಲು ಮುಂದಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಯಳಂದೂರು ಭಾಗದಲ್ಲಿ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ರೇಷ್ಮೆ ವ್ಯವಸಾಯ ಮಾಡಲಾಗುತ್ತಿತ್ತು. ಕಾಲ ಕ್ರಮೇಣ ರೇಷ್ಮೆ ಬೇಸಾಯ ಮಾಡುವ ರೈತರ ಸಂಖ್ಯೆಯಲ್ಲಿ ಕೂಡ ತೀರಾ ಇಳಿಮುಖವಾಗಿದೆ. ಇದೀಗ ಸರ್ಕಾರ ಕೂಡ ರೇಷ್ಮೆ ಕೃಷಿಗೆ ಉತ್ತೇಜನ ನೀಡಲು ಮುಂದಾಗಿದೆ. ಅದಕ್ಕಾಗಿ ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೂಡ ಹಣ ನೀಡಲು ನಿರ್ಧರಿಸಲಾಗಿದೆ. ಅಲ್ಲದೆ ನೇಕಾರಿಕೆಗೆ ಕೂಡ ಉತ್ತೇಜನ ನೀಡಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: 900ಕ್ಕೂ ಹೆಚ್ಚು ರಾಸುಗಳು ಸಾವು

ಇದನ್ನೂ ಓದಿ
Image
ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: ರಾಸುಗಳ ಮರಣ ಮೃದಂಗ
Image
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Image
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
Image
ಬಂಡೀಪುರ ಸಫಾರಿಗೆ ಹೋಗುವ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದ ಅರಣ್ಯ ಇಲಾಖೆ

ಇನ್ನೂ ಪಶುಸಂಗೋಪನೆ ಹಾಗೂ ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್, ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಆ ಹಿನ್ನಲೆ ರೇಷ್ಮೆ ಕೃಷಿಯ ಗತವೈಭವವನ್ನು ಮತ್ತೆ ಸೃಷ್ಟಿಸುವ ಸಲುವಾಗಿ ರೇಷ್ಮೆ ಕೃಷಿಗೆ ಸರ್ಕಾರದಿಂದ ಕೊಡಬೇಕಾದ ಸವಲತ್ತುಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ಕೂಡ ನಡೆಸಿದ್ದಾರೆ.

ಕೊಳ್ಳೇಗಾಲದ ಮುಡಿಗುಂಡಂ ಬಳಿ ಈಗಾಗಲೇ ರೇಷ್ಮೆ ಮಾರುಕಟ್ಟೆ ಕೂಡ ಇದೆ. ಅಲ್ಲದೇ ಜಿಲ್ಲೆಯ ಬಹುತೇಕ ಕೆರೆಗಳಿಗೆ ನೀರು ತುಂಬಿಸುವ ಕೆಲಸಕ್ಕೂ ಕೂಡ ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಲು ಮುಂದಾಗಿದೆ. ಹೀಗಾಗಿ ಸಚಿವ ಕೆ. ವೆಂಕಟೇಶ್, ರೇಷ್ಮೆ ಕೃಷಿಯ ಹೊಸ ಆವಿಷ್ಕಾರಗಳ ಬಗ್ಗೆ ಚಿಂತಿಸಲು ಕೂಡ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಪೂಜೆ ವೇಳೆ ಬಲಭಾಗದಿಂದ ಹೂ ನೀಡಿದ ದೇವರು

ಒಟ್ಟಿನಲ್ಲಿ ಒಂದು ಕಾಲದಲ್ಲಿ ರೇಷ್ಮೆ ಬೇಸಾಯಕ್ಕೆ ಚಾಮರಾಜನಗರ ಜಿಲ್ಲೆ ಹೆಸರುವಾಸಿಯಾಗಿತ್ತು. ಆದರೆ ಕಾಲಕ್ರಮೇಣ ತನ್ನ ಗತವೈಭವವನ್ನು ಕಳೆದುಕೊಂಡಿತ್ತು. ಇದೀಗ ಮತ್ತೆ ರೇಷ್ಮೆ ಬೆಳೆ ಬೆಳೆಯಲು ಸಾಲ ಸೌಲಭ್ಯದ ಜೊತೆಗೆ ಅಗತ್ಯ ಮಾರ್ಗದರ್ಶನ ನೀಡಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:41 pm, Sat, 17 May 25

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ