ಚಾಮರಾಜನಗರ: ಪೊಲೀಸ್ ಕಾನ್ಸ್‌ಟೇಬಲ್​​ನಿಂದ ಲೈಂಗಿಕ ದೌರ್ಜನ್ಯ; ಮಹಿಳೆ ಆಸ್ಪತ್ರೆಗೆ ದಾಖಲು

ಚಾಮರಾಜನಗರದ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಮುನಿಯಪ್ಪ ಎಂಬಾತ ಜಿಲ್ಲಾಸ್ಪತ್ರೆಗೆ ಸಂಬಂಧಿಕರನ್ನ ನೋಡಲು ಬಂದಿದ್ದ ಯುವತಿಯನ್ನ ಪೊಲೀಸ್ ವಸತಿ ಗೃಹಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ

ಚಾಮರಾಜನಗರ: ಪೊಲೀಸ್ ಕಾನ್ಸ್‌ಟೇಬಲ್​​ನಿಂದ ಲೈಂಗಿಕ ದೌರ್ಜನ್ಯ; ಮಹಿಳೆ ಆಸ್ಪತ್ರೆಗೆ ದಾಖಲು
ಸಾಂದರ್ಭಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Jan 29, 2023 | 2:17 PM

ಚಾಮರಾಜನಗರ: ನಾಲ್ಕು ದಿನಗಳ ಹಿಂದೆ ಸಂಬಂಧಿಕರನ್ನು ನೋಡಲು ಜಿಲ್ಲಾಸ್ಪತ್ರೆಗೆ ಬಂದಿದ್ದ ಮಹಿಳೆಯನ್ನು ಪೊಲೀಸ್​ ಕಾನ್ಸ್‌ಟೇಬಲ್ ಪುಸಲಾಯಿಸಿ ತನ್ನ ಜೊತೆ ಪೊಲೀಸ್ ವಸತಿ ಗೃಹಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ತಾನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ನಲ್ಲಿಯ ಮೇಲೆ ಬಿದ್ದು ಜನನೇಂದ್ರಿಯ ಗಾಯಗೊಂಡಿರುವುದಾಗಿ ಜಿಲ್ಲಾ ಸರ್ಜನ್ ಕೃಷ್ಣಪ್ರಸಾದ್ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಮುನಿಯಪ್ಪನನ್ನ ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದ ಹಿನ್ನೆಲೆ ಅಮಾನತು ಮಾಡಲಾಗಿದೆ. ಇದುವರೆಗೂ ಪೊಲೀಸ್ ಕಾನ್ಸ್‌ಟೇಬಲ್ ವಿರುದ್ದ ಮಹಿಳೆ ದೂರು ನೀಡಿಲ್ಲ. ಅಲ್ಲದೆ ಮಹಿಳೆ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದು, ಪೊಲೀಸ್ ಕಾನ್ಸ್‌ಟೇಬಲ್ ವಿರುದ್ದ ಸದ್ಯ ಯಾವುದೇ ಎಫ್ಐ ಆರ್ ಆಗಿಲ್ಲ. ವೈದ್ಯರು ನೀಡುವ ವರದಿಯ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಡಿಷನಲ್ ಎಸ್ಪಿ ಉದೇಶ್ ಹೇಳಿದ್ದಾರೆ.

ಕೊಚಕಟ್ಟೆ ಬಳಿ ಆಟೋ ಪಲ್ಟಿ-ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಕೊಚಕಟ್ಟೆ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದದ್ದು, ಆಟೋದಲ್ಲಿದ್ದ ಪ್ರಯಾಣಿಕರನ್ನ ಕೂಡಲೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು ಕುದೂರು ಮೂಲದ ಪ್ರಯಾಣಿಕ ಅಕ್ರಮ್ ಪಾಷಾ(39) ಸಾವನ್ನಪ್ಪಿದ್ದಾನೆ. ಚಾಲಕ ಸುರೇಶ್, ಪ್ರಯಾಣಿಕ ಇದಾಯತ್ ಉಲ್ಲಾ ಅವರಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ. ಈ ಕುರಿತು ದಾಬಸ್​ಪೇಟೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:00 pm, Sun, 29 January 23

Web contact

TV9 Kannada

Read More
Follow Us