AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕೂಂಬಿಂಗ್ ಕಿಂಗ್​​ ಎಷ್ಟೇ ತಡಕಾಡಿದ್ರು ಪತ್ತೆಯಾಗದ ಹುಲಿ, ಅರಣ್ಯಾಧಿಕಾರಿಗಳೊಂದಿಗೆ ವ್ಯಾಘ್ರನ ಕಣ್ಣಾ ಮುಚ್ಚಾಲೆ!

ಕಳೆದ ಒಂದು ತಿಂಗಳಿನಿಂದಲ್ಲೂ‌ ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಗಳು ಪ್ರತ್ಯೇಕ್ಷಗೊಂಡು ಜನರಲ್ಲಿ ಆತಂಕ ಮೂಡಿಸಿವೆ. ಹುಲಿ ಸೆರೆ ಹಿಡಿಯದಿದ್ದರೆ ಅನ್ಯ ಮಾರ್ಗ ಹಿಡಿಯುವುದಾಗಿ ಇತ್ತೀಚೆಗೆ ರೈತರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅರಣ್ಯಾಧಿಕಾರಿಗಳಿಂದ ಮೂರು ದಿನ ಕೂಂಬಿಂಗ್ ಮಾಡಿದರೂ ಹುಲಿಯ ಒಂದೇ ಒಂದು ಸುಳಿವು ಪತ್ತೆಯಾಗಿಲ್ಲ.

ಚಾಮರಾಜನಗರ: ಕೂಂಬಿಂಗ್ ಕಿಂಗ್​​ ಎಷ್ಟೇ ತಡಕಾಡಿದ್ರು ಪತ್ತೆಯಾಗದ ಹುಲಿ, ಅರಣ್ಯಾಧಿಕಾರಿಗಳೊಂದಿಗೆ ವ್ಯಾಘ್ರನ ಕಣ್ಣಾ ಮುಚ್ಚಾಲೆ!
ಹುಲಿ ಪತ್ತೆಗೆ ಕೂಂಬಿಂಗ್
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 08, 2025 | 3:03 PM

Share

ಚಾಮರಾಜನಗರ, ಸೆಪ್ಟೆಂಬರ್​ 08: ಆಗಾಗ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿ ಕಣ್ಮರೆಯಾಗುತ್ತಿರುವ ಹುಲಿ (tiger) ಸೆರೆಗೆ ಅರಣ್ಯಾಧಿಕಾರಿಗಳು ಅದೆಷ್ಟೇ ಕೂಂಬಿಂಗ್ (Combing) ನಡೆಸಿದರೂ ಒಂದೇ ಒಂದು ಸುಳಿವು ಪತ್ತೆಯಾಗುತ್ತಿಲ್ಲ. ಇತ್ತ ವ್ಯಾಘ್ರ ಅರಣ್ಯಾಧಿಕಾರಿಗಳ ಜೊತೆ ಕಣ್ಣಾಮುಚ್ಚಾಲೇ ಆಟವಾಡುತ್ತಿದ್ದರೆ, ಅತ್ತ 62 ಮಂದಿ ಅರಣ್ಯ ಸಿಬ್ಬಂದಿ ರೋಸಿ ಹೋಗಿದ್ದಾರೆ.

ಗಡಿ ನಾಡು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದಯ್ಯನ ಹುಂಡಿ ಗ್ರಾಮದಲ್ಲಿ ಕಳೆದೊಂದು ತಿಂಗಳಿನಿಂದ ಬಿಟ್ಟು ಬಿಡದೇ ಆಗಾಗ ಪ್ರತ್ಯೇಕ್ಷವಾಗಿ, ಕಾಡಂದಿ ಬೇಟೆಯಾಡಿ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ಹುಲಿಯ ಸೆರೆಗೆ ಈಗ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಸಿಬ್ಬಂದಿ ಮುಂದಾಗಿದ್ದಾರೆ. ಆದರೆ ಬರೋಬ್ಬರಿ 3 ದಿನ ಕಳೆದರೂ ವ್ಯಾಘ್ರನ ಒಂದೇ ಒಂದು ಸುಳಿವು ಸಿಗದೆ ಇರುವುದು ಈಗ ಅರಣ್ಯ ಸಿಬ್ಬಂದಿಗೆ ತಲೆ ನೋವು ತಂದೊಡ್ಡಿದೆ.

ಇದನ್ನೂ ಓದಿ: ಚಾಮರಾಜನಗರ: ಹುಲಿ ಸೆರೆಗೆ ಮುಂದಾಗದಿದ್ರೆ ಮತ್ತೊಂದು ದುರಂತ ಸಂಭವಿಸುತ್ತಾ? ಅರಣ್ಯ ಇಲಾಖೆಗೆ ರೈತರ ಎಚ್ಚರಿಕೆ ಏನು?

ಇದನ್ನೂ ಓದಿ
Image
ಹುಲಿಗಳ ಅಸಹಜ ಸಾವು: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
Image
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
Image
ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ
Image
ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಕೂಂಬಿಂಗ್ ಕಿಂಗ್ ಎಂದೇ ಖ್ಯಾತಿಯ ರಾಮಾಪುರ ಆನೆ ಬಿಡಾರದ ಕಪ್ತಾನ ರೋಹಿತ್​​,​ ಮದ್ದಯ್ಯನಹುಂಡಿ, ಬೇರಂಬಾಡಿ, ಚೆನ್ನಮಲ್ಲಿಪುರ ವ್ಯಾಪ್ತಿಯಲ್ಲಿ ಆನೆಯ ಸಹಾಯದೊಂದಿಗೆ ಹುಲಿ ಸೆರೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಜೊತೆಗೆ ಡ್ರೋನ್ ಕೂಡ ಬಳಕೆ ಮಾಡಲಾಗಿದೆ. ಕೆರೆ ಬಳಿ ರೈತರಿಗೆ ಹುಲಿ ಕಾಣಿಸಿಕೊಂಡ ಹಿನ್ನೆಲೆ ಅರಣ್ಯ ಇಲಾಖೆಗೆ ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು. ಇದರಿಂದ ಎಸಿಎಫ್ ಸುರೇಶ್ ನೇತೃತ್ವದಲ್ಲಿ ಕೂಂಬಿಂಗ್​ ಆರಂಭಿಸಲಾಯಿತಾದರೂ ಇದೀಗ ಯಾವುದೇ ಪ್ರಯೋಜನಕ್ಕೆ ಬಂದಿಲ್ಲ.

ಚೆನ್ನಮಲ್ಲಿಪುರ, ಬೇರಂಬಾಡಿ ಭಾಗದಲ್ಲಿ ಹುಲಿಯ ಹೆಜ್ಜೆ ಗುರುತು ಕಂಡುಬಂದಿದ್ದು, ಇದನ್ನು ಆಧರಿಸಿ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ. ವಾಸೀಂ ಮಿರ್ಜಾ ಹಾಗೂ ಡಿಆರ್​​ಎಫ್​ ರವಿ, ಗುಂಡ್ಲುಪೇಟೆ ಡಿಆರ್​​ಎಫ್ ಶಿವಕುಮಾರ್, ಎಸ್​​ಟಿಪಿಎಫ್​​ಆರ್​​ಎಫ್​ಓ ವೈರಮುಡಿ ಸೇರಿದಂತೆ ಒಟ್ಟು 62 ಮಂದಿ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ

ಒಟ್ಟಿನಲ್ಲಿ ಕಳೆದ ಒಂದು ತಿಂಗಳಿನಿಂದಲ್ಲೂ‌ ಕಾಡು ಬಿಟ್ಟು ಗ್ರಾಮಗಳತ್ತ ಓಡಾಟ ನಡೆಸುತ್ತಿರುವ ಹುಲಿಯನ್ನು ಆದಷ್ಟು ಬೇಗ ಸೆರೆ ಹಿಡಿಯುವ ಯಾವುದೇ ಅನಾಹುತವಾಗದಿದ್ದರೆ ಸಾಕು ಎಂಬುದು ನಮ್ಮ ಆಶಯ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ