AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ವಾಡಿ ದುರಂತದಲ್ಲಿ ಬದುಕಿದವರಿಗೆ ನರಕಯಾತನೆ: 6 ವರ್ಷ ಕಳೆದರೂ ಕಾಡುತ್ತಿದೆ ಅನಾರೋಗ್ಯ

ಮಾರಮ್ಮನ ದೇಗುಲದ ಪ್ರಸಾದ ಜನರ ಪ್ರಾಣವನ್ನೇ ತೆಗೆದಿತ್ತು. ಟೊಮ್ಯಾಟೋ ಬಾತ್​​ ವಿಷವಾಗಿತ್ತು. ಮಕ್ಕಳು, ಮಹಿಳೆಯರು, ಪುರುಷರು. ವೃದ್ಧರು ನರಳಾಡಿ ನರಳಾಡಿ ಉಸಿರು ಚೆಲ್ಲಿದ್ದರು. ಕೀಚಕರ ಕೃತ್ಯ ಕುಟುಂಬಗಳನ್ನೇ ಸರ್ವನಾಶ ಮಾಡಿತ್ತು. ಇದೀಗ 6 ವರ್ಷ ಕಳೆದರೂ ಸುಳ್ವಾಡಿಯ ವಿಷ ಪ್ರಸಾದದ ನೋವು ಇನ್ನೂ ಕಡಿಮೆ ಆಗಿಲ್ಲ. ಅಂದು ಪ್ರಸಾದ ಸೇವಿಸಿದ್ದ ಭಕ್ತರು ಇಂದಿಗೂ ನರಕ ಅನುಭವಿಸುತ್ತಿದ್ದಾರೆ.

ಸುಳ್ವಾಡಿ ದುರಂತದಲ್ಲಿ ಬದುಕಿದವರಿಗೆ ನರಕಯಾತನೆ: 6 ವರ್ಷ ಕಳೆದರೂ ಕಾಡುತ್ತಿದೆ ಅನಾರೋಗ್ಯ
ಸುಳ್ವಾಡಿ ದುರಂತದ ಸಂದರ್ಭದ ಸಂಗ್ರಹ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jan 24, 2025 | 6:56 AM

Share

ಚಾಮರಾಜನಗರ, ಜನವರಿ 24: ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಮಾರಮ್ಮನ ದೇಗುಲದಲ್ಲಿ ಪ್ರಸಾದಕ್ಕೆ ವಿಷ ಹಾಕಿದ್ದರಿಂದಿಂದಾಗಿ 2018 ರ ಡಿಸೆಂಬರ್ 14 ರಂದು 17 ಮಂದಿ ಸಾವಿಗೀಡಾಗಿದ್ದರು. 120 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ಸುಳ್ವಾಡಿ ಪ್ರಾಸಾದ ದುರಂತ ಸಂಭವಿಸಿ 6 ವರ್ಷದ ಕಳೆದರೂ ಸಂತ್ರಸ್ತರ ಗೋಳು ಮಾತ್ರ ಹೇಳತೀರದಾಗಿದೆ. ಅನಾರೋಗ್ಯ ಪೀಡೀತರ ಬಗ್ಗೆ ಆರೋಗ್ಯ ಇಲಾಖೆ ಕಾಳಜಿ ವಹಿಸಿದೆ. ಆದರೂ ಸಂತ್ರಸ್ತರು ಇಂದಿಗೂ ಮೈಕೈ ನೋವು, ತಲೆನೋವು, ವಾಂತಿ, ಬೇಧಿ, ದೃಷ್ಟಿಹೀನತೆ ಸೇರಿದಂತೆ ನಾನಾ ರೀತಿಯ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಆರೋಗ್ಯ ಸಮಸ್ಯೆಗಳಿಂದಾಗಿ ಕೂಲಿ ಕೆಲಸ ಮಾಡುವುದಕ್ಕೆ ಆಗುತ್ತಿಲ್ಲ. ಆರೋಗ್ಯ ಸಮಸ್ಯೆಯಿಂದ ಬದುಕೇ ಸರ್ವನಾಶವಾಗಿದೆ ಎಂದು ಸಂತ್ರಸ್ತರು ಕಣ್ಣೀರು ಹಾಕುತ್ತಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಹನೂರು ತಾಲೂಕಿನ ಎಂಜಿ ದೊಡ್ಡಿಯ 23 ಮಂದಿಯನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯರು, ಪುರುಷರು, ಮಕ್ಕಳು, ವೃದ್ಧೆಯರ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ. ಆದರೆ, ಪ್ರಾಣಕ್ಕೆ ಹಾನಿಯಾಗುವ ಯಾವುದೇ ಸಮಸ್ಯೆಗಳು ಇಲ್ಲ. ಮನೋರೋಗದ ಸಮಸ್ಯೆಯಿಂದಾಗಿ ಅವರಿಗೆ ಈ ರೀತಿ ಆಗುತ್ತಿದೆ ಎಂದು ವೈದ್ಯ ಮಹೇಶ್ ಹೇಳಿದ್ದಾರೆ.

ಏನೇ ಆದರೂ ಕಿಚ್ಚಗುತ್ತಿ ಮಾರಮ್ಮನ ದೇಗುದಲ್ಲಿ ವಿಷ ಪ್ರಸಾದವನ್ನು ತಿಂದು ಪ್ರಾಣ ಉಳಿಸಿಕೊಂಡವರ ಕಥೆ ಕರುಣಾಜನಕವಾಗಿದೆ. ನಿತ್ಯ ನರಕ ಅನುಭವಿಸ್ತಾ ಕಣ್ಣೀರು ಹಾಕುವಂತಾಗಿದೆ.

ಆಡಳಿತ ಗೊಂದಲ, ಸಂಘರ್ಷಕ್ಕೆ 17 ಅಮಾಯಕ ಜೀವಗಳು ಬಲಿ

ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚಗುತ್ತಿ ಮಾರಮ್ಮ ದೇವಲಯಕ್ಕೆ ಉತ್ತಮ ಆದಾಯ ಬರುತ್ತಿದ್ದು, ಆಡಳಿತ ಮಂಡಳಿಯಲ್ಲಿ ಹಿಡಿತಕ್ಕೆ ಎರಡು ಬಣಗಳ ನಡುವೆ ಸಂಘರ್ಷ ಇತ್ತು. ಮಂಡಳಿ ಇಬ್ಭಾಗವಾಗಿತ್ತು. ಇಂಥ ಸಂದರ್ಭದಲ್ಲೇ ನೂತನ ಗೋಪುರ ನಿರ್ಮಾಣಕ್ಕೆ ಶಂಕುಸ್ಥಾಪನೆ, ಪೂಜೆ ಹಮ್ಮಿಕೊಳ್ಳಲಾಗಿತ್ತು. ಆ ಸದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಹೆಸರು ಕೆಡಿಸಬೇಕು ಹಾಗೂ ಗೋಪುರ ನಿರ್ಮಾಣ ತಡೆ ಹಿಡಿಯಬೇಕೆಂಬ ಉದ್ದೇಶದಿಂದ ಕೆಲವರು ಪ್ರಸಾದಕ್ಕೆ ಕ್ರಿಮಿನಾಶಕ ಬೆರೆಸಿದ್ದರು.

ಇದನ್ನೂ ಓದಿ: ಚಾಮರಾಜನಗರ: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿಗೆ ಬಿದ್ದ ವ್ಯಕ್ತಿ! ಆಮೇಲೇನಾಯ್ತು…

ಪ್ರಸಾದಕ್ಕೆ ವಿಷ ಬೆರೆಸಿದ ಪರಿಣಾಮ ಅದನ್ನು ಸೇವಿಸಿದ 17 ಮಂದಿ ಮೃತಪಟ್ಟು, 120ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದರು. ಅಸ್ವಸ್ಥರ ಪೈಕಿ ಅನೇಕರು ಇಂದಿಗೂ ಅನಾರೋಗ್ಯ ಎದುರಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು